ರಣಜಿ ಸೆಮಿಫೈನಲ್‌ಗೆ ವೇದಿಕೆ ಸಜ್ಜು​​​​​​​


Team Udayavani, Jan 20, 2019, 12:30 AM IST

ranji.jpg

ಬೆಂಗಳೂರು: ಪ್ರಸಕ್ತ ಋತುವಿನ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ಸೆಮಿಫೈನಲ್‌ ಸಮರಕ್ಕೆ ವೇದಿಕೆ ಸಜ್ಜುಗೊಂಡಿದೆ. ಮೊದಲ ಸೆಮಿಫೈನಲ್‌ನಲ್ಲಿ ವಿದರ್ಭ-ಕೇರಳ ಮುಖಾಮುಖೀಯಾಗಲಿದ್ದು, ಇನ್ನೊಂದು ಉಪಾಂತ್ಯ ಕರ್ನಾಟಕ-ಸೌರಾಷ್ಟ್ರ ನಡುವೆ ನಡೆಯಲಿದೆ. ಎರಡೂ ಪಂದ್ಯಗಳು ಜ. 24ರಿಂದ ಆರಂಭವಾಗಲಿವೆ. ತಾಣಗಳನ್ನು ಶೀಘ್ರವೇ ನಿರ್ಧರಿಸಲಾಗುವುದು.

ತವರಿನ ಎಂ. ಚಿನ್ನಸ್ವಾಮಿ ಅಂಗಳದಲ್ಲಿ ರಾಜಸ್ಥಾನವನ್ನು ಮಣಿಸಿದ ಕರ್ನಾಟಕ ಶುಕ್ರವಾರವೇ ಸೆಮಿಫೈನಲ್‌ಗೆ ನೆಗೆದಿತ್ತು. ಇದಕ್ಕೂ ಮುನ್ನ ವಯನಾಡ್‌ನ‌ಲ್ಲಿ ಬಲಿಷ್ಠ ಗುಜರಾತ್‌ ವಿರುದ್ಧ ಜಬರ್ದಸ್ತ್ ಪ್ರದರ್ಶನ ನೀಡಿದ ಕೇರಳ ಮೊದಲ ಸಲ ರಣಜಿ ಸೆಮಿಫೈನಲ್‌ಗೆ ಲಗ್ಗೆ ಇರಿಸಿ ಇತಿಹಾಸ ನಿರ್ಮಿಸಿತ್ತು. ಶನಿವಾರ ವಿದರ್ಭ ಮತ್ತು ಸೌರಾಷ್ಟ್ರ ತಂಡಗಳು ಜಯಭೇರಿ ಮೊಳಗಿಸಿ ಮುನ್ನಡೆ ಸಾಧಿಸಿದವು.

ಸೌರಾಷ್ಟ್ರ ಭರ್ಜರಿ ಚೇಸಿಂಗ್‌
ಲಕ್ನೊ:
ಆತಿಥೇಯ ಉತ್ತರಪ್ರದೇಶ ನೀಡಿದ 372 ರನ್ನುಗಳ ಗೆಲುವಿನ ಗುರಿಯನ್ನು ದಿಟ್ಟ ರೀತಿಯಲ್ಲಿ ನಿಭಾಯಿಸಿದ ಸೌರಾಷ್ಟ್ರ 6 ವಿಕೆಟ್‌ಗಳ ಜಯಭೇರಿ ಮೊಳಗಿಸಿತು. 4ನೇ ದಿನದ ಅಂತ್ಯಕ್ಕೆ 2 ವಿಕೆಟಿಗೆ 195 ರನ್‌ ಗಳಿಸಿದಾಗಲೇ ಸೌರಾಷ್ಟ್ರ ಸಿಡಿದು ನಿಲ್ಲುವ ಸೂಚನೆ ಲಭಿಸಿತ್ತು. ಇದು ನಿಜವಾಯಿತು.

ಆರಂಭಕಾರ ಹಾರ್ವಿಕ್‌ ದೇಸಾಯಿ 116 ರನ್‌ ಬಾರಿಸಿದರೆ, ಜತೆಗಾರ ಸ್ನೆಲ್‌ ಪಟೇಲ್‌ 72 ರನ್‌ ಹೊಡೆದರು. ಮಧ್ಯಮ ಕ್ರಮಾಂಕದ ಆಟಗಾರರಾದ ವಿಶ್ವರಾಜ್‌ ಜಡೇಜ 35, ಕಮಲೇಶ್‌ ಮಕ್ವಾನಾ 7 ರನ್‌ ಮಾಡಿ ನಿರ್ಗಮಿಸಿದರು.ಮುಂದಿನದು ಟೆಸ್ಟ್‌ ಸ್ಪೆಷಲಿಸ್ಟ್‌ ಚೇತೇಶ್ವರ್‌ ಪೂಜಾರ ಮತ್ತು ಶೆಲ್ಡನ್‌ ಜಾಕ್ಸನ್‌ ಅವರ ಬ್ಯಾಟಿಂಗ್‌ ಪರಾಕ್ರಮ. ಮುರಿಯದ 5ನೇ ವಿಕೆಟಿಗೆ 136 ರನ್‌ ಪೇರಿಸುವ ಮೂಲಕ ತಂಡದ ಗೆಲುವನ್ನು ಸಾರಿದರು. ಆಗ ಪೂಜಾರ 67 ರನ್‌ (110 ಎಸೆತ, 9 ಬೌಂಡರಿ) ಮತ್ತು ಜಾಕ್ಸನ್‌ 73 ರನ್‌ ಮಾಡಿ (109 ಎಸೆತ, 11 ಬೌಂಡರಿ, 1 ಸಿಕ್ಸರ್‌) ಅಜೇಯರಾಗಿ ಉಳಿದಿದ್ದರು.

ಸಂಕ್ಷಿಪ್ತ ಸ್ಕೋರ್‌: ಉತ್ತರಪ್ರದೇಶ-385 ಮತ್ತು 194. ಸೌರಾಷ್ಟ್ರ-208 ಮತ್ತು 4 ವಿಕೆಟಿಗೆ 372. ಪಂದ್ಯಶ್ರೇಷ್ಠ: ಹಾರ್ವಿಕ್‌ ದೇಸಾಯಿ.

ವಿದರ್ಭ ಇನ್ನಿಂಗ್ಸ್‌ ವಿಕ್ಟರಿ
ನಾಗಪುರ
: ನಿರೀಕ್ಷೆಯಂತೆ ಹಾಲಿ ಚಾಂಪಿಯನ್‌ ವಿದರ್ಭ ದುರ್ಬಲ ಉತ್ತರಖಂಡ್‌ ವಿರುದ್ಧ ಇನ್ನಿಂಗ್ಸ್‌ ಜಯಭೇರಿ ಮೊಳಗಿಸಿತು. ಉತ್ತರಖಂಡ್‌ನ‌ 355ಕ್ಕೆ ಉತ್ತರವಾಗಿ ವಿದರ್ಭ 629 ರನ್‌ ಪೇರಿಸಿತ್ತು. ವಾಸಿಮ್‌ ಜಾಫ‌ರ್‌ ಅಮೋಘ ದ್ವಿಶತಕ ಬಾರಿಸಿದರೆ (206), ಸಂಜಯ್‌ ರಾಮಸ್ವಾಮಿ (141) ಮತ್ತು ಆದಿತ್ಯ ಸರ್ವಟೆ (102) ಶತಕ ಹೊಡೆದು ಮಿಂಚಿದ್ದರು.

ಭಾರೀ ಹಿನ್ನಡೆಗೆ ಸಿಲುಕಿದ ಉತ್ತರಖಂಡ್‌ ದ್ವಿತೀಯ ಸರದಿಯಲ್ಲಿ 159 ರನ್ನಿಗೆ ಕುಸಿದು ಇನ್ನಿಂಗ್ಸ್‌ ಹಾಗೂ 115 ರನ್ನುಗಳ ಸೋಲಿಗೆ ತುತ್ತಾಯಿತು. ಆದಿತ್ಯ ಸರ್ವಟೆ ಮತ್ತು ಉಮೇಶ್‌ ಯಾದವ್‌ ತಲಾ 5 ವಿಕೆಟ್‌ ಕಿತ್ತು ಉತ್ತರಖಂಡ್‌ ತತ್ತರಿಸುವಂತೆ ಮಾಡಿದರು.

ಸಂಕ್ಷಿಪ್ತ ಸ್ಕೋರ್‌: ಉತ್ತರಖಂಡ್‌-355 ಮತ್ತು 159. ವಿದರ್ಭ-629. ಪಂದ್ಯಶ್ರೇಷ್ಠ: ಉಮೇಶ್‌ ಯಾದವ್‌.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.