ಸಬ್ಸಿಡಿ ಬದಲಿಗೆ ನಗದು?


Team Udayavani, Jan 22, 2019, 2:29 AM IST

82.jpg

ಹೊಸದಿಲ್ಲಿ: ದೇಶದಲ್ಲಿ ರೈತರ ಸಮಸ್ಯೆಯನ್ನು ನೀಗಿಸುವ ಉದ್ದೇಶದಿಂದ ಕೇಂದ್ರ ಸರಕಾರವು ಸಬ್ಸಿಡಿ ನೀಡುವುದರ ಬದಲಿಗೆ ರೈತರಿಗೆ ನೇರವಾಗಿ ನಗದು ನೀಡುವ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎನ್ನಲಾಗಿದೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಯೋಜನೆ ಮಹತ್ವದ್ದಾಗಿದ್ದು, ಇದಕ್ಕಾಗಿ ಸುಮಾರು 70 ಸಾವಿರ ಕೋಟಿ ರೂ. ಮೀಸಲಿಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ರಸಗೊಬ್ಬರ ಸೇರಿದಂತೆ ಹಲವು ರೀತಿಯ ಸಬ್ಸಿಡಿಗಳನ್ನು ರೈತರಿಗೆ ಸದ್ಯ ನೀಡಲಾಗುತ್ತಿದೆ. ಇದೆಲ್ಲವನ್ನೂ ಸೇರಿಸಿ ರೈತರಿಗೆ ನೇರವಾಗಿ ನಗದು ಪಾವತಿ ಮಾಡಲಾಗುತ್ತದೆ. ಈ ಎಲ್ಲ ಸಬ್ಸಿಡಿಗಳನ್ನು ರದ್ದುಗೊಳಿಸುವುದರಿಂದ ರೈತರು ಇವುಗಳನ್ನು ಮಾರುಕಟ್ಟೆ ದರದಲ್ಲಿ ಖರೀದಿ ಮಾಡಬೇಕಿರುತ್ತದೆ. ಸದ್ಯ ಸಬ್ಸಿಡಿಗೂ ಕೂಡ ಸರಕಾರ 70 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ.

ಹೆಕ್ಟೇರ್‌ಗೆ 15 ಸಾವಿರ ರೂ.?: ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಜಾರಿಗೊಳಿಸಿದ ಹೆಕ್ಟೇರ್‌ಗೆ 15 ಸಾವಿರ ರೂ. ನೀಡುವ ಯೋಜನೆಯನ್ನು ಆರಂಭಿಸುವಂತೆ ಸರಕಾರಕ್ಕೆ ನೀತಿ ಆಯೋಗ ಸಲಹೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದಾಗಿ ವರ್ಷದಲ್ಲಿ ಸಬ್ಸಿಡಿ ಹೊರೆ ಸರಕಾರಕ್ಕೆ ಕಡಿಮೆ ಯಾಗುತ್ತದೆ. ಅಂದರೆ ಸರಕಾರ ಈಗ 2 ಲಕ್ಷ ಕೋಟಿ ರೂ. ವಾರ್ಷಿಕ ಸಬ್ಸಿಡಿಯನ್ನು ನೀಡುತ್ತಿದೆ. ದೇಶದ ಒಟ್ಟು ನಾಟಿ ಪ್ರದೇಶದೊಂದಿಗೆ ಇದನ್ನು ಲೆಕ್ಕ ಮಾಡಿದರೆ ಪ್ರತಿ ಹೆಕ್ಟೇರ್‌ಗೆ ಸರಕಾರ 15 ಸಾವಿರ ರೂ. ವೆಚ್ಚ ಮಾಡುತ್ತಿದೆ.

ಹೆಚ್ಚಲಿದೆ ರೈತರ ಶ್ರಮ: ಬೆಳೆಗೆ ಸಬ್ಸಿಡಿ ನೀಡುವುದರ ಬದಲಿಗೆ ರೈತರಿಗೇ ಸಬ್ಸಿಡಿ ನೀಡುವುದರಿಂದ ಉತ್ತಮ ಬೆಳೆ ಬೆಳೆಯಲು ರೈತರು ಶ್ರಮಿಸಲಿದ್ದಾರೆ. ಸದ್ಯ ಸರಕಾರವು ಬೆಳೆಗೆ ಉತ್ತಮ ಬೆಲೆ ಒದಗಿಸಲಿ ಎಂದು ರೈತರು ನಿರೀಕ್ಷಿಸುತ್ತಾರೆ. ಆದರೆ ರೈತರಿಗೆ ಬೆಳೆ ಬೆಳೆ ಯುವುದಕ್ಕಾಗಿಯೇ ಸಬ್ಸಿಡಿ ನೀಡುವುದರಿಂದ ರೈತರು, ಉತ್ತಮ ಗುಣಮಟ್ಟದ ಬೆಳೆ ತೆಗೆಯಲು ಶ್ರಮಿಸುತ್ತಾರೆ ಎಂದು ಹೇಳಲಾಗಿದೆ. 2022ರ ವೇಳೆಗೆ ರೈತರ ಆದಾಯ ದುಪ್ಪಟ್ಟುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದು, ಇದನ್ನು ಪೂರೈಸುವ ನಿಟ್ಟಿನಲ್ಲಿ ಸಹಕಾರ ವಲಯ ಹೇಗೆ ನೆರವಾಗಬಹುದು ಎಂಬ ಬಗ್ಗೆ ಈಗಾಗಲೇ ಎರಡು ಸುತ್ತಿನ ಸಭೆಯನ್ನು ನೀತಿ ಆಯೋಗ ನಡೆಸಿದೆ.

ರೈತರಿಗೆ ಆರ್ಥಿಕ ಬಲ; ಸಬ್ಸಿಡಿ ದುರ್ಬಳಕೆಗೂ ಕಡಿವಾಣ
ಈ ಯೋಜನೆಯಿಂದಾಗಿ ರೈತರು ಆರ್ಥಿಕವಾಗಿ ಸಬಲರಾಗುತ್ತಾರೆ. ಅಷ್ಟೇ ಅಲ್ಲ, ಯೂರಿಯಾ ಹಾಗೂ ವಿದ್ಯುತ್‌ ಸಬ್ಸಿಡಿಯನ್ನು ದುರ್ಬಳಕೆ ಮಾಡಿಕೊಳ್ಳುವುದೂ ತಪ್ಪುತ್ತದೆ. ಹೀಗಾಗಿ ಸಬ್ಸಿಡಿಯಿಂದ ರೈತರಿಗೆ ಸಿಗುತ್ತಿದ್ದ ಲಾಭಕ್ಕಿಂತ ಹೆಚ್ಚಿನ ಪ್ರಮಾಣದ ಅನುಕೂಲ ಈ ಅನುದಾನದಿಂದ ಉಂಟಾಗಲಿದೆ. ಅಲ್ಲದೆ ಇದನ್ನು ಜಾರಿಗೊಳಿಸಲು ಸರಕಾರಕ್ಕೆ ಸುಲಭವಾಗಿದ್ದು, ಭ್ರಷ್ಟಾಚಾರವೂ ಕಡಿಮೆಯಾಗಲಿದೆ. 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಕುಟುಂಬಕ್ಕೆ ಈ ಸಬ್ಸಿಡಿ ನೀಡುವುದರಿಂದ ಬಡ ರೈತರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ. ಬೆಳೆಗಳಿಗೆ ಸಬ್ಸಿಡಿ ನೀಡುವುದರ ಬದಲಿಗೆ, ರೈತರಿಗೇ ನೇರವಾಗಿ ಸಬ್ಸಿಡಿ ನೀಡುವ ವಿಧಾನದ ಕುರಿತು ಸರಕಾರ ಹಲವು ತಿಂಗಳುಗಳಿಂದಲೇ ಚರ್ಚೆ ನಡೆಸುತ್ತಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.