ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲು :ಆಕ್ರೋಶ, ಉದ್ವಿಗ್ನ ಸ್ಥಿತಿ
Team Udayavani, Jan 20, 2019, 2:47 PM IST
ಬೆಂಗಳೂರು: ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಕೇಳಿದೊಡನೆಯೇ ವಿಜಯನಗರ ಕ್ಷೇತ್ರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಬೆಂಬಲಿಗರು ಬೀದಿಗಿಳಿದು ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ.
ಸಾಮಾಜಿಕ ತಾಣಗಳಲ್ಲೂ ಆಕ್ರೋಶ ಹೊರ ಹಾಕಿದ್ದು , ಹಲ್ಲೆ ನಡೆಸಿದ್ದಾರೆ ಎನ್ನಲಾದ ಕಂಪ್ಲಿ ಶಾಸಕ ಗಣೇಶ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇನ್ನೂ ಕೆಲ ಬೆಂಬಲಿಗರು ಬೆಂಗಳೂರಿನತ್ತ ತೆರಳಿದ್ದು ತೀವ್ರ ಆತಂಕಕಾರಿ ಸ್ಥಿತಿ ನಿರ್ಮಾಣವಾಗಿದ್ದು , ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ಆನಂದ್ ಸಿಂಗ್ ಅವರು ದಾಖಲಾಗಿರುವ ಅಪೋಲೋ ಆಸ್ಪತ್ರಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಮೃತ್ಯುಂಜಯ ನಗರದಲ್ಲಿರುವ ಶಾಸಕ ಗಣೇಶ್ ನಿವಾಸಕ್ಕೂ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಈಗಲ್ಟನ್ ರೆಸಾರ್ಟ್ ನಲ್ಲಿ ಬಳ್ಳಾರಿ ಜಿಲ್ಲೆಯ ಕುರಿತಾಗಿನ ಚರ್ಚೆಯ ವೇಳೆ ಆನಂದ ಸಿಂಗ್ ಮತ್ತು ಜೆ.ಎನ್.ಗಣೇಶ್ ಜಗಳವಾಡಿದ್ದಾರೆಂದು ಹೇಳವಾಗಿದೆ. ಶಾಸಕ ಆನಂದ್ ಸಿಂಗ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದೊಂದು ಫ್ರೆಂಡ್ಲಿ ಫೈಟ್ ಎಂದು ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆಯಿಂದ ಹೊಡೆದಾಟ ನಡೆದಿರುವುದು ಖಚಿತವಾಗಿದೆ.
ಅವರೆಲ್ಲಾ ಸ್ನೇಹಿತರು, ಇದು ಸಣ್ಣ ಪುಟ್ಟ ಹೊಡೆದಾಟ ಎಂದು ಜಮೀರ್ ಹೇಳಿದ್ದಾರೆ. ಆನಂದ ಸಿಂಗ್ , ಭೀಮಾ ನಾಯ್ಕ ಮತ್ತು ಗಣೇಶ್ ನಡುವೆ ಜಗಳ ನಡೆದಿದೆ ಎಂದು ತಿಳಿದು ಬಂದಿದೆ.
ಇದುವರೆಗೆ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!