ಬೊರಿವಲಿ ಶ್ರೀ ಅಷ್ಟ ವಿನಾಯಕ ಅಯ್ಯಪ್ಪ ಭಕ್ತವೃಂದದಿಂದ ಅರಸಿನ ಕುಂಕುಮ


Team Udayavani, Jan 22, 2019, 12:47 PM IST

11.jpg

ಮುಂಬಯಿ: ಬದಲಾವಣೆಯ ಬದುಕಿನಲ್ಲಿ ತಾರತಮ್ಯಕ್ಕೆ ಮಹತ್ವ ನೀಡದೆ ಸಂಸ್ಕೃತಿಯ ವಿನಿಮಯದ ಜೊತೆಗೆ ಬದಲಾವಣೆ ಯನ್ನು ಮುಂದಿನ ಜನಾಂಗಕ್ಕೆ ಹಸ್ತಾಂತರಿಸುವಲ್ಲಿ ನಾವೆಲ್ಲ ಸಿದ್ಧರಾಗಿರಬೇಕು. ಮಕ್ಕಳು ಇಂದು ಬದಲಾವಣೆ ಬಯಸುತ್ತಿರುವ ಸಕಾಲದಲ್ಲಿ ನಮ್ಮ ಸಮಾಜದ ಸ್ಥಿತಿಗತಿಗಳನ್ನು ಅರ್ಥೈಯಿಸಿಕೊಂಡು ಮುನ್ನಡೆಯುವ ಕಾಲ ಒದಗಿ ಬಂದಿದೆ. ಆದ್ದರಿಂದ ಪ್ರತಿಯೋರ್ವ ಮಹಿಳೆಯರು ತಮ್ಮ ಬದುಕಿನ ಬದಲಾವಣೆಯತ್ತ ಹೆಚ್ಚು ಗಮನ ಹರಿಸಬೇಕು ಎಂದು ಲೇಖಕಿ, ಕವಿ ಅರುಷಾ ಎನ್‌. ಶೆಟ್ಟಿ ನುಡಿದರು.

ಜ. 14ರಂದು ಬೊರಿವಲಿಯ ಓಲ್ಡ್‌ ಎಂಎಚ್‌ಬಿ ಕಾಲನಿಯಲ್ಲಿನ ಶ್ರೀ ಅಷ್ಟ ವಿನಾಯಕ ಅಯ್ಯಪ್ಪ ಭಕ್ತವೃಂದ ಮಹಿಳೆಯರಿಗಾಗಿ ಆಯೋಜಿಸಿದ ಅರಸಿನ ಕುಂಕುಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಧನುರಾಶಿಯಿಂದ ಸೂರ್ಯನು ಮಕರ ರಾಶಿ ಸ್ಥಾನಪಲ್ಲಟಗೊಳ್ಳುವ ಈ ಸಮಯ ಎಲ್ಲ ಕಾರ್ಯಗಳಿಗೆ ಶುಭ ಸಮಯವಾಗಿದ್ದು, ಉತ್ತರಾಯಣದ ಪರ್ವಕಾಲದಲ್ಲಿ ದಾನ-ಧರ್ಮದ ಮೂಲಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಉತ್ತಮ.  ಮಹಿಳೆಯರು ಭೇದ-ಭಾವ ಇಲ್ಲದೆ, ಇಂತಹ ಕಾರ್ಯಕ್ರಮಗಳಲ್ಲಿ ಸಮಾನತೆಯಿಂದ  ತೊಡಗಿಸಿಕೊಳ್ಳ ಬೇಕು ಎಂದು ನುಡಿದರು.

ಇನ್ನೋರ್ವ ಅತಿಥಿ ಲೇಖಕಿ ಲತಾ ಸಂತೋಷ್‌ ಶೆಟ್ಟಿ ಅವರು ಮಾತನಾಡಿ, ಅರಸಿನ ಕುಂಕುಮ ನಮ್ಮ ಭಾರತೀಯ ಪರಂಪರೆಯ ಸರ್ವಧರ್ಮದ ಸಂಕೇತ. ಹಿಂದು, ಮುಸ್ಲಿಂ, ಕ್ರಿಶ್ಚಿಯನ್‌ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅರಸಿನ ಕುಂಕುಮಕ್ಕೆ ಮಹತ್ವವಿದೆ. ಹಿರಿಯರಿಂದ ಬಂದ ನಮ್ಮ ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸುವ ಮೂಲಕ ನಾವು ನಮ್ಮೊಂದಿಗೆ ಬೆಳೆಸಬೇಕು. ಮರಾಠಿ ಮಣ್ಣಿನಲ್ಲಿ ಈ ಸಂಸ್ಕೃತಿಯನ್ನು ಅವರಿಗಿಂತ ಹೆಚ್ಚಾಗಿ ಅದ್ದೂರಿಯಾಗಿ ಆಚರಿಸುತ್ತಿರುವುದು ವಾಸ್ತವ. ಎಲ್ಲಿ ಭಜನೆ ಇದೆಯೋ ಅಲ್ಲಿ ವಿಭಜನೆಯಿಲ್ಲ. ಈ ಭಜನ ಕಾರ್ಯಕ್ರಮಗಳು ಹೊಸ ತಲೆಮಾರಿಗೆ ಒಂದು ಕೊಡುಗೆಯಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಾಜ ಸೇವಕಿ, ಚಾರ್‌ಕೋಪ್‌ ಕನ್ನಡಿಗರ ಬಳಗದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪದ್ಮಾವತಿ ಬಿ. ಶೆಟ್ಟಿ ಅವರು ಮಾತನಾಡಿ, ಹಿಂದು ಸಂಸ್ಕೃತಿಯ ಪ್ರಕಾರ ಹೆಣ್ಮಕ್ಕಳು ಮಾತೃಭಾವದ ಸಂಕೇತ. ಧಾರ್ಮಿಕತೆಯತ್ತ ಹೆಚ್ಚು ಪ್ರಭಾವಿತರಾದಾಗ ಸಂಸ್ಕೃತಿ, ಸಂಸ್ಕಾರಕ್ಕೆ ಹೊಸ ರೂಪುರೇಷೆ ದೊರೆಯುತ್ತದೆ. ಬದಲಾವಣೆಯ ಕಾಲಘಟ್ಟದಲ್ಲಿ ಮಹಿಳೆಯರು ಸಂಸ್ಕಾರದಿಂದ ದೂರ ಉಳಿಯುತ್ತಿರು ವುದು ವಿಷಾದನೀಯ. ಪ್ರತೀ ಯೋರ್ವ ಮಹಿಳೆಯರು ಅರಸಿನ- ಕುಂಕುಮವನ್ನು ಹಾಕಿ ತಾನೋರ್ವೆ ಪ್ರಕೃತಿಯ ಸೌಮ್ಯತೆಯನ್ನು ಪ್ರದರ್ಶಿಸಲು ಮುಂದಾಗಬೇಕು ಎಂದು ಹೇಳಿದರು.

ಕವಿ, ಲೇಖಕ ಶಿಮಂತೂರು ಚಂದ್ರಹಾಸ ಸುವರ್ಣ ಅವರು ಮಾತನಾಡಿ, ಅರಸಿನ ಕುಂಕುಮ ಮುತ್ತೆ$çದೆಯರಿಗೆ ಮೀಸಲು ಎಂದು ಒಪ್ಪಲು ಸಾಧ್ಯವಿಲ್ಲ. ಇದೊಂದು ಮಹಿಳೆಯರು ಸಮಾನತೆಯನ್ನು ಪ್ರದರ್ಶಿಸುವ ಕಾರ್ಯಕ್ರಮವಾಗಬೇಕು. ಹೆಣ್ಣು ಹೆಣ್ಣಿಗೆ ಶತ್ರುವಾಗಬಾರದು. ಎಲ್ಲಕ್ಕಿಂತ ಮುಖ್ಯವಾಗಿ ಅರಸಿನ ಕುಂಕುಮ ಕಾರ್ಯಕ್ರಮ ನಮ್ಮ ಸಂಸ್ಕೃತಿಯಲ್ಲ ಎಂದು ನನ್ನ ಅನಿಸಿಕೆಯಾಗಿದೆ ಎಂದರು.

ಭಕ್ತವೃಂದ ಮಹಿಳಾ ಸದಸ್ಯೆಯರುಗಳಾದ ಕುಸುಮಾ ಅಮೀನ್‌, ರತ್ನಾ ಪೂಜಾರಿ, ಸುಲೋಚನಾ ಕುಕ್ಯಾನ್‌, ಹರಿಣಾ ಕೆ. ಸುವರ್ಣ, ವೇದಾ ಶೆಟ್ಟಿ, ದಯಾವತಿ ಶೇರ್ವೆಗಾರ್‌ ಅತಿಥಿಗಳನ್ನು ಶಾಲು ಹೊದೆಸಿ ಗೌರವಿಸಿದರು. ವೃಂದದ ಅಧ್ಯಕ್ಷ ಪ್ರವೀಣ್‌ ಶೆಟ್ಟಿ, ಸುರೇಶ್‌ ಗುರುಸ್ವಾಮಿ ಅವರನ್ನು  ಗೌರವಿಸಲಾಯಿತು. ಪ್ರಾರಂಭದಲ್ಲಿ ಮಹಿಳೆಯರಿಂದ ಭಜನ ಕಾರ್ಯಕ್ರಮ ನಡೆಯಿತು.

ಪರಿಸರದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಮಂದಿರದಲ್ಲಿ ವಿಶೇಷ ದೀಪಾಲಂಕಾರ, ಪೂಜೆ, ಪ್ರಸಾದ ವಿತರಣೆ ನಡೆಯಿತು. ವೃಂದದ ಸದಸ್ಯ ಶಿಮಂತೂರು ಪ್ರವೀಣ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವೇದಿಕೆಯಲ್ಲಿ ಲೀಲಾವತಿ ಎನ್‌. ಆಚಾರ್ಯ, ಲಕ್ಷ್ಮೀ  ಜಿ. ದೇವಾಡಿಗ, ಸಮಾಜ ಸೇವಕಿ ವಿಜಯಲಕ್ಷ್ಮೀ ಶೆಟ್ಟಿ, ರತ್ನಾ ಪೂಜಾರಿ, ಮಾಧುರಿ ಪೆಡೆ°àಕರ್‌ ಉಪಸ್ಥಿತರಿದ್ದರು.

ಚಿತ್ರ-ವರದಿ : ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.