ಕಾನೂನು ಗೌರವಿಸಿ: ನ್ಯಾ| ಮಾಣಿಕ್ಯ
Team Udayavani, Jan 21, 2019, 9:28 AM IST
ಕಲಬುರಗಿ: ದಿನನಿತ್ಯ ನಮ್ಮ ಜೀವನದಲ್ಲಿ ಅವಶ್ಯಕವಿರುವ ಕಾನೂನನ್ನು ಪ್ರತಿಯೊಬ್ಬರೂ ಅರಿತು ಪಾಲಿಸಬೇಕು ಹಾಗೂ ಕಾನೂನನ್ನು ಗೌರವಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಆರ್. ಮಾಣಿಕ್ಯ ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ವಿಶ್ವ ಸೇವಾ ಮಿಷನ್ ಸಂಯುಕ್ತಾಶ್ರಯದಲ್ಲಿ ವಿದ್ಯಾನಗರದಲ್ಲಿನ ಪ್ರಿಯದರ್ಶಿನಿ ಬಾಲಕಿಯರ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯ ದಲ್ಲಿ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಅರಾಜಕತೆ ಉಂಟಾಗದಿರಲು, ಉತ್ತಮ ಸಮಾಜ ನಿರ್ಮಾಣಕ್ಕಾಗಿ ಸರಕಾರಗಳು ಕಾನೂನುಗಳನ್ನು ರೂಪಿಸುತ್ತವೆ. ಉದಾಹರಣೆಗೆ ಮಿಲಿಟರಿ ಹಾಗೂ ಪೊಲೀಸರ ಸೇವೆ ಇಲ್ಲದೆ ನಾವು ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಅದೇರೀತಿ ಜೀವನದ ಪ್ರತಿಯೊಂದು ಹಂತದಲ್ಲೂ ಕಾನೂನು ಅವಶ್ಯಕವಾಗಿದೆ. ಮೊದಲು ಕುಟುಂಬದ, ಶಾಲೆಯ, ದೇಶದ ಕಾನೂನುಗಳನ್ನು ಗೌರವಿಸಿದಾಗ ಮಾತ್ರ ನಾವು ಒಬ್ಬ ಉತ್ತಮ ಪ್ರಜೆಯಾಗಲು ಸಾಧ್ಯ ಎಂದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ವಕೀಲ ವೈಜನಾಥ ಝಳಕಿ ಮಾತನಾಡಿ, ಜಿಲ್ಲಾ ಗ್ರಾಹಕರ ವೇದಿಕೆಗೆ 20 ಲಕ್ಷ ರೂ. ವರೆಗೆ ಪರಿಹಾರಕ್ಕಾಗಿ ದೂರು ದಾಖಲಿಸಬಹುದು ಎಂದರು.
ವಿಶ್ವ ಸೇವಾ ಮಿಷನ್ ಅಧ್ಯಕ್ಷ ವಿಶ್ವನಾಥ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಜಿ ವಿಧಾನಪರಿಷತ್ ಸದಸ್ಯ ಮಾರುತಿರಾವ ಡಿ.ಮಾಲೆ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲರಾದ ಭಾರತಿ ಸಂಗಾವಿ, ಸಿಂಧೂಮತಿ ಭೋಸ್ಲೆ ವೇದಿಕೆಯಲ್ಲಿದ್ದರು. ಎಸ್.ಉಮಾದೇವಿ ನಿರೂಪಿಸಿದರು, ಸಿಲ್ವಿ ಎಸ್. ದೇಶಮಾನ್ಯೆ ವಂದಿಸಿದರು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು