ಮಂಗನ ಕಾಯಿಲೆ ಮುಂಜಾಗ್ರತಾ ಕ್ರಮ ಅಗತ್ಯ: ಡಾ| ಪ್ರತಾಪ್ ಕುಮಾರ್
Team Udayavani, Jan 20, 2019, 1:00 AM IST
ತೆಕ್ಕಟ್ಟೆ: ಕುಂದಾಪುರ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿ ಅವರ ಮಾರ್ಗದರ್ಶನದಂತೆ ಆರೋಗ್ಯ ಇಲಾಖೆ ಮತ್ತು ಗ್ರಾ.ಪಂ. ಕೊರ್ಗಿ ಅವರ ವತಿಯಿಂದ ಮಂಗನ ಕಾಯಿಲೆ ಹರಡದಂತೆ ಮಂಜಾಗ್ರತೆ ಮಾಹಿತಿ ಶಿಬಿರವು ಗ್ರಾ.ಪಂ. ಸಭಾಭವನದಲ್ಲಿ ಜ. 17ರಂದು ನಡೆಯಿತು.
ಈ ಸಂದರ್ಭ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕೆ. ಪ್ರತಾಪ್ ಕುಮಾರ್ ಮಾತನಾಡಿ, ಕೊರ್ಗಿ ಪರಿಸರದಲ್ಲಿ ಇದುವರೆಗೆ ಮಂಗನ ಕಾಯಿಲೆ ಪ್ರಕರಣಗಳು ಕಂಡು ಬಂದಿಲ್ಲ. ಆದರೂ ಕೊರ್ಗಿ ಸುತ್ತಮುತ್ತಲ ಗ್ರಾಮಗಳು ಅರಣ್ಯ ಪ್ರದೇಶಕ್ಕೆ ಹೊಂದಿ ಕೊಂಡಿರುವುದರಿಂದ ಮುಂಜಾಗ್ರತೆ ಮುಖ್ಯ ಎಂದು ಹೇಳಿದರು.
ಈ ಸಂದರ್ಭ ಕೊರ್ಗಿ ಗ್ರಾ.ಪಂ. ಅಧ್ಯಕ್ಷೆ ಗಂಗೆ ಕುಲಾಲ್ತಿ, ಉಪಾಧ್ಯಕ್ಷ ಗೌರೀಶ ಹೆಗ್ಡೆ , ತೋಟಗಾರಿಕಾ ಇಲಾಖೆಯ ಸಹಾಯಕ ಅಧಿಕಾರಿ ಮಧುಕರ್, ಗ್ರಾ.ಪಂ. ಸದಸ್ಯರು, ಪ್ರವೀಣ, ಮೋಹನ ಚಂದ್ರ, ಶಿಲ್ಪಾ ಉಪಸ್ಥಿತರಿದ್ದರು.
ಪಿಡಿಒ ಸುಧಾಕರ ಶೆಟ್ಟಿ ಗುಡ್ಡಮ್ಮಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾ.ಪಂ. ಸಿಬಂದಿ ವರ್ಗ ಸಹಕರಿಸಿದರು. ಕಾರ್ಯದರ್ಶಿ ದಿನೇಶ ಶೆಟ್ಟಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್