ನಮ್ಮ ಬಳಿಯೇ ಇರು ದೇವರೇ…


Team Udayavani, Jan 22, 2019, 12:50 AM IST

devare.jpg

ತುಮಕೂರು: ನಮ್ಮ ಹತ್ತಿರವೇ ಇರು ದೇವರೇ, ನಾವು ನಿಮ್ಮನ್ನು ಬಿಟ್ಟು ಬಾಳಲಾರೆವು, ಕಣ್ಣೀರಿನ ಸಮಯದಲ್ಲಿ ತಾಯಿಯಾಗಿ¨ªೆ, ಕತ್ತಲೆಯ ಸಮಯದಲ್ಲಿ ಬೆಳಕಾಗಿದ್ದೆ, ನಮ್ಮ ಬಳಿಯೇ ಇರು ಓ ದೇವರೇ…
ಅರವತ್ತು ಅಂಧ ವಿದ್ಯಾರ್ಥಿಗಳು ಉತ್ಛ ಕಂಠದಲ್ಲಿ ಲಿಂಗೈಕ್ಯರಾದ ಶ್ರೀ ಶಿವಕುಮಾರ ಸ್ವಾಮೀಜಿಗೆ ಮೊರೆಯಿಟ್ಟ ಪರಿಯಿದು. 

ತಂದೆ, ತಾಯಿ ಪೋಷಕರಿಂದ ದೂರವಾಗಿದ್ದ ಅಂಧ ಮಕ್ಕಳಿಗೆ ಗುರುವಾಗಿ, ತಾಯಿಯಾಗಿದ್ದ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಸುದ್ದಿ ಕೇಳಿದೊಡನೆ ಅಂಧ ಶಾಲೆಯ ಶಿಕ್ಷಕರು ಹಾಗೂ ಮಕ್ಕಳು ತಾಯಿ ಕಳೆದುಕೊಂಡ ತಬ್ಬಲಿಗಳಂತೆ ಕಣ್ಣೀರು ಹಾಕಿ ಹಾಕಿ ಅಶ್ರುತರ್ಪಣ ಸಲ್ಲಿಸಿದರು.

ಶಾಲಾ ಆವರಣದಲ್ಲಿ ಸ್ವಾಮೀಜಿಗಳಿಗೆ ಇಷ್ಟವಾದ ಪಂಚಾಕ್ಷರಿ ಮಂತ್ರ ಪಠಿಸಿ ವಚನಗಳನ್ನು ಹೇಳಿದರು. ಶಾಲಾ ಶಿಕ್ಷಕರು ಅಂಧ ಮಕ್ಕಳಿಗೆ ದೇವರ ಬಳಿ ಸ್ವಾಮೀಜಿ ತೆರಳಿ¨ªಾರೆ ಎಂದು ಸಾಂತ್ವನ ಹೇಳುತ್ತಿದ್ದ ದೃಶ್ಯ ಮನಕಲಕುವಂತಿತ್ತು. 

ಸಾಮಾನ್ಯರಂತೆ ಅಂಧ ಮಕ್ಕಳಿಗೂ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕೆಂಬ ಸ್ವಾಮೀಜಿ ಅವರ ಇಚ್ಛೆಯಂತೆ 1978 ರಲ್ಲಿ ಅಂಧ ಮಕ್ಕಳ ಶಾಲೆ ಆರಂಭಿಸಲಾಗಿತ್ತು. ಶಾಲೆಯ ಮೊದಲ ಬ್ಯಾಚ್‌ನಲ್ಲಿದ್ದ 8 ವಿದ್ಯಾರ್ಥಿಗಳು ಇಂದು ಉದ್ಯೋಗಸ್ಥರಾಗುವ ಮೂಲಕ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ನಾನು ದೈಹಿಕ ಶಿಕ್ಷಕನಾಗಿ ಇಲ್ಲಿಯೇ ವೃತ್ತಿ ಮುಂದುವರಿಸಿದ್ದು, ಸ್ವಾಮೀಜಿ ನನಗೆ ತಾಯಿಯಾಗಿ ಅನ್ನ ನೀಡಿದ್ದರು. ಜತೆಗೆ ಬದಕು ಕಟ್ಟಿಕೊಳ್ಳಲು ನೆರವಾದರು ಎಂದು ವೀರಭದ್ರಯ್ಯ ನೆನಪು ಹಂಚಿಕೊಂಡರು. 

ಸ್ವಾಮೀಜಿಗೆ ವಿಶೇಷ ಪ್ರೀತಿ: ಶಿವಕುಮಾರ ಸ್ವಾಮೀಜಿಗಳಿಗೆ ಅಂಧ ಶಾಲೆಯ ಮಕ್ಕಳೆಂದರೆ ವಿಶೇಷ ಪ್ರೀತಿಯಿತ್ತು. ಮಠದ ಆವರಣದಲ್ಲಿ ಪ್ರತಿದಿನ ಸಂಜೆ ನಡೆಯುವ ಸಾಮೂಹಿಕ ಪ್ರಾರ್ಥನೆ ವೇಳೆ ಅಂಧ ಮಕ್ಕಳನ್ನು ತಮ್ಮ ಸನಿಹವೇ ಕೂರಿಸಿಕೊಳ್ಳುತ್ತಿದ್ದರು. ಸ್ವಾಮೀಜಿಗಳಿಗೆ ಹಳೇಮಠ ಹಾಗೂ ಅಂಧ ವಿದ್ಯಾರ್ಥಿಗಳ ಶಾಲೆ ಎಂದರೆ ಹೆಚ್ಚು ಆಪ್ತ. ತಮಗೆ ಮಕ್ಕಳ ಜತೆ ಬೆರೆಯಬೇಕು ಎನಿಸಿದಾಗೆಲ್ಲಾ ಶಾಲೆಗೆ ಬಂದು ಮಕ್ಕಳ ಹಾಡುಗಳನ್ನು ಆಲಿಸುತ್ತಿದ್ದರು ಎಂದು ಶಿಕ್ಷಕಿ ಭಾಗ್ಯ ಕಂಬನಿ ಮಿಡಿದರು. 

ಹಾಡು ಹೇಳಿದ ಬಳಿಕ ತುಂಬಾ ಚೆನ್ನಾಗಿ ಹಾಡಿದ್ದೀರಾ ಎಂದು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ಮಕ್ಕಳನ್ನು ಹುರಿದುಂಬಿಸುತ್ತಿದ್ದರು. ಆ ಮೂಲಕ ವಿಶೇಷ ಚೇತನ ಮಕ್ಕಳೊಂದಿಗೆ ಸ್ವಾಮೀಜಿ ಸಹ ಮಗುವಾಗಿ ಬಿಡುತ್ತಿದ್ದರು. 2016ರಲ್ಲಿ ಈ ಶಾಲೆಗೆ ಕೊನೆಯ ಭೇಟಿ ನೀಡಿದ್ದು, ಬಳಿಕ ಆರೋಗ್ಯ ಸಮಸ್ಯೆಯಿಂದ ಹೆಚ್ಚಾಗಿ ಆಗಮಿಸುತ್ತಿರಲಿಲ್ಲ. ಇತ್ತೀಚೆಗೆ ಶಾಲಾ ಆವರಣದಲ್ಲಿ ಕಾರು ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿ ಕೆಲಹೊತ್ತು ಮಕ್ಕಳನ್ನು ಕಣ್ತುಂಬಿಕೊಂಡಿದ್ದರು ಎಂದು ಸ್ಮರಿಸಿದರು. 

ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿರುವ ಸುದ್ದಿ ಮಕ್ಕಳಿಗೂ ಗೊತ್ತಾಗಿತ್ತು. ಹೀಗಾಗಿಯೇ ಇತ್ತೀಚೆಗೆ ಯಾವುದೇ ಆ್ಯಂಬುಲೆನ್ಸ್‌ ಸದ್ದು ಕೇಳಿದರೂ, ಸ್ವಾಮೀಜಿಗೆ ಆರೋಗ್ಯ ಚೆನ್ನಾಗಿಲ್ಲ ಅಲ್ವಾ ಅದಕ್ಕೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾರೆ ಎಂದು ಕೇಳುತ್ತಿದ್ದರು. ಜ.19ರಂದು ಮಕ್ಕಳೆಲ್ಲರೂ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡು ಬಂದಿದ್ದರು ಎಂದು ವಿವರಿಸಿದರು. 

– ಮಂಜುನಾಥ ಲಘುಮೇನಹಳ್ಳಿ 

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.