ಹಿರಿಯ ನಾಗರಿಕರ ರಕ್ಷಕರಿಗೆ ಅಭದ್ರತೆ 


Team Udayavani, Jan 22, 2019, 12:50 AM IST

senior.jpg

ಉಡುಪಿ: ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಶಕ್ತೀಕರಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ “ಹಿರಿಯ ನಾಗರಿಕರ ಸಹಾಯವಾಣಿ’ಗೆ ಆರು ತಿಂಗಳುಗಳಿಂದ ಅನುದಾನ ಬಿಡುಗಡೆಯಾಗಿಲ್ಲ. ಹಾಗಾಗಿ ಅದರ ಅಧಿಕಾರಿ, ಸಿಬಂದಿಗೆ ವೇತನವೂ (ಗೌರವಧನ) ಸಿಗುತ್ತಿಲ್ಲ.

ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿ ಜಿಲ್ಲಾ ವ್ಯಾಪ್ತಿಯನ್ನು ಹೊಂದಿದೆ. ಇದನ್ನು ಉಡುಪಿ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ನಿರ್ವಹಿಸುತ್ತಿದೆ. ಮೂವರು ಅಪ್ತಸಮಾಲೋಚಕರು, ಸೂಪರ್‌ವೈಸರ್‌ ಮತ್ತು ಕೋ-ಆರ್ಡಿನೇಟರ್‌ ಇಲ್ಲಿದ್ದಾರೆ. ದಿನನಿತ್ಯ ಹತ್ತಾರು ಪ್ರಕರಣಗಳನ್ನು ನಿಭಾಯಿಸಲಾಗುತ್ತದೆ.

ನಿರಂತರ ಕೆಲಸ 
ಅಸಹಾಯಕ, ಅನಾಥ ಹಿರಿಯ ನಾಗರಿಕರನ್ನು ಪತ್ತೆಹಚ್ಚಿ ಆಪ್ತಸಮಾಲೋಚನೆ ನಡೆಸುವ, ಚಿಕಿತ್ಸೆ ಕೊಡಿಸುವ, ಮನೆಯವರ ಪತ್ತೆಯಾದರೆ ಕರೆಯಿಸಿ ಕೌನ್ಸೆಲಿಂಗ್‌ ನಡೆಸುವ, ಅಗತ್ಯ ಬಿದ್ದರೆ ವೃದ್ಧಾಶ್ರಮಕ್ಕೆ ಸೇರ್ಪಡೆಗೊಳಿಸುವ ಕೆಲಸವನ್ನು ಕೂಡ ಸಹಾಯವಾಣಿ ಸಿಬಂದಿ ಮಾಡುತ್ತಾರೆ. ಸಾರ್ವಜನಿಕರಿಗೆ ಮಾಹಿತಿ, ಜಾಗೃತಿ ಶಿಬಿರಗಳ ಮೂಲಕ ಕಾಳಜಿ ಮೂಡಿಸುವ ಕೆಲಸಗಳು ಕೂಡ ನಡೆಯುತ್ತಿವೆ. ನಾನಾ ಕಾರಣಗಳಿಂದ ಬೀದಿಗೆ ಬೀಳುವ ಹಿರಿಯ ನಾಗರಿಕರ ಪಾಲಿಗೆ ಆಪದ್ಭಾಂಧವನಂತೆ ಇದು ಕಾರ್ಯನಿರ್ವಹಿಸುತ್ತ ಬಂದಿದೆ. ಆದರೆ ಈಗ ಗೌರವಧನ ಸಿಗದೆ ಸಹಾಯವಾಣಿ ಸಿಬಂದಿಯೇ ಅತಂತ್ರರಾಗಿದ್ದಾರೆ. 

ಎಸ್‌ಪಿ ಕಚೇರಿಯಲ್ಲಿ ಜಾಗವಿಲ್ಲ 
ಹಿರಿಯ ನಾಗರಿಕರ ಸಹಾಯವಾಣಿ ಎಸ್‌ಪಿ ಕಚೇರಿ ಅಥವಾ ಯಾವುದಾದರೊಂದು ಪೊಲೀಸ್‌ ಠಾಣೆ ಕಚೇರಿಯ ಜತೆಜತೆಗೆ ಕಾರ್ಯನಿರ್ವಹಿಸಬೇಕೆಂಬ ನಿಯಮವಿದೆ. ಆದರೆ ಉಡುಪಿಯಲ್ಲಿ ಇದು ಪ್ರಸ್ತುತ ರೆಡ್‌ಕ್ರಾಸ್‌ ಭವನದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಸಹಾಯವಾಣಿಯನ್ನು ಸರಕಾರ, ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಎಸ್‌ಪಿ ಕಚೇರಿಯಲ್ಲಿಯೇ ಅವಕಾಶ ನೀಡುವಂತೆ ಕೋರಲಾಗಿತ್ತಾದರೂ ನೀಡಿಲ್ಲ. ಓಡಾಟಕ್ಕೆ ವಾಹನ ಕೇಳಲಾಗಿತ್ತು, ಅದೂ ಸಿಕ್ಕಿಲ್ಲ. ಈಗ ಅನುದಾನ ಕೂಡ ಬಿಡುಗಡೆ ಮಾಡಿಲ್ಲ ಎಂಬ ಅಸಹಾಯಕತೆ ಸಹಾಯವಾಣಿ ನಿರ್ವಹಿಸುತ್ತಿರುವ ಮಹಿಳಾ ಮಂಡಳಿಗಳ ಒಕ್ಕೂಟದ ಪದಾಧಿಕಾರಿಗಳದ್ದು. 

ಬೇರೆ ಜಿಲ್ಲೆಗಳಲ್ಲಿ ಇಂತಹ ಸಮಸ್ಯೆಗಳಿಲ್ಲ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಯತ್ನಪಟ್ಟರೆ ಅನುದಾನ ದೊರೆಯಬಹುದು. ಉಡುಪಿಯ ಹಿರಿಯ ನಾಗರಿಕರ ಸಹಾಯವಾಣಿಗೆ ರಾಜ್ಯದಲ್ಲಿಯೇ ಉತ್ತಮ ಹೆಸರಿದೆ. ಆದರೆ ಈಗ ಇದನ್ನು ಮುಂದುವರಿಸುವುದು ಹೇಗೆಂಬ ಚಿಂತೆ ಕಾಡುತ್ತಿದೆ ಎಂದು ಸಿಬಂದಿ ಅಸಮಾಧಾನ ತೋಡಿಕೊಂಡಿದ್ದಾರೆ.

ಹಿರಿಯ ನಾಗರಿಕರ ರಕ್ಷಣೆಯ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಬರುತ್ತಿರುವ ಸಹಾಯವಾಣಿಯವರಿಗೆ ಗೌರವಧನ ದೊರೆಯದಿರುವುದನ್ನು ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದೇವೆ. ಸದ್ಯ ಅನುದಾನ ಬಾರದಿದ್ದರೂ ಇತರ ಅಗತ್ಯ ಖರ್ಚನ್ನು ಹೊಂದಿಸಿಕೊಂಡು ಹೋಗುತ್ತಿದ್ದೇವೆ. ಆದರೆ ಗೌರವಧನ ಪಾವತಿ ಸಾಧ್ಯವಾಗುತ್ತಿಲ್ಲ. 
– ವಸಂತಿ ರಾವ್‌ ಕೊರಡ್ಕಲ್‌
ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ 

ಸರಕಾರಿ ಮಟ್ಟದಲ್ಲೇ ಆಗಬೇಕು
 ಇದು ಇಡೀ ರಾಜ್ಯದಲ್ಲಿರುವ ಸಮಸ್ಯೆ. ಇಲಾಖೆಯ ನಿರ್ದೇಶಕರಿಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅನುದಾನ ಬರುವ ವರೆಗೆ ಒಕ್ಕೂಟದವರೇ ನಿರ್ವಹಿಸಬೇಕಾಗುತ್ತದೆ. ಕೆಲವೇ ದಿನಗಳಲ್ಲಿ ಅನುದಾನ ಬಿಡುಗಡೆಯಾಗುವ ಭರವಸೆ ದೊರೆತಿದೆ.
– ನಿರಂಜನ್‌,  ಹಿರಿಯ ನಾಗರಿಕರು ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ

– ಸಂತೋಷ್‌ ಬೊಳ್ಳೆಟ್ಟು 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.