ಡಾ| ಶಿವಕುಮಾರ ಶ್ರೀಗಳಿಗೆ ಶ್ರದ್ಧಾಂಜಲಿ
Team Udayavani, Jan 22, 2019, 10:49 AM IST
ಔರಾದ: ತ್ರಿವಿಧ ದಾಸೋಹಿ, ಶತಾಯುಷಿ ಡಾ| ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ತಾಲೂಕಿನ ಸಾಹಿತಿಗಳ ಬಳಗ ಹಾಗೂ ವಿವಿಧ ಸಂಘಟನೆಗಳ ಮುಖಂಡರಿಂದ ಪಟ್ಟಣದ ಕನ್ನಡಾಂಬೆ ವೃತ್ತದ ಬಳಿ ಶ್ರದ್ಧಾಂಜಲಿ ಸಭೆ ನಡೆಯಿತು.
ಚಂದ್ರಕಾಂತ ನಿರ್ಮಳೆ ಮಾತನಾಡಿ, ಸಿದ್ಧಗಂಗಾ ಶ್ರೀಗಳು ಆಧುನಿಕ ಯುಗದ ಬಸವಣ್ಣರಾಗಿದ್ದರು. ಸರಳ ವ್ಯಕ್ತಿತ್ವದ ಮೂಲಕ ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಿದ ಮಹಾನ್ ಜೀವಿಯಾಗಿದ್ದರು. ಶ್ರೀಗಳು ಇಲ್ಲದ ಕರುನಾಡು ಬಡವಾಗಿದೆ ಎಂದರು.
ಹಿರಿಯ ಸಾಹಿತಿ ಮಾಣಿಕ ನೆಳಗೆ ಮಾತನಾಡಿ, ಸ್ವಾರ್ಥವೇ ತುಂಬಿ ತುಳುಕುತ್ತಿರುವ ಸಮಾಜದಲ್ಲಿ ಶ್ರೀಗಳ ನಿಸ್ವಾರ್ಥ ಕೊಡುಗೆ ಅನನ್ಯವಾಗಿದದ್ದು. ಅದರ ದೇಹ ನಮ್ಮಿಂದ ದೂರವಾದರೂ ಅವರು ಮಾಡಿರುವ ಒಳ್ಳೆಯ ಕಾರ್ಯಗಳು, ಬೋಧಿಸಿ ಧರ್ಮ ಮಾರ್ಗ, ಮಾನವೀಯ ಮೌಲ್ಯಗಳು ಅಜರಾಮರವಾಗಿವೆ ಎಂದರು.
ಅನೀಲಕುಮಾರ ಜಿರೋಬೆ ಮಾತನಾಡಿ, ಮಗುವಿನಂತಹ ಮನಸ್ಸು ಇರುವ ಶ್ರೀಗಳ ದೇಹ ಮಾತ್ರ ನಮ್ಮಿಂದ ದೂರವಾಗಿದೆ. ಅವರು ಮಾಡಿರುವ ಉತ್ತಮ ಕಾರ್ಯಗಳು ಭೂಮಂಡಲ ಇರುವ ತನಕ ಶಾಶ್ವತವಾಗಿ ಉಳಿಯುತ್ತವೆ ಎಂದರು.
ಪ್ರಕಾಶ ಘೂಳೆ, ನಾಗನಾಥ ಚಿಟಗೀರೆ, ಕೀರಣ ಉಪ್ಪೆ, ಚಂದ್ರಕಾಂತ ನಿರ್ಮಳೆ, ಸಿದ್ದು ಚಟ್ನಾಳ, ಶಿವರಾಜ ಅಲ್ಮಾಜೆ ಹಾಗೂ ಇನ್ನಿತರ ಸಂಘ ಸಂಸ್ಥೆಯ ಮುಖಂಡರು ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ