ಸಾವಯವ, ಸಿರಿಧಾನ್ಯ ಮೇಳಕ್ಕೆ ತೆರೆ


Team Udayavani, Jan 21, 2019, 6:44 AM IST

savayava.jpg

ಬೆಂಗಳೂರು: ಕೋಟ್ಯತರ ರೂ. ವಹಿವಾಟು, ಲಕ್ಷಾಂತರ ಗ್ರಾಹಕರ ಭೇಟಿ, ಸಾವಿರಾರು ರೈತರು, ಉದ್ಯಮಿಗಳ ಪಾಲ್ಗೊಳ್ಳುವಿಕೆ ಹಾಗೂ ಸಾವಿರಾರು ಮೈಟ್ರಿಕ್‌ ಟನ್‌ ಸಿರಿಧಾನ್ಯ ಖರೀದಿಸುವ ಕುರಿತ  ಒಪ್ಪಂದಗಳ ಮೂಲಕ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳಕ್ಕೆ ಭಾನುವಾರ ತೆರೆಬಿತ್ತು.

ಜ.18ರಿಂದ 20ರವರೆಗೆ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆದ ಮೂರು ದಿನಗಳ ಮೇಳದಲ್ಲಿ 300 ಬಿಟುಬಿ ಸಭೆಗಳು, ನಿರಂತರ ಉಪನ್ಯಾಸ, ಸಂವಾದಗಳು ನಡೆದವು. ದೇಶಿ, ವಿದೇಶಿ ಕಂಪನಿಗಳು 67 ಒಡಂಬಡಿಕೆಗಳನ್ನು ಮಾಡಿಕೊಳ್ಳುವ ಮೂಲಕ 56,511 ಮೆಟ್ರಿಕ್‌ ಟನ್‌ ಸಿರಿಧಾನ್ಯಗಳ ಖರೀದಿಸಲು ರೈತರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಒಟ್ಟಾರೆ ಮೇಳದಲ್ಲಿ 240 ಕೋಟಿ ರೂ. ವಹಿವಾಟು ನಡೆದಿದೆ ಎಂದು ಕೃಷಿ ಇಲಾಖೆ ಆಯುಕ್ತ ಡಾ.ಕೆ.ಜಗದೀಶ್‌ ತಿಳಿಸಿದ್ದಾರೆ.

1.5 ಲಕ್ಷ ಹೆಕ್ಟೇರ್‌ಗೆ ಹೆಚ್ಚಿಸುವ ಗುರಿ: ಸದ್ಯ ರಾಜ್ಯದಲ್ಲಿರುವ 121 ಲಕ್ಷ ಹೆಕ್ಟೇರ್‌ ಕೃಷಿ ಭೂಮಿ ಇದ್ದು, ಅದರಲ್ಲಿ 81 ಲಕ್ಷ ಹೆಕ್ಟೇರ್‌ ಮಳೆಯಾಶ್ರಿತ ಕೃಷಿ ಭೂಮಿ ಇದೆ. 20.97 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸಾವಯವ ಬೆಳೆಗಳನ್ನು ಬೆಳೆಯುತ್ತಿದ್ದು, 31.99 ಲಕ್ಷ ಮೆಟ್ರಿಕ್‌ ಟನ್‌ ಉತ್ಪಾದನೆಯಾಗುತ್ತಿದೆ. ಇನ್ನು 1 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ, 2.82 ಲಕ್ಷ ಟನ್‌ ಸಿರಿಧಾನ್ಯ ಬೆಳೆಯಲಾಗುತ್ತಿದೆ. ಮುಂದಿನ ವರ್ಷದೊಳಗೆ ಸಿರಿಧಾನ್ಯ ಬೆಳೆಯುವ ಪ್ರದೇಶವನ್ನು 1.5 ಹೆಕ್ಟೇರ್‌ ಹೆಚ್ಚಿಸಿ 4 ಲಕ್ಷಕ್ಕೂ ಹೆಚ್ಚು ಮೆಟ್ರಿಕ್‌ ಟನ್‌ ಸಿರಿಧಾನ್ಯ ಬೆಳೆಯುವ ಗುರಿ ರಾಜ್ಯ ಸರ್ಕಾರ ಹೊಂದಿದೆ.

ಮಾರುಕಟ್ಟೆ ಕಲ್ಪಿಸಲು ಚಿಂತನೆ: ಇತ್ತೀಚಿನ ದಿನಗಳಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ, ರೈತರು ಹೆಚ್ಚಾಗಿ ಸಿರಿಧಾನ್ಯಗಳನ್ನು ಬೆಳೆಯುವಂತೆ ಪ್ರೋತ್ಸಾಹಿಸುವಲ್ಲಿ ಮೇಳ ಯಶಸ್ವಿಯಾಗಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಸಿರಿಧಾನ್ಯ ಬೆಳೆಯುವವರಿಗೆ ವಿಶೇಷ ಪ್ರೋತ್ಸಾಹ ಹಾಗೂ ಸೂಕ್ತ ಮಾರುಕಟ್ಟೆ ಕಲ್ಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್‌.ಎಚ್‌.ಶಿವಶಂಕರರೆಡ್ಡಿ ಭರವಸೆ ನೀಡಿದರು.

ಸಮಾರೋಪದಲ್ಲಿ ರಾಜ್ಯ ಸರ್ಕಾರದ ಕಾರ್ಯದರ್ಶಿ ಎಂ.ಮಹೇಶ್ವರ ರಾವ್‌, ಕೇಂದ್ರದ ಮಾಜಿ ಸಚಿವ ಸೋಮ್‌ಪಾಲ್‌ ಶಾಸ್ತ್ರಿ, ಹೈದರಾಬಾದ್‌ನ ಐಎಂಆರ್‌ ಸಂಸ್ಥೆಯ ದಯಾಕರ್‌ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಸಿರಿ 2019ರ ಪ್ರಶಸ್ತಿ ಪ್ರದಾನ: ಮೇಳದಲ್ಲಿ ಸಾವಯವ ಮತ್ತು ಸಿರಿಧಾನ್ಯ ಬೆಳೆಗಳಿಗೆ ಸಂಬಂಧಿಸಿದಂತೆ 7 ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿಯು ಫಲಕ, ಪ್ರಮಾಣಪತ್ರ, 30 ಸಾವಿರ ರೂ. ನಗದು ಬಹುಮಾನ ಒಳಗೊಂಡಿದ್ದು, ಸೆಂಟ್ರಲ್‌ ಫುಡ್‌ ಟೆಕ್ನಾಲಜಿ ರಿಸರ್ಚ್‌ ಇನ್‌ಸ್ಟಿಟ್ಯೂಟ್‌, ಡಾ.ಸಿ.ತಾರಾ ಸತ್ಯವತಿ, ಸಿ.ಅರುಣಾ, ಕೊಠಾರಂ ಆಗ್ರೋ ಪ್ರೈ ಲಿ., ಶೈಲಜಾ, ಇನ್ನರ್‌ ಬಿನ್‌ ವಿಲ್‌ನರ್‌ ಪ್ರೈ ಲಿ., ದಾನ್‌ ಫೌಂಡೇಶನ್‌ಗೆ ಪ್ರಶಸ್ತಿ ನೀಡಲಾಯಿತು.

ಎರಡು ವಿಭಾಗದಲ್ಲಿ ನಡೆದ ಅಡುಗೆ ಸ್ಪರ್ಧೆಯ ಮೊದಲ ವಿಭಾಗದಲ್ಲಿ ಮಾನಸ್‌ ಪ್ರಥಮ (10 ಸಾವಿರ ನಗದು), ದಿವ್ಯ ಜೈನ್‌ ದ್ವಿತೀಯ (8 ಸಾವಿರ ರೂ.), ರೂಪಾ ಬಾಲಚಂದ್ರ ತೃತೀಯ (6 ಸಾವಿರ ರೂ.); ಎರಡನೇ ವಿಭಾಗದಲ್ಲಿ ಶಿಫಾ ಫಾತೀಮಾ ಪ್ರಥಮ (10 ಸಾವಿರ ರೂ.), ಮಾನಸ್‌ ದ್ವಿತೀಯ (8 ಸಾವಿರ ರೂ.), ದಿವ್ಯಾ ಜೈನ್‌ ತೃತೀಯ (6 ಸಾವಿರ ರೂ.) ಬಹುಮಾನ ಪಡೆದರು.

ಮಳಿಗೆಗಳಲ್ಲಿ ವಹಿವಾಟು ಜೋರು: ಭಾನುವಾರ ರಜೆ ಇದ್ದ ಕಾರಣ ಮೇಳಕ್ಕೆ ಸಹಸ್ರಾರು ಮಂದಿ ಭೇಟಿ ನೀಡಿದ್ದರು. ಕೊನೆಯ ದಿನ ವಿವಿಧ ಸ್ಟಾಲ್‌ಗ‌ಳಲ್ಲಿ 6,875 ಮೆಟ್ರಿಕ್‌ ಟನ್‌ ಸಿರಿಧಾನ್ಯ ಮಾರಾಟವಾಗಿ 66.33 ಲಕ್ಷ ರೂ. ವಹಿವಾಟಾಗಿದೆ. ತಿಂಡಿ ತಿನಿಸು ಸೇರಿದಂತೆ ಎಲ್ಲಾ ಮಳಿಗೆಗಳ ಉದ್ಯಮ ವಹಿವಾಟು 15.59 ಕೋಟಿ ರೂ. ಆಗಿದೆ. ಬ್ಯಾಡಗಿ ಮೆಣಸಿನಕಾಯಿ, ಮಸಾಲೆ ಪದಾರ್ಥಗಳು, ಅರಿಶಿಣಕ್ಕೆ ಬೇಡಿಕೆ ಹೆಚ್ಚಿದ್ದು, ಆಹಾರಪ್ರಿಯರು ಸಿರಿಧಾನ್ಯದ ಎಲ್ಲಾ ಖಾದ್ಯಗಳನ್ನು ಮುಗಿಬಿದ್ದು ಸವಿದರು. 

ಸಿರಿಧಾನ್ಯ ವಹಿವಾಟು ಹೆಚ್ಚಿಸಲು ಒಕ್ಕೂಟ ರಚಿಸಲು ಸಿದ್ಧತೆ ನಡೆಸಿದ್ದು, ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ, ಸಂಸ್ಕರಣೆ, ಪ್ಯಾಕಿಂಗ್‌ ವ್ಯವಸ್ಥೆ ಸೇರಿ ಇತರೆ ಚಟುವಟಿಕೆ ಕೈಗೊಳ್ಳಲಾಗುವುದು.
-ಎನ್‌.ಎಚ್‌.ಶಿವಶಂಕರರೆಡ್ಡಿ, ಕೃಷಿ ಸಚಿವ

ಮೇಳ ಆಯೋಜನೆಗೆ 200 ಅಧಿಕಾರಿಗಳು ಎರಡು ತಿಂಗಳಿಂದ ಶ್ರಮ ವಹಿಸಿದ್ದು, ಪೂರ್ವಭಾವಿಯಾಗಿ ಹೊಸದಿಲ್ಲಿ, ಪುಣೆ, ಕೊಯಮತ್ತೂರಿನಲ್ಲಿ ರೋಡ್‌ ಶೋ ನಡೆಸಿದ ಪರಿಣಾಮ ಮೇಳ ಯಶಸ್ವಿಯಾಗಿದೆ.
-ಕೆ.ಜಿ.ಜಗದೀಶ್‌, ಕೃಷಿ ಇಲಾಖೆ ಆಯುಕ್ತ

ಟಾಪ್ ನ್ಯೂಸ್

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.