ಶಾಸಕರ ಕಚೇರಿ ತೆರವಿಗೆ ಒತ್ತಾಯ


Team Udayavani, Jan 21, 2019, 11:26 AM IST

shiv-1.jpg

ಸಾಗರ: ಶಾಸಕರ ಹಿಂಬಾಲಕರಿಂದ ಪದೇ ಪದೆ ನಗರಸಭೆಯ ಆಡಳಿತಕ್ಕೆ ಸಮಸ್ಯೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರಸಭೆ ಆವರಣದಲ್ಲಿ ಅವಕಾಶ ಮಾಡಿಕೊಟ್ಟಿರುವ ಶಾಸಕರ ಕಚೇರಿಯನ್ನು ತುರ್ತಾಗಿ ತೆರವುಗೊಳಿಸಬೇಕು ಎಂದು ನಗರಸಭಾಧ್ಯಕ್ಷೆ ವೀಣಾ ಪರಮೇಶ್ವರ್‌ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಎ. ದಯಾನಂದ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಶಾಸಕ ಹಾಲಪ್ಪ ಅವರು ಮಂಗನ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿ ಐಶಾರಾಮಿ ರೆಸಾರ್ಟ್‌ನಲ್ಲಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ನಡೆಸಿದ ಪ್ರತಿಭಟನೆಯ ವಿಷಯದ ಹಿನ್ನೆಲೆಯಲ್ಲಿ ಆರಂಭವಾದ ಮಾತಿನ ಚಕಮಕಿ ನಗರಸಭೆ ಆವರಣದ ಶಾಸಕರ ಕಚೇರಿ ಎದುರಿನಲ್ಲಿ ಕೈ ಕೈ ಮಿಲಾಯಿಸಿ ಹೊಡೆದಾಟದಲ್ಲಿ ಪರ್ಯಾವಸಾನಗೊಂಡ ಘಟನೆ ಶನಿವಾರ ನಗರದಲ್ಲಿ ನಡೆದಿತ್ತು. ಈ ಸಂಬಂಧ ಪರಸ್ಪರರು ನಗರ ಠಾಣೆಯಲ್ಲಿ ದೂರು ಕೂಡ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಈ ಮನವಿ ಸಲ್ಲಿಸಲಾಗಿದೆ.

ತಾಪಂ ಕಟ್ಟಡದಲ್ಲಿ ಶಾಸಕರ ಕಚೇರಿ ಈಗಾಗಲೇ ಇದ್ದರೂ ಆರು ತಿಂಗಳ ಹಿಂದೆ ದುರುದ್ದೇಶಪೂರ್ವಕವಾಗಿಯೇ ನಗರಸಭೆಯಲ್ಲಿ ಮತ್ತೂಂದು ಶಾಸಕರ ಕಚೇರಿ ತೆರೆಯಲಾಗಿದೆ. ವಿವಿಧ ಸಂದರ್ಭಗಳಲ್ಲಿ ಶಾಸಕರ ಹಿಂಬಾಲಕರು ಗೂಂಡಾಗಿರಿ ಪ್ರದರ್ಶಿಸಿ ಇಲ್ಲಿನ ವಾತಾವರಣವನ್ನು ಹಾಳುಗೆಡವುತ್ತಿದ್ದಾರೆ ಎಂದು ದೂರಲಾಗಿದೆ.

ಈ ಹಿಂದೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಾರ್ವಜನಿಕರ ಕುಂದುಕೊರತೆ ವಿಚಾರಿಸಲು ನಗರಸಭೆಗೆ ಆಗಮಿಸಿದ್ದ ಸಂದರ್ಭದಲ್ಲೂ ಅವರ ಮೇಲೆ ಗೂಂಡಾಗಿರಿ ನಡೆದಿತ್ತು. ಉಪ್ಪಾರಕೇರಿ ಬೋರ್ಡ್‌ ವಿಚಾರದಲ್ಲಿ ನಿಯಮಾನುಸಾರ ಬೋರ್ಡ್‌ ಹಾಕುವಲ್ಲಿ ನಡೆದ ವಿವಾದದಲ್ಲಿ ತಮ್ಮನ್ನು ಹಾಗೂ ಇತರ ಮಹಿಳಾ ಸದಸ್ಯೆಯರನ್ನು ಕಾರಿನಿಂದ ಎಳೆಯುವ ಅವಮಾನಕರ ಘಟನೆ ನಡೆದಿತ್ತು. ಪುರಪಿತೃಗಳಿಗೆ ಅವಮಾನವಾಗುವ ಘಟನೆ ಪದೇ ಪದೆ ನಡೆಯುತ್ತಿದೆ ಎಂದು ದೂಷಿಸಲಾಗಿದೆ.

ಈ ರೀತಿಯ ಘಟನೆಗಳಿಂದ ನಗರಸಭೆಯ ಆಡಳಿತ ಚಟುವಟಿಕೆಗಳಿಗೆ ತೀವ್ರವಾದ ತೊಂದರೆಯಾಗುತ್ತಿದ್ದು, ಆಡಳಿತ ಸುವ್ಯವಸ್ಥೆ ದೃಷ್ಟಿಯಿಂದ ತುರ್ತಾಗಿ ಶಾಸಕರ ಕಚೇರಿಯನ್ನು ತೆರವುಗೊಳಿಸಬೇಕು ಎಂದು ವೀಣಾ ಪರಮೇಶ್ವರ್‌ ಆಗ್ರಹಿಸಿದರು.

ಉಪಾಧ್ಯಕ್ಷೆ ಗ್ರೇಸಿ ಡಯಾಸ್‌, ನಗರಸಭೆಯ ಸದಸ್ಯರಾದ ಉಷಾ, ಎನ್‌.ಲಲಿತಮ್ಮ, ಪರಿಮಳ, ಮರಿಯಾ ಲೀಮಾ, ಸರಸ್ವತಿ, ಸಬಿರಾ, ಎನ್‌. ಶ್ರೀನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.