ಕುಂದಾಪುರ: ಇಬ್ಬರು ಮಕ್ಕಳನ್ನು ಕೊಂದ ತಂದೆಗೆ ಗಲ್ಲು


Team Udayavani, Jan 20, 2019, 4:38 AM IST

shankarnarayan.jpg

ಕುಂದಾಪುರ: ಪರಸ್ತ್ರೀಯೊಂದಿಗಿನ ಪ್ರೇಮ ಪ್ರಸಂಗದಿಂದ ತನ್ನದೇ  ಮಕ್ಕಳಿಬ್ಬರಿಗೆ ವಿಷವುಣಿಸಿ ಕೊಂದ  ತಂದೆ, ಬೈಂದೂರು ಗಂಗನಾಡುಗೋಳಿ ಕಕ್ಕಾರಿನ ಶಂಕರನಾರಾಯಣ ಹೆಬ್ಟಾರ್‌ (48)ಗೆ ಗಲ್ಲು ಶಿಕ್ಷೆ ವಿಧಿಸಿ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ| ಪ್ರಕಾಶ್‌ ಖಂಡೇರಿ ಶನಿವಾರ ಮಹತ್ವದ ತೀರ್ಪು ನೀಡಿದ್ದಾರೆ. 

ಜ. 3ರಂದು  ಆರೋಪ ಸಾಬೀತಾಗಿದ್ದು, ಜ. 7ಕ್ಕೆ ತೀರ್ಪನ್ನು ಮುಂದೂಡಿದ್ದರು. ಬಳಿಕ ಮತ್ತೆ ನ್ಯಾಯಾಧೀಶರು ಅದನ್ನು ಜ. 19ಕ್ಕೆ ಮುಂದೂಡಿದ್ದರು. ಹಿರಿಯಡಕದ ಜಿಲ್ಲಾ ಕಾರಾಗೃಹದಲ್ಲಿದ್ದ ಅಪರಾಧಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.  ಇದು ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸುತ್ತಿರುವ 3ನೇ ಮರಣದಂಡನೆ ತೀರ್ಪಾಗಿದೆ.  

ಪ್ರಕರಣದ ಹಿನ್ನೆಲೆ
2016ರ ಅ. 16ರಂದು ಪರಸ್ತ್ರೀ ವ್ಯಾಮೋಹದಿಂದ  ಶಂಕರನಾರಾಯಣನು ತನ್ನಿಬ್ಬರು ಮಕ್ಕಳು ಮತ್ತು ಪತ್ನಿಗೆ ವಿಷ ನೀಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ. ಪರಿಣಾಮ ಮಕ್ಕಳಾದ ಅಶ್ವಿ‌ನ್‌ ಕುಮಾರ್‌ ಹೆಬ್ಟಾರ್‌ (15) ಹಾಗೂ ಐಶ್ವರ್ಯಾ ಲಕ್ಷ್ಮೀ ಹೆಬ್ಟಾರ್‌ (13) ಸಾವಿಗೀಡಾಗಿದ್ದು, ಪತ್ನಿ ಮಹಾ ಲಕ್ಷಿ ಹಾಗೂ ಶಂಕರ ನಾರಾಯಣ ಹೆಬ್ಟಾರ್‌  ಪಾರಾಗಿದ್ದರು. 

ಬಲವಾದ ಸಾಕ್ಷಿಯಾದ ಡೆತ್‌ನೋಟ್‌
ಈ ಕೃತ್ಯಕ್ಕೆ  ಶಂಕರನಾರಾಯಣನ ಪ್ರೇಮ ಪ್ರಕರಣವೇ ಕಾರಣ ಎಂಬುದು ಡೆತ್‌ನೋಟ್‌ನಿಂದ ಬಹಿರಂಗಗೊಂಡಿತ್ತು. ಆತ  ಘಟನೆಗೆ ಆರು ತಿಂಗಳ ಹಿಂದೆ ಪತ್ನಿ, ಮಕ್ಕಳನ್ನು ತೊರೆದು ಪ್ರಿಯತಮೆಯ ಜತೆಗೆ ವಾಸಿಸುತ್ತಿದ್ದ. ಘಟನೆ ನಡೆಯುವ ಎರಡು ದಿನಗಳ ಹಿಂದೆ ಆಕೆಗೆ ನಿಶ್ಚಿತಾರ್ಥವಾಗಿದ್ದು, ಇದರಿಂದ ನೊಂದು  ಮನೆಗೆ ಬಂದಿದ್ದ. “ನಾನು, ನನ್ನ ಹೆಂಡತಿ ಹಾಗೂ ಮಕ್ಕಳು ವಿಷ ಕುಡಿದು ಸಾಯಲು ತೀರ್ಮಾನಿಸಿದ್ದೇವೆ. ನನ್ನ ಸಾವಿಗೆ ಪ್ರಿಯತಮೆಯೇ ಕಾರಣ. ಆಕೆ ಬಂದು ನೋಡುವವರೆಗೆ ನಮ್ಮ ಶವಗಳನ್ನು ತೆಗೆಯಬಾರದು’ ಎಂದು 18 ಪುಟಗಳ  ಡೆತ್‌ನೋಟ್‌ ಬರೆದಿದ್ದ. ಇದನ್ನು ಬಲವಾದ ಸಾಕ್ಷಿಯಾಗಿ ಪರಿಗಣಿಸಲಾಗಿತ್ತು. ಪ್ರಾಸಿಕ್ಯೂಶನ್‌ ಪರ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್‌ಚಂದ್ರ ಶೆಟ್ಟಿ ವಾದಿಸಿದ್ದರು. 

ಶಿಕ್ಷೆಯ ಪ್ರಮಾಣ
ಮಕ್ಕಳ ಕೊಲೆಗೆ ಸೆಕ್ಷನ್‌ 302ರಡಿ ಗಲ್ಲು, ಪತ್ನಿಯ ಕೊಲೆ ಯತ್ನಕ್ಕೆ ಸೆಕ್ಷನ್‌ 307ರಡಿ 7 ವರ್ಷ ಕಠಿನ ಸಜೆ ಹಾಗೂ 10 ಸಾ. ರೂ. ದಂಡ, ವಿಷವುಣಿಸಿದ್ದಕ್ಕೆ ಸೆಕ್ಷನ್‌ 328ರಡಿ 10 ವರ್ಷ ಕಠಿನ ಸಜೆ ಹಾಗೂ 10 ಸಾ.ರೂ. ದಂಡ, ವಿಷದ ಬಾಟಲಿ ಎಸೆದು ಸಾಕ್ಷ ನಾಶ ಯತ್ನಕ್ಕೆ ಸೆಕ್ಷನ್‌ 201ರಡಿ 7 ವರ್ಷ ಕಠಿನ ಸಜೆ ಹಾಗೂ 10 ಸಾ.ರೂ. ದಂಡ, ಆತ ಆತ್ಮಹತ್ಯೆಗೆ ಯತ್ನಿಸಿದ್ದಕ್ಕೆ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಸಾವಿಗೀಡಾದ ಮಕ್ಕಳ ತಾಯಿಯು ಕಾನೂನು ಸೇವಾ ಪ್ರಾಧಿಕಾರದಲ್ಲಿ ಪರಿಹಾರ ಪಡೆದುಕೊಳ್ಳಬಹುದು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ. 

ಉಡುಪಿ ಜಿಲ್ಲೆಯ ಮೂರನೇ ಗಲ್ಲು ಶಿಕ್ಷೆ
ಉಡುಪಿ ಜಿಲ್ಲೆಯ ಇತಿಹಾಸಲ್ಲಿ ಇದು 3ನೇ ಮರಣದಂಡನೆ ಶಿಕ್ಷೆಯಾಗಿದ್ದು, ಅವೆಲ್ಲವನ್ನೂ ಕುಂದಾಪುರದ ನ್ಯಾಯಾಲಯವೇ ವಿಧಿಸಿರುವುದು ವಿಶೇಷ. 2016ರಲ್ಲಿ ಯುವತಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಸತೀಶ್‌ ಹೆಮ್ಮಾಡಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದ್ದು, ಬಳಿಕ 2017ರಲ್ಲಿ ಹೈಕೋರ್ಟ್‌ ಅದನ್ನು ರದ್ದುಪಡಿಸಿತ್ತು. ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು.

ಪುತ್ತೂರಿನ ಪ್ರಕರಣದ ಉಲ್ಲೇಖ
2010ರ ಜೂ. 16ರಂದು ಪುತ್ತೂರಿನ ನಿವಾಸಿ, ಪಂಜಾಬ್‌ ನ್ಯಾಶನಲ್‌ ಬ್ಯಾಂಕಿನ ಮಹಾರಾಷ್ಟ್ರದ ಸೋಲಾಪುರ ಶಾಖೆಯ ಸಹಾಯಕ ಮ್ಯಾನೇಜರ್‌ ರಮೇಶ್‌ ನಾಯ್ಕ ತನ್ನ ಇಬ್ಬರು ಮಕ್ಕಳು, ಅತ್ತೆ ಹಾಗೂ ನಾದಿನಿಯನ್ನು ಕೊಲೆ ಮಾಡಿದ ಪ್ರಕರಣ ಹಾಗೂ ಸುಪ್ರೀಂ ಕೋರ್ಟೊಂದರ ಪ್ರಕರಣವನ್ನು ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಿಚಾರಣೆ ವೇಳೆ  ಉಲ್ಲೇಖೀಸಿದ್ದರು. ಅವುಗಳಿಗೂ ಈ ಪ್ರಕರಣಕ್ಕೂ ಸಾಮ್ಯತೆ ಇದ್ದು, ಅಲ್ಲಿ ನೀಡಿದ್ದ ಮರಣದಂಡನೆಯನ್ನೇ ಇಲ್ಲೂ ನೀಡಬೇಕು ಎಂದು  ಮನವಿ ಮಾಡಿದ್ದರು.  

ಪತ್ರಕರ್ತ ಸಾಕ್ಷಿದಾರ
ಈ ಪ್ರಕರಣದಲ್ಲಿ ಒಟ್ಟು 43 ಸಾಕ್ಷಿಗಳ ಪೈಕಿ 17ನ್ನು ವಿಚಾರಣೆ ನಡೆಸಲಾಗಿತ್ತು. ಮಕ್ಕಳ ತಾಯಿ ಹಾಗೂ ಅಪರಾಧಿಯ ಪತ್ನಿಯೇ ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಅಪರಾಧಿಯು ಈ ಕೃತ್ಯ ಎಸಗುವ ಮುನ್ನ ಪತ್ರಕರ್ತರೊಬ್ಬರಿಗೆ ಕರೆ ಮಾಡಿ, “ಮರುದಿನ ಮನೆಗೆ ಬನ್ನಿ, ಹಾಟ್‌ ನ್ಯೂಸ್‌ ಇದೆ’ ಎಂದು ಹೇಳಿದರು. ಹಾಗಾಗಿ ಆ ಪತ್ರಕರ್ತ ಕೂಡ ಸಾಕ್ಷಿಧಾರರಾಗಿದ್ದರು. ಅಂದಿನ  ಬೈಂದೂರು ವೃತ್ತ ನಿರೀಕ್ಷಕ ರಾಘವ ಪಡೀಲ್‌ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. 

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.