ಮಲ್ಲಾರು – ಪಕೀರಣಕಟ್ಟೆ ವಾರ್ಡ್‌ ಟ್ಯಾಂಕ್‌ ಕುಸಿಯುವ ಭೀತಿ


Team Udayavani, Jan 22, 2019, 12:50 AM IST

tank.jpg

ಕಾಪು: ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು – ಪಕೀರಣಕಟ್ಟೆಯಲ್ಲಿ ನೂರಾರು ಮನೆಗಳಿಗೆ ನೀರುಣಿಸುವ ನೀರಿನ ಟ್ಯಾಂಕ್‌ನ ಬೀಮ್‌ ಶಿಥಿಲಗೊಂಡಿದ್ದು, ಇದರೊಂದಿಗೆ ಕಬ್ಬಿಣದ ಏಣಿ ತುಂಡಾಗಿ ನೇತಾಡುತ್ತಿರುವುದರಿಂದ ಗ್ರಾಮಸ್ಥರಲ್ಲಿ ಅಪಾಯದ ಆತಂಕ ಮೂಡಿಸಿದೆ.

ಬಿರುಕು ಬಿಟ್ಟಿದೆ ನೀರಿನ ಟ್ಯಾಂಕ್‌ 
  ಸಾವಿರಾರು ಲೀಟರ್‌ ನೀರನ್ನು ತುಂಬಿಸಿಕೊಂಡು, ಸುಮಾರು 120ಕ್ಕೂ ಅಧಿಕ ಮನೆಗಳಿಗೆ ವರ್ಷಪೂರ್ತಿ ನೀರುಣಿಸುವ  ಟ್ಯಾಂಕ್‌ನ ಅಡಿ ಭಾಗದ ಪಿಲ್ಲರ್‌ಗಳಲ್ಲಿ  ಅಲ್ಲಲ್ಲಿ ಸಿಮೆಂಟ್‌ ಕಳಚಿ, ರಾಡ್‌ಗಳು ತೋರುತ್ತಿವೆ. ಮಾತ್ರವಲ್ಲದೇ ಟ್ಯಾಂಕ್‌ ಸೋರಿಕೆಯಾಗುತ್ತಿರುವುದನ್ನೂ ಗ್ರಾಮಸ್ಥರು ಗಮನಿಸಿದ್ದಾರೆ. ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಈ ಟ್ಯಾಂಕ್‌ನ ಗುಣಮಟ್ಟ ಪರಿಶೀಲನೆ ನಡೆಯಬೇಕು ಎನ್ನುವ ಆಗ್ರಹ ಸ್ಥಳೀಯರದ್ದಾಗಿದೆ. 

ತುಂಡಾದ ಏಣಿ 
ಈ ಬೃಹದಾಕಾರದ ಟ್ಯಾಂಕ್‌ಗೆ ಭೂಮಿಯಿಂದ ತುದಿಯವರೆಗೆ ತೆರಳಲು ನಿರ್ಮಿಸಲಾಗಿದ್ದ ಕಬ್ಬಿಣದ ಮೆಟ್ಟಿಲುಗಳು ತುಕ್ಕು ಹಿಡಿದ ಪರಿಣಾಮ ಕಳೆದ ಮಳೆಗಾಲದಲ್ಲಿ ತುಂಡಾಗಿ ಬಿದ್ದಿತ್ತು. ತುಂಡಾಗಿ ಬಿದ್ದ ಕಬ್ಬಿಣದ ಮೆಟ್ಟಿಲುಗಳು ಕಳೆದ ಏಳು ತಿಂಗಳುಗಳಿಂದ ಗಾಳಿಯಲ್ಲಿ ನೇತಾಡುತ್ತಿದ್ದು, ಇಂದೋ ನಾಳೆಯೋ ಮುರಿದು ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.

ಅಪಾಯಕ್ಕೆ ಆಹ್ವಾನ 
ಕಬ್ಬಿಣದ ಏಣಿ ಸಂಪೂರ್ಣ ಮುರಿದು ಬಿದ್ದರೆ ಟ್ಯಾಂಕ್‌ನ ಹತ್ತಿರದಲ್ಲೇ ಇರುವ ಹತ್ತಾರು ಮನೆಗಳಿಗೆ ಭಾರೀ ಅಪಾಯವುಂಟಾಗುವ ಸಾಧ್ಯತೆಗಳಿವೆ. ತುಂಡಾಗಿ ನೇತಾಡುವ ಏಣಿಯ ಅಡಿಯಲ್ಲೇ ಹೈಟೆನ್ಶನ್‌ ವಿದ್ಯುತ್‌ ವಯರ್‌ ಕೂಡಾ ಹಾದು ಹೋಗಿದ್ದು, ಕೆಳಕ್ಕೆ ಬಿದ್ದರೆ ಇದು ಮತ್ತಷ್ಟು ಅಪಾಯಕ್ಕೆ ಎಡೆ ಮಾಡಿಕೊಡುವ ಸಾಧ್ಯತೆಗಳಿವೆ. ನೀರಿನ ಟ್ಯಾಂಕ್‌ನ ಕಬ್ಬಿಣದ ಏಣಿ ತುಂಡಾದ  ವಿಚಾರವನ್ನು ಈಗಾಗಲೇ ಸ್ಥಳೀಯರು ಪುರಸಭೆಯ ಮುಖ್ಯಾಧಿಕಾರಿ, ವಾರ್ಡ್‌ ಸದಸ್ಯರು ಸಹಿತ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದಾರೆ. ಆದರೂ ಘಟನೆ ಸಂಭವಿಸಿ ಏಳು ತಿಂಗಳಾದರೂ ಪುರಸಭೆ ಕ್ರಮ ಕೈಗೊಳ್ಳದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಟ್ಯಾಂಕ್‌ ಶುಚಿಯಾಗಿಲ್ಲ 
ಬೃಹತ್‌ ನೀರಿನ ಟ್ಯಾಂಕ್‌ನ ಮೇಲುಸ್ತುವಾರಿಗಾಗಿ ಒಬ್ಬರನ್ನು ನಿಯೋಜಿಸಿ, ಅವರ ಮೂಲಕ ಯಾವತ್ತಾದರೂ ಒಮ್ಮೆ ಟ್ಯಾಂಕ್‌ನ್ನು ಶುಚಿಗೊಳಿಸುವ ಪ್ರಕ್ರಿಯೆ ನಡೆಸುವುದು ವಾಡಿಕೆ. ಆದರೆ ಇಲ್ಲಿನ ಟ್ಯಾಂಕ್‌ನ ಮೇಲೆ ಹತ್ತುವ ಕಬ್ಬಿಣದ ಏಣಿ ತುಕ್ಕು ಹಿಡಿದು, ಗಾಳಿ ಮಳೆಗೆ ತುಂಡಾಗಿ ಬಿದ್ದು ಏಳು ತಿಂಗಳು ಕಳೆದಿದ್ದು, ಮೇಲೆ ಹೋಗಿ ಶುಚಿಗೊಳಿಸಲು ಸಾಧ್ಯವಿಲ್ಲದಂತಾಗಿದೆ. 
ಆ ಕಾರಣದಿಂದಾಗಿ ಟ್ಯಾಂಕ್‌ನ ಒಳಗಡೆಯೂ ಶುಚಿತ್ವ ಇಲ್ಲದಂತಾಗಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂದಿದೆ.

ಸಮಸ್ಯೆ ಗಂಭೀರವಾಗಿ ಪರಿಗಣಿಸಿಲ್ಲ
 ಬೃಹತ್‌ ವಾಟರ್‌ ಟ್ಯಾಂಕ್‌ನ ಮೇಲೇರುವ ಏಣಿ ತುಂಡಾಗಿ ಬಿದ್ದು ಏಳು ತಿಂಗಳು ಕಳೆದಿದ್ದು, ತುಂಡಾಗಿ ನೇತಾಡುತ್ತಿರುವ ಬಗ್ಗೆ ಪುರಸಭೆಯ ವಾರ್ಡ್‌ ಸದಸ್ಯರ ಗಮಕ್ಕೆ ತರಲಾಗಿದ್ದರೂ ಈ ಸಮಸ್ಯೆಯನ್ನು ಯಾರೂ ಕೂಡಾ ಗಂಭೀರವಾಗಿ ತೆಗೆದುಕೊಂಡಿಲ್ಲ. ಪುರಸಭೆಯ ಅಧಿಕಾರಿಗಳ ಗಮನಕ್ಕೂ ಇದನ್ನು ತರಲಾಗಿದೆ. ಇದರಿಂದ ಸುತ್ತಮುತ್ತಲಿನ ಮನೆಯವರಲ್ಲಿ ಆತಂಕವಿದೆ. ಯಾವಾಗ ಮುರಿದು ಬೀಳುತ್ತದೆಯೋ ಎಂಬ ಹೆದರಿಕೆ ಜನರನ್ನು ಕಾಡುತ್ತಿದೆ. 
-ಹಮೀದ್‌, ಪಕೀರಣಕಟ್ಟೆ

ತೆರವು ಮಾಡುತ್ತೇವೆ
ನೀರಿನ ಟ್ಯಾಂಕ್‌ನ ಕಬ್ಬಿಣದ ಏಣಿ ತುಂಡಾಗಿ ನೇತಾಡುತ್ತಿರುವ ವಿಚಾರ ನಮ್ಮ ಗಮನಕ್ಕೆ ಬಂದಿದ್ದು, ತೆರವು ಗೊಳಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಏಣಿಯನ್ನು ಟ್ಯಾಂಕ್‌ಗೆ ಹಾನಿಯಾಗದಂತೆ, ಆಧುನಿಕ ತಂತ್ರಜ್ಞಾನದ ನೆರವಿನಿಂದ ತೆರವುಗೊಳಿಸಿ ಜನರ ಆತಂಕವನ್ನು ದೂರ ಮಾಡಲು ಪ್ರಯತ್ನಿಸುತ್ತೇವೆ.
-ರಾಯಪ್ಪ, ಮುಖ್ಯಾಧಿಕಾರಿ, ಕಾಪು ಪುರಸಭೆ

– ರಾಕೇಶ್ ಕುಂಜೂರು 

ಟಾಪ್ ನ್ಯೂಸ್

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Feticide case: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಯೋಗದ ಸದಸ್ಯರ ಕಿಡಿ

Feticide case: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು: ನ್ಯಾ.ಎಸ್.ಕೆ.ಒಂಟಗೋಡಿ

shashi-taroor

Kerala ದಲ್ಲಿ ತಿರುವನಂತಪುರಂ ಬಿಜೆಪಿಯ ಪ್ರಬಲ ಕ್ಷೇತ್ರವಾದರೂ.. :ತರೂರ್

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

Rajiv-Kumar

ಸುಳ್ಳು ಸುದ್ದಿ ಹರಡಬೇಡಿ…ಜೈರಾಂ ರಮೇಶ್‌ ಗೆ ಮುಖ್ಯ ಚುನಾವಣ ಆಯುಕ್ತ ಕುಮಾರ್‌ ತರಾಟೆ

Rabkavi Banhatti ಒಂದೂವರೆ ಶತಮಾನದ ಶಾಲೆಯಲ್ಲಿ 147 ವಿದ್ಯಾರ್ಥಿಗಳು..!

Rabkavi Banhatti ಒಂದೂವರೆ ಶತಮಾನದ ಶಾಲೆಯಲ್ಲಿ 147 ವಿದ್ಯಾರ್ಥಿಗಳು..!

1-qwewqwq

Bengaluru rave party ಪ್ರಕರಣ; ನಟಿ ಹೇಮಾ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

MLC Election; ಹಿಂದೆ ಸರಿದಿರುವುದಾಗಿ ಪ್ರಚಾರ: ರಘುಪತಿ ಭಟ್‌ ದೂರು

ಕ್ಷೇತ್ರದಲ್ಲಿ ಕೆಲಸ ಮಾಡಿ ತೋರಿಸುತ್ತೇನೆ… ಪದವೀಧರರು ನನ್ನ ಕೈ ಬಿಡಲಾರರು: ರಘುಪತಿ ಭಟ್‌

ಕ್ಷೇತ್ರದಲ್ಲಿ ಕೆಲಸ ಮಾಡಿ ತೋರಿಸುತ್ತೇನೆ… ಪದವೀಧರರು ನನ್ನ ಕೈ ಬಿಡಲಾರರು: ರಘುಪತಿ ಭಟ್‌

Mangaluru: ಇಂದು ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ…

Mangaluru: ಇಂದು ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ…

ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜಗಳ ಲಭ್ಯ

ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜಗಳ ಲಭ್ಯ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

KMC Manipal; ಖ್ಯಾತ ಸಂತಾನೋತ್ಪತ್ತಿ ತಜ್ಞ ಡಾ. ಪ್ರತಾಪ್ ಪೂರ್ಣ ಸಮಯದ ಸಮಾಲೋಚನೆಗೆ ಲಭ್ಯ

Satish Jaraki

Exit poll ಸಮೀಕ್ಷೆಗಳ ಬಗ್ಗೆ ನಂಬಿಕೆಯಿಲ್ಲ: ಸಚಿವ ಸತೀಶ್ ಜಾರಕಿಹೊಳಿ

Feticide case: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಯೋಗದ ಸದಸ್ಯರ ಕಿಡಿ

Feticide case: ಆರೋಪಿಗಳ ಮೇಲೆ ಕಠಿಣ ಕ್ರಮಕ್ಕೆ ಶಿಫಾರಸ್ಸು: ನ್ಯಾ.ಎಸ್.ಕೆ.ಒಂಟಗೋಡಿ

shashi-taroor

Kerala ದಲ್ಲಿ ತಿರುವನಂತಪುರಂ ಬಿಜೆಪಿಯ ಪ್ರಬಲ ಕ್ಷೇತ್ರವಾದರೂ.. :ತರೂರ್

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

ಸೂರತ್ ಅವಿರೋಧ ಆಯ್ಕೆಯು ಸುಪ್ರೀಂ NOTA ತೀರ್ಪನ್ನು ಉಲ್ಲಂಘಿಸಿದೆಯೇ?: ಆಯೋಗ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.