ಕುಲಾಲ ಸಂಘ ನವಿಮುಂಬಯಿ ಸ್ಥಳೀಯ ಸಮಿತಿ: ಅರಸಿನ ಕುಂಕುಮ 


Team Udayavani, Jan 22, 2019, 2:08 PM IST

9.jpg

ನವಿ ಮುಂಬಯಿ: ತವರೂರಿನಲ್ಲಿ ನಡೆಯುವ ಸಂಘಗಳ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಕಡಿಮೆ ಸಂಖ್ಯೆಯಲ್ಲಿರುತ್ತಾರೆ. ಆದರೆ ಮುಂಬಯಿಯ ನಗರದಲ್ಲಿ ಸಂಘ ಆಯೋಜಿಸುವ ಯಾವುದೇ ಕಾರ್ಯಕ್ರಮವಾದರೂ ಒಗ್ಗಟ್ಟಿನಿಂದ ಸೇರಿಕೊಳ್ಳುತ್ತಾರೆ. ಇದು ನಮ್ಮೂರಿನ ಸಂಘಗಳಿಗೆ ಮುಂಬಯಿ ಸಂಘ ಆದರ್ಶವಾಗಿದೆ. ಬಹಳಷ್ಟು ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡಿರುವುದು ಸಂಘದ ಅಭಿವೃದ್ಧಿಯ ದ್ಯೋತಕವಾಗಿದೆ. ಮುಂದಿನ ದಿನಗಳಲ್ಲೂ ಕೂಡ ಮಹಿಳಾ ವಿಭಾಗದ ಎಲ್ಲಾ ಕಾರ್ಯಕ್ರಮಗಳಿಗೂ ಸ್ಫೂರ್ತಿ ತುಂಬುವ ಸೇವಾ ಕಾರ್ಯಗಳನ್ನು ಮಹಿಳೆಯರು ನಡೆಸಬೇಕು ಎಂದು ಮುಂಬಯಿ ಕುಲಾಲ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್‌. ಗುಜರನ್‌ ನುಡಿದರು.

ಜ. 13 ರಂದು ವಾಶಿಯ ಕನ್ನಡ ಸಂಘದ ಸಭಾಗೃಹದಲ್ಲಿ ನಡೆದ ಕುಲಾಲ ಸಂಘ ಮುಂಬಯಿ ಇದರ ನವಿಮುಂಬಯಿ ಸ್ಥಳೀಯ ಸಮಿತಿಯ ಅರಸಿನ ಕುಂಕುಮ ಮತ್ತು 100 ನೇ ಭಜನಾ ಮಂಗಳ್ಳೋತ್ಸವದ ಸಮಾರಂಭವನ್ನು ದೀಪಪ್ರಜ್ವಲಿಸಿ ಮಾತನಾಡಿ ಶುಭಹಾರೈಸಿದರು.

ಕಾರ್ಯಕ್ರಮವನ್ನು ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಕುಲಾಲ ಸಂಘ ಮುಂಬಯಿ ಅಧ್ಯಕ್ಷ ದೇವದಾಸ್‌ ಎಲ್‌. ಕುಲಾಲ್‌ ಅವರು, ಅರ್ಥಪೂರ್ಣವಾಗಿರುವ ಅರಸಿನ ಕುಂಕುಮ ಕಾರ್ಯಕ್ರಮ ಮಹಿಳೆಯರನ್ನು ಒಗ್ಗೂಡಿಸಿದೆ. ನಮ್ಮ ಬದುಕನ್ನು ಧಾರ್ಮಿಕತೆಯತ್ತ ಕೊಂಡೊಯ್ಯಲು ಭಜನೆಯಿಂದ ಸಾಧ್ಯ. ಅಂತಹ ಭಜನೆಯನ್ನು ನೂರು ಮನೆಗಳಲ್ಲಿ ನಡೆಸಿರುವ ನವಿಮುಂಬಯಿ ಸ್ಥಳೀಯ ಸಮಿತಿಯ ಎಲ್ಲಾ ಬಂಧುಗಳು ಅಭಿನಂದನಾರ್ಹರು. ನಮ್ಮ ಸಮಾಜದ ಬಂಧುಗಳು ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿರುವುದು ಸಮಾಜಕ್ಕೆ ಸಂಘಕ್ಕೆ ಕೀರ್ತಿ ತಂದಿದೆ. ಸಮಾಜ ಬಾಂಧವರು ನಡೆಸುವ ಯಾವುದೇ ಕಾರ್ಯಕ್ರಮಕ್ಕೂ ಕೂಡ ಸಹಕಾರ ನೀಡಬೇಕು ಎಂದು ನುಡಿದರು.

ವೇದಿಕೆಯಲ್ಲಿ ನವಿಮುಂಬಯಿ ಸ್ಥಳೀಯ ಸಮಿತಿಯ ಉಪಾಧ್ಯಕ್ಷ ಸುರೇಶ್‌ ಕೆ. ಕುಲಾಲ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಶಿಕಲಾ ಎಸ್‌. ಮೂಲ್ಯ, ಉಪಾಧ್ಯಕ್ಷೆ ಹರಿಣಾಕ್ಷೀ ಎ. ಸಾಲ್ಯಾನ್‌, ಕಾರ್ಯದರ್ಶಿ ಬೇಬಿ ವಿ. ಬಂಗೇರ, ಕೋಶಾಧಿಕಾರಿ ಮಲ್ಲಿಕಾ ಡಿ. ಕುಲಾಲ್‌ ಅವರು ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಶಶಿಕಲಾ ಎಸ್‌. ಮೂಲ್ಯ ಸ್ವಾಗತಿಸಿದರು. ಪ್ರೇಮಾ ಸಿ. ಮೂಲ್ಯ ಅರಸಿನ ಕುಂಕುಮದ ಬಗ್ಗೆ ವಿವರಿಸಿ ಅದರ ಮಹತ್ವವನ್ನು ತಿಳಿಸಿದರು. 
ಮಮತಾ ಕುಲಾಲ್‌ ಅತಿಥಿಗಳನ್ನು ಪರಿಚಯಿಸಿದರು. ಸುನೀತಾ ಎಸ್‌. ಮೂಲ್ಯ ಭಜನೆ ಬಗ್ಗೆ ತಿಳಿಸಿದರು. ಶಕುಂತಳಾ ಆರ್‌. ಬಂಜನ್‌, ಉಷಾ ಆರ್‌. ಮೂಲ್ಯ, ಸುಶೀಲಾ ಪಿ. ಬಂಗೇರ ಪ್ರಾರ್ಥನೆಗೈದರು.

ಹರಿಣಾಕ್ಷೀ ಎ. ಸಾಲ್ಯಾನ್‌ ವಂದಿಸಿದರು. ಬೇಬಿ ವಿ. ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಮಹಿಳಾ ವಿಭಾಗದ ಕಾರ್ಯದರ್ಶಿ ಮಾಲತಿ ಜಯ ಅಂಚನ್‌ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಐದು ಸ್ಥಳೀಯ ಸಮಿತಿಗಳಿಂದ ಭಜನೆ, ಕುಣಿತ ಭಜನೆ ನಡೆಯಿತು. ಆನಂತರ ಶ್ರೀ ಸತ್ಯನಾರಾಯಣ ಮಹಾಪೂಜೆ, ಭಜನೆಯ ಮಂಗಳ್ಳೋತ್ಸವವು ಜರಗಿತು.

ದಯಾನಂದ ಕುಲಾಲ್‌ ಮತ್ತು ಮಲ್ಲಿಕಾ ಕುಲಾಲ್‌ ಅವರ ಸೇವಾರ್ಥಕವಾಗಿ ಅನ್ನಸಂತರ್ಪಣೆ ನಡೆಯಿತು. ಸಭಾಂಗಣದಲ್ಲಿ ಕುಲಾಲ ಸಮಾಜದ ಮೂಲ ಕಸುಬಿನ ಚಿತ್ರಣಗಳು, ವಾರ್ಷಿಕ ಸಮಾರಂಭದಲ್ಲಿ ಆಯೋಜಿಸಿದ ನಾಟಕ, ಸಾಂಸ್ಕೃತಿಕ ಕಾರ್ಯಕ್ರಮ ಗಳ ಚಿತ್ರಣಗಳನ್ನು ಪ್ರದರ್ಶಿಸಲಾಯಿತು. ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು, ಸಮಾಜ ಬಾಂಧವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.