ಅಧ್ಯಾತ್ಮ ಲೋಕದ ಅನರ್ಘ್ಯ ರತ್ನ
Team Udayavani, Jan 22, 2019, 11:01 AM IST
ಬಾಳೆಹೊನ್ನೂರು: ಸಾಧನೆಯ ಸಹ್ಯಾದ್ರಿ, ಕರ್ನಾಟಕ ರತ್ನ, ತ್ರಿವಿಧ ದಾಸೋಹ ಮೂರ್ತಿ ಸಿದ್ಧಗಂಗಾ ಕ್ಷೇತ್ರದ ಡಾ| ಶಿವಕುಮಾರ ಸ್ವಾಮೀಜಿಗಳ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ| ವೀರಸೋಮೇಶ್ವರ ಜಗದ್ಗುರುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಜಗದ್ಗುರುಗಳು, ಬದುಕಿನುದ್ದಕ್ಕೂ ಕ್ರಿಯಾಶೀಲ ವ್ಯಕ್ತಿತ್ವ ಗಳಿಸಿಕೊಂಡ ಶಿವಕುಮಾರ ಶ್ರೀಗಳು ಶೈಕ್ಷಣಿಕ ರಂಗದಲ್ಲಿ ಅದ್ಭುತ ಕ್ರಾಂತಿ ಮಾಡಿದ್ದಾರೆ. 1930ರಲ್ಲಿ ಸಿದ್ಧಗಂಗಾ ಕ್ಷೇತ್ರದ ಅಧಿಕಾರ ವಹಿಸಿಕೊಂಡ ಅವರು, ಆಚಾರ-ವಿಚಾರ ಸಂಪನ್ನರಾಗಿ, 111ನೇ ವಯಸ್ಸಿನಲ್ಲಿಯೂ ಇಷ್ಟಲಿಂಗಾರ್ಚನೆಯ ಪೂಜಾ ಸಂಪನ್ನರಾಗಿ ಧರ್ಮ, ಸಂಸ್ಕೃತಿ, ಆದರ್ಶಗಳ ಪುನರುತ್ಥಾನಕ್ಕಾಗಿ ಶ್ರಮಿಸಿದರು ಎಂದಿದ್ದಾರೆ.
ಸುಮಾರು 10 ಸಾವಿರ ಬಡ ವಿಧ್ಯಾರ್ಥಿಗಳಿಗೆ ಅನ್ನ, ಆಶ್ರಯ ನೀಡಿ ಬೆಳೆಸಿದ ಕೀರ್ತಿ ಶ್ರೀಗಳವರಿಗೆ ಸಲ್ಲುತ್ತದೆ. 2003ರಲ್ಲಿ ಶ್ರೀ ಜಗದ್ಗುರು ರಂಭಾಪುರಿ ಪೀಠದ ಜಾತ್ರಾ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿರುವುದು ಅವರ ಧರ್ಮನಿಷ್ಠೆಗೆ ಸಾಕ್ಷಿಯಾಗಿದೆ. ಶ್ರೀ ರಂಭಾಪುರಿ ಪೀಠದೊಂದಿಗೆ ಆತ್ಮೀಯ ಸಂಬಂಧ, ಸಾಮರಸ್ಯ ಇಟ್ಟುಕೊಂಡ ಹಳೆ ತಲೆಮಾರಿನ ಅಧ್ಯಾತ್ಮ ಲೋಕದ ಅನಘ್ಯರ್ ರತ್ನ ಶಿವೈಕ್ಯರಾದುದು ದು:ಖ ಉಂಟುಮಾಡಿದೆ.
ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ರಂಗದಲ್ಲಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯವಾದುದು. ಅವರ ಪವಿತ್ರ ಆತ್ಮಕ್ಕೆ ಪರಮಾತ್ಮ ಚಿರಶಾಂತಿ ಅನುಗ್ರಹಿಸಲಿ. ನಂಬಿದ ಭಕ್ತ ಸಮುದಾಯಕ್ಕೆ ದು:ಖ ಸಹಿಸಿಕೊಳ್ಳುವ ಶಕ್ತಿಯನ್ನು ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು ಕರುಣಿಸಲೆಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ