‘ಮಕ್ಕಳ ಸಮಗ್ರ ಅಭಿವೃದ್ಧಿಗೆ ಸರ್ವರ ಸಹಕಾರ ಅತ್ಯಗತ್ಯ’


Team Udayavani, Jan 19, 2019, 6:56 AM IST

19-january-7.jpg

ಕೇಪು: ದ.ಕ. ಜಿ.ಪಂ., ಮಾಧ್ಯ ಮಿಕ ಶಿಕ್ಷಣ ಅಭಿಯಾನ, ಬಂಟ್ವಾಳ ತಾ| ಶಿಕ್ಷಣಾಧಿಕಾರಿಯವರ ಕಚೇರಿ ಆಶ್ರಯ ದಲ್ಲಿ ಕೇಪು ಗ್ರಾಮದ ಕಲ್ಲಂಗಳ ಸರಕಾರಿ ಪ್ರೌಢಶಾಲೆಯಲ್ಲಿ ಸರಕಾರದಿಂದ ಮಂಜೂ ರಾದ 13 ಲಕ್ಷ ರೂ. ಅನುದಾನದಲ್ಲಿ ನಿರ್ಮಿ ಸಿದ ಎರಡು ನೂತನ ಕೊಠಡಿಗಳ ಉದ್ಘಾಟನ ಸಮಾರಂಭ ನಡೆಯಿತು.

ಮುಖ್ಯ ಅತಿಥಿಯಾಗಿದ್ದ ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸರಕಾರದೊಂದಿಗೆ ಜನ ಪ್ರತಿನಿಧಿಗಳು, ಹೆತ್ತವರು, ಶಿಕ್ಷಕರೆಲ್ಲರ ಸಹಕಾರ ಅತ್ಯಗತ್ಯ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅನೇಕ ಯೋಜನೆಗಳನ್ನು ಸರಕಾರ ಜಾರಿಗೆ ತಂದಿದೆ. ಇದು ಯಶಸ್ವಿ ಯಾಗಬೇಕಾದರೆ ಹೆತ್ತವರ, ಶಿಕ್ಷಕರ ಹಾಗೂ ಊರವರ ಪ್ರಯತ್ನಗಳು ಬೇಕು. ಮಕ್ಕಳಲ್ಲಿ ಒಳ್ಳೆಯ ಸಂಸ್ಕೃತಿಯನ್ನು ಬೆಳೆಸಬೇಕು ಮತ್ತು ವಿದ್ಯಾಭ್ಯಾಸ ಕುಂಠಿತ ವಾಗದಂತೆ ನಾವು ನೋಡಬೇಕು ಎಂದು ಹೇಳಿದರು. ಇದೇ ಸಂದರ್ಭ ಅವರು ಶಾಲಾ ಸಂಚಿಕೆ ‘ಮಾನಸ’ವನ್ನು ಬಿಡುಗಡೆಗೊಳಿಸಿದರು.

ಕೇಪು ಗ್ರಾ.ಪಂ. ಅಧ್ಯಕ್ಷ ತಾರಾನಾಥ ಆಳ್ವ ಕುಕ್ಕೆಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯೆ ಜಯಶ್ರೀ ಕೋಡಂದೂರು ಕೊಠಡಿ ಉದ್ಘಾಟಿಸಿ, ಶುಭ ಹಾರೈಸಿದರು. ಬಂಟ್ವಾಳ ತಾ.ಪಂ. ಸಾಮಾಜಿಕ ನ್ಯಾಯ ಮತ್ತು ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ತಾ.ಪಂ. ಸದಸ್ಯೆ ಕವಿತಾ ಸುಬ್ಬ ನಾಯ್ಕ, ಕೇಪು ಗ್ರಾ.ಪಂ. ಸದಸ್ಯರಾದ ನಿರಂಜನ, ರತ್ನಾ ಮತ್ತು ದಿವ್ಯಾ ಉಪಸ್ಥಿತರಿದ್ದರು.

ಶಾಲಾ ಪ್ರತಿಭಾನ್ವಿತ ಮಕ್ಕಳಿಗೆ ಬಹುಮಾನ ಗಳನ್ನು ವಿತರಿಸಲಾಯಿತು. ಗೌರವ ಶಿಕ್ಷಕರಿಗೆ ಗುರುವಂದನೆ, ಶಾಲಾಭಿವೃದ್ಧಿಯಲ್ಲಿ ಸಹಕರಿಸಿದವ ರಿಗೆ ಗೌರವ ನಮನ ಸಲ್ಲಿಸಲಾಯಿತು. ಮುಖ್ಯ ಶಿಕ್ಷಕಿ ಮಾಲತಿ ಕೆ. ವರದಿ ವಾಚಿಸಿದರು. ಎಸ್‌.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಬಾಲಚಂದ್ರ ನಾಯಕ್‌ ಸ್ವಾಗತಿಸಿ, ಶಿಕ್ಷಕ ಲಕ್ಷ್ಮಣ ಟಿ. ನಾಯ್ಕ ವಂದಿಸಿದರು. ಶಿಕ್ಷಕ ಕೆ.ಜಿ. ಸುಬ್ರಹ್ಮಣ್ಯ ಭಟ್ ನಿರೂಪಿಸಿದರು. ಸಹಶಿಕ್ಷಕರಾದ ಗೌರಿದೇವಿ, ಪುಷ್ಪಾ ಪಿ., ರಮೇಶ್‌ ಡಿ., ಗೋಪಾಲಕೃಷ್ಣ ಭಟ್ ಎಂ., ಪೂರ್ಣಿಮಾ, ದೀಪ್ತಿ, ಗೀತಾ ಸಹಕರಿಸಿದರು. ಅನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ರಂಗ ಕಲಾವಿದ ಮತ್ತು ನಿರ್ದೇಶಕ ಉದಯ ಸಾರಂಗ ಅವರ ಮಾರ್ಗದರ್ಶನದಲ್ಲಿ ‘ನಾವು ಅವರಲ್ಲ’, ಮೂರ್ತಿ ದೇರಾಜೆ ವಿರಚಿತ ‘ಕಪ್ಪು ಕಾಗೆ’ ನಾಟಕಗಳನ್ನು ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.