ಸದಾಶಿವ ವರದಿ ಜಾರಿ ತಡೆಯುವುದಾಗಿ ಹೇಳಿಲ್ಲ
Team Udayavani, Jan 22, 2019, 7:08 AM IST
ಹುಬ್ಬಳ್ಳಿ: ಸದಾಶಿವ ಆಯೋಗದಿಂದ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇನೆಂದು ಹೇಳಿದ್ದೇನೆ ಹೊರತು ಸದಾಶಿವ ಆಯೋಗ ಜಾರಿಯಾಗದಂತೆ ನೋಡುತ್ತೇನೆ ಎಂದು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ನಗರದಲ್ಲಿ ರವಿವಾರ ನಡೆದ ಭೋವಿ ಸಮಾಜದ ಸಮಾರಂಭದಲ್ಲಿ ಮಾತನಾಡುವಾಗ ಸದಾಶಿವ ಆಯೋಗದಲ್ಲಿ ಅನ್ಯಾಯವಾಗದಂತೆ ನೋಡಿಕೊಳ್ಳಲು ಪ್ರಯತ್ನಿಸಲಾಗುವುದು ಎಂದಿದ್ದೆ. ಆದರೆ ತನ್ನ ಅನಿಸಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ. ಸದಾಶಿವ ಆಯೋಗದ ವಿರುದ್ಧದ ವಿಚಾರ ಖಂಡಿತವಾಗಿಯೂ ನನಗಿಲ್ಲ. ನಾನು ಬಸವಣ್ಣವರ ಅನುಯಾಯಿಯಾಗಿದ್ದು, ಅವರ ತತ್ವ ಪಾಲನೆಯೊಂದಿಗೆ ಬಂದಿದ್ದೇನೆ. ಯಾವುದೇ ಸಮಾಜಕ್ಕೆ ಅನ್ಯಾಯ ಮಾಡುವ ಉದ್ದೇಶ ನನಗೆ ಖಂಡಿತವಾಗಿಯೂ ಇಲ್ಲ. ನನ್ನ ಅನಿಸಿಕೆ ತಪ್ಪಾಗಿ ಗ್ರಹಿಸಿರುವುದಕ್ಕೆ ನೋವಿದೆ. ಒಂದು ವೇಳೆ ಬಾಯ್ತಪ್ಪಿನಿಂದ ಏನಾದರೂ ಶಬ್ದ ಪ್ರಯೋಗವಾಗಿದ್ದರೆ ಅದಕ್ಕೆ ವಿಷಾದಿಸುತ್ತೇನೆ ಎಂದು ಹೊರಟ್ಟಿ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಹುಬ್ಬಳ್ಳಿ: ಸದಾಶಿವ ಆಯೋಗ ಜಾರಿ ತಡೆಯುತ್ತೇನೆ ಎಂದು ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ವಿವಿಧ ದಲಿತಪರ ಸಂಘಟನೆಯವರು ಬಸವರಾಜ ಹೊರಟ್ಟಿ ನಿವಾಸದೆದುರು ಪ್ರತಿಭಟನೆ ನಡೆಸಿದರು. ತಮ್ಮ ಅನಿಸಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೊರಟ್ಟಿ ಸಮಜಾಯಿಷಿ ನೀಡಿ ಮನವೊಲಿಸಿದ್ದರಿಂದ ಹೋರಾಟ ಹಿಂಪಡೆಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ