ಭಾರತ ನಂ.1 ಆಗುವ ದಿನ ದೂರವಿಲ್ಲ: ಶಾಮನೂರು


Team Udayavani, Jan 21, 2019, 6:05 AM IST

shamanurushivashankarappa.jpg

ದಾವಣಗೆರೆ: ಭಾರತಕ್ಕಿರುವ ಅನೇಕ ಸವಾಲುಗಳ ನಡುವೆಯೂ ಪಾಶ್ಚಾತ್ಯ ದೇಶಗಳ ಮಟ್ಟಕ್ಕೆ ನಿಲ್ಲುವ ದಿನಗಳು ದೂರ ಇಲ್ಲ ಎಂದು ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಸವ ಚೇತನ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 62ನೇ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವದ ಅಂತಿಮ ದಿನ ಭಾನುವಾರದ ಬಹುತ್ವದ ಭಾರತ: ಆತಂಕಗಳು ಮತ್ತು ಸವಾಲುಗಳು…ವಿಷಯ ಕುರಿತ ಸರ್ವ ಧರ್ಮ ಸಮಾವೇಶದಲ್ಲಿ ಮಾತನಾಡಿದರು.

ಇಂದಿನ ವಾತಾವರಣದಲ್ಲಿ ಭಾರತಕ್ಕೆ ಅನೇಕ ಸವಾಲುಗಳಿವೆ. ಅಮೆರಿಕಾದ ಯಜಮಾನಿಕೆ, ಚೀನಾದಂತಹ ರಾಷ್ಟ್ರಗಳು ತಾ ಮುಂದು ನಾ ಮುಂದು ಎಂದು ಮುಂದೆ ಹೋಗುತ್ತಿವೆ. ಈ ನಡುವೆಯೂ ಭಾರತ ಜಗತ್ತಿನ ನಂಬರ್‌ ಒನ್‌ ಸ್ಥಾನವನ್ನ ಆಕ್ರಮಿಸಿಕೊಳ್ಳಲೇಬೇಕಿದೆ. ಇನ್ನು 10 ವರ್ಷದಲ್ಲಿ ಪಾಶ್ಚಾತ್ಯ ದೇಶಗಳ ಮಟ್ಟಕ್ಕೆ ನಿಲ್ಲುವ ದಿನಗಳು ದೂರ ಇಲ್ಲ. ನಮ್ಮಲ್ಲಿ ಒಗ್ಗಟ್ಟು ಇರುವುದರಿಂದ ಜಾತಿಯ ಕಿತ್ತಾಟ ಎಲ್ಲೂ ಕಣ್ಣಿಗೆ ಕಾಣುತ್ತಿಲ್ಲ. ಆದರೂ, ಜಾತಿಯತೆ ದೂರ ಮಾಡಬೇಕಿದೆ ಎಂದು ತಿಳಿಸಿದರು.

ನನಗೆ ಮುರುಘಾ ಮಠದ ನಾಲ್ವರು ಜಗದ್ಗುರುಗಳನ್ನ ನೋಡುವ, ಅಶೀರ್ವಾದ ಪಡೆಯುವ ಭಾಗ್ಯ ದೊರೆತಿದ್ದು ನನ್ನ ತಂದೆ-ತಾಯಿಯವರು ಮಾಡಿದ್ದ ಪುಣ್ಯದಿಂದ ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ್‌ ಮಾತನಾಡಿ, ಜಯದೇವ ಶ್ರೀಗಳು ನಾಡಿಗೆ ದೊಡ್ಡ ಸ್ವಾಮಿಗಳಾಗಿದ್ದರು. ಉತ್ತರ ಮತ್ತು ದಕ್ಷಿಣ ಕರ್ನಾಟಕದಲ್ಲಿ ಅನ್ನ ಮತ್ತು ಜ್ಞಾನ ದಾಸೋಹ ಮಾಡಿದವರು. ಬೆಂಗಳೂರಿನಲ್ಲಿ ಹಾಸ್ಟೆಲ್‌ ಕಟ್ಟಿಸುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಿಕೊಟ್ಟವರು. ಶಿವಮೂರ್ತಿ ಮುರುಘಾ ಶರಣರು ಸಹ ಅನಾಥ ಮಕ್ಕಳಿಗೆ ಆಶ್ರಯ, ಶಿಕ್ಷಣ ನೀಡುತ್ತಿದ್ದಾರೆ. ಎಲ್ಲಾ ಜಾತಿಯವರನ್ನ ಅತ್ಯಂತ ಪ್ರೀತಿಯಿಂದ, ವಿಶ್ವಾಸದಿಂದ ಕಾಣುತ್ತಿರುವ ಅವರನ್ನ ಆಧುನಿಕ ಬಸವಣ್ಣ… ಎಂದರೆ ತಪ್ಪಾಗಲಾರದು ಎಂದರು. ಸಾಹಿತಿ ರಂಜಾನ್‌ ದರ್ಗಾ ಮಾತನಾಡಿ, ಮನುಷ್ಯ ಜಾತಿಯೇ ಸತ್ಯ. ನಾವು ಮಾಡಿಕೊಂಡಿರುವಂತಹ ಜಾತಿ ಎನ್ನುವುದೇ ಸುಳ್ಳು. ಜಾತಿ ಎನ್ನುವುದೇ ಸುಳ್ಳು ಎನ್ನುವುದನ್ನ ನಮ್ಮ ಕನ್ನಡ ಪರಂಪರೆ ತೋರಿಸಿ ಕೊಟ್ಟಿದೆ. ಕನ್ನಡದಂತಹ ಬಹುತ್ವದ ಪರಂಪರೆ, ಸಂಸ್ಕೃತಿ ಯಾವುದೇ ಭಾಷೆಗೆ ಇಲ್ಲವೇ ಇಲ್ಲ. ಬಸವಣ್ಣನವರು ಧರ್ಮದ ವಿಚಾರ ಬಂದಾಗ ದಯವೇ ಧರ್ಮದ ಮೂಲವಯ್ಯ… ಎಂದರೇ ಹೊರತು ಜಾತಿಯನ್ನ ಹೇಳಲೇ ಇಲ್ಲ. ಮನುಷ್ಯತ್ವದ ಪ್ರೀತಿ ತೋರಿದವರು ಎಂದು ತಿಳಿಸಿದರು.

ಸಾಮಾಜಿಕ ಹೋರಾಟಗಾರ ನಿಕೇತ್‌ರಾಜ್‌ ಮಾತನಾಡಿ, ಧರ್ಮದ ಹೆಸರಲ್ಲಿ ದೇಶವನ್ನ ಪಡೆಯುವರೇ ನಿಜವಾದ ದೇಶದ್ರೋಹಿಗಳು. ಜಾತಿಯ ಗೋಡೆಯ ಕಿತ್ತು ಹಾಕಿ ದೇಶ ಒಗ್ಗೂಡಿಸುವರೇ ನಿಜವಾದ ದೇಶಪ್ರೇಮಿಗಳು. ನಾವೆಲ್ಲರೂ ಬಸವಣ್ಣನವರನ್ನು ಇಡೀ ಜಗತ್ತಿಗೆ ತಿಳಿಸಬೇಕಾಗಿದೆ.

ಏಕಸೂತ್ರದಲ್ಲಿ ಭಾರತವನ್ನ ಜೋಡಿಸಲು ಬಸವಣ್ಣನವರ ವಿಚಾರಧಾರೆ ಅಗತ್ಯ. ಅವರ ವಿಚಾರಧಾರೆಯಂತೆ ಬಾಳಿದರೆ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದು ತಿಳಿಸಿದರು.

ಜಯದೇವ ಸ್ವಾಮೀಜಿಯವರಂತೆ ಶಿವಮೂರ್ತಿ ಮುರುಘಾ ಶರಣರು ವಚನಗಳನ್ನ ವಿದೇಶದಲ್ಲೂ ಪ್ರಚಾರ ಮಾಡುತ್ತಿದ್ದಾರೆ. ಮೂಢನಂಬಿಕೆಯ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ನಾವೆಲ್ಲರೂ ಅವರೊಟ್ಟಿಗೆ ಇರಬೇಕು ಎಂದು ಶಾಮನೂರು ಆಶಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.