ಕೆಪಿಟಿಸಿಎಲ್ ನೌಕರರ ಕ್ರೀಡಾಕೂಟಕ್ಕೆ ತೆರೆ
Team Udayavani, Jan 19, 2019, 7:17 AM IST
ಕಲಬುರಗಿ: ಕ್ರೀಡಾಕೂಟದಲ್ಲಿ ಸೋಲು ಮತ್ತು ಗೆಲುವು ಮುಖ್ಯವಲ್ಲ ಉತ್ಸಾಹದಿಂದ ಪಾಲ್ಗೊಳ್ಳುವುದು ಮುಖ್ಯ ಎಂದು ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ (ಜೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕಿ ಡಾ| ಆರ್. ರಾಗಪ್ರಿಯ ತಿಳಿಸಿದರು.
ಜೆಸ್ಕಾಂ ಹಾಗೂ ಕೆಪಿಟಿಸಿಎಲ್ ಸಹಯೋಗದಲ್ಲಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ವಿದ್ಯುತ್ ವಿತರಣಾ ಕಂಪೆನಿಗಳ ನೌಕರರ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ನಿತ್ಯದ ಕೆಲಸದ ಒತ್ತಡದಿಂದ ಹೊರ ಬರಲು ಕ್ರೀಡೆಗಳು ಸಹಕಾರಿ. ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದರಿಂದ ಸ್ಪರ್ಧಾತ್ಮಕ ಮನೋಭಾವ ಬೆಳೆಯುವುದರ ಜತೆಗೆ ದೈಹಿಕವಾಗಿ ಸದೃಢರಾಗಿರಲು ಸಾಧ್ಯವಾಗುತ್ತದೆ ಎಂದರು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಧಾನ ಕಾರ್ಯದರ್ಶಿ ಎನ್. ಕೆಂಪೇಗೌಡ ಮಾತನಾಡಿ, ನೌಕರರ ಕ್ರೀಡಾಕೂಟಗಳು ಬಾಲ್ಯವನ್ನು ನೆನಪಿಸುವಂತಾಗಿದ್ದು, ಕ್ರೀಡೆಗಳಿಂದ ನೌಕರರಲ್ಲಿ ಬಾಂಧವ್ಯ ಮೂಡಿಸಲು ಸಾಧ್ಯ ಇದೆ ಎಂದು ಹೇಳಿದರು. ಎರಡು ದಿನಗಳ ಕ್ರೀಡಾಕೂಟದಲ್ಲಿ ವಾಲಿಬಾಲ್, ಬ್ಯಾಸ್ಕೆಟ್ಬಾಲ್, ಲಾನ್ ಟೆನಿಸ್ ಮತ್ತು ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗಳು ನಡೆದವು. ಜೆಸ್ಕಾಂ (ಗುಲಬರ್ಗಾ), ಹೆಸ್ಕಾಂ (ಹುಬ್ಬಳ್ಳಿ), ಮೆಸ್ಕಾಂ (ಮಂಗಳೂರು), ಸೆಸ್ಕಾಂ (ಚಾಮುಂಡೇಶ್ವರಿ) ಹಾಗು ಬೆಸ್ಕಾಂ (ಬೆಂಗಳೂರು) ನಿಗಮಗಳ ನೌಕರರು ಪಾಲ್ಗೊಂಡಿದ್ದರು. ಜೆಸ್ಕಾಂನ ಪ್ರಭಾರ ಮುಖ್ಯ ಇಂಜಿನಿಯರ್ ಹಾಗೂ ಕ್ರೀಡಾ ಸಮಿತಿ ಅಧ್ಯಕ್ಷೆ ಜೋಶಿ ಸುನಂದಾ, ತಾಂತ್ರಿಕ ನಿರ್ದೇಶಕ ಅನಿಲಕುಮಾರ ಬಬಲೇಶ್ವರ, ನೌಕರರ ಸಂಘದ ಉಪಾಧ್ಯಕ್ಷ ನೀಲಪ್ಪ ಎಸ್.ಧೋತ್ರೆ ಹಾಗೂ ಅಧಿಕಾರಿಗಳಿದ್ದರು.
ವಿಜೇತ ತಂಡಗಳಿಗೆ ಪ್ರಶಸ್ತಿ ವಿತರಣೆ
ಲಾನ್ ಟೆನಿಸ್ ಸ್ಪರ್ಧೆಯಲ್ಲಿ ಮೆಸ್ಕಾಂ ತಂಡ, ಬಾಲ್ ಬ್ಯಾಡ್ಮಿಂಟನ್ನಲ್ಲಿ ಬೆಸ್ಕಾಂ ತಂಡ, ವಾಲಿಬಾಲ್ನಲ್ಲಿ ಸೆಸ್ಕಾಂ ತಂಡ ಹಾಗೂ ಬಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ಸೆಸ್ಕಾಂ ತಂಡ ಗೆಲುವು ಸಾಧಿಸಿ ಪ್ರಶಸ್ತಿ ಗೆದ್ದುಕೊಂಡವು. ವಿಜೇತ ತಂಡಗಳಿಗೆ ಡಾ| ಆರ್. ರಾಗಪ್ರಿಯ ಟ್ರೋಫಿ ಹಾಗೂ ಪ್ರಶಸ್ತಿಪತ್ರ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು