ಆಸೀಸ್‌ಗಿಂತ ಕಿವೀಸ್‌ ಸವಾಲು ಕಠಿನ


Team Udayavani, Jan 23, 2019, 12:50 AM IST

assis.jpg

ನೇಪಿಯರ್‌: ಆಸ್ಟ್ರೇಲಿಯದಲ್ಲಿ ಸಾಧಿಸಿದ ಏಕದಿನ ಸರಣಿಯ ಗೆಲುವಿನ ಸಂಭ್ರಮದಲ್ಲಿರುವ ಭಾರತ ತಂಡ ಬುಧ ವಾರದಿಂದ ಮತ್ತೂಂದು ಸವಾಲಿಗೆ ಸಿದ್ಧವಾಗ ಬೇಕಿದೆ. ಅದುವೇ ನ್ಯೂಜಿಲ್ಯಾಂಡ್‌ ನೆಲದ ಅಗ್ನಿಪರೀಕ್ಷೆ. ಆಸೀಸ್‌ಗೆ ಹೋಲಿಸಿದರೆ ಕಿವೀಸ್‌ ಸವಾಲು ಕಠಿನ.

ದಿಢೀರನೇ ಆಯೋಜಿಸಲಾದ ಈ ಸರಣಿಯಲ್ಲಿ 5 ಏಕದಿನ ಪಂದ್ಯ ಒಳಗೊಂಡಿದೆ. ನೇಪಿಯರ್‌ನಲ್ಲಿ ಬುಧವಾರ ಮೊದಲ ಮುಖಾಮುಖೀ ಸಾಗಲಿದೆ. 

ಶ್ರೀಲಂಕಾವನ್ನು 3-0 ವೈಟ್‌ವಾಶ್‌ ಮಾಡಿ ಭಾರತವನ್ನು ಎದುರಿಸಲು ಸಜ್ಜಾಗಿರುವ “ಬ್ಲ್ಯಾಕ್‌ ಕ್ಯಾಪ್ಸ್‌’ ಪೂರ್ಣ ಸಾಮರ್ಥ್ಯದ ಪಡೆಯನ್ನು ಹೊಂದಿದೆ. ಆಸೀಸ್‌ಗಿಂತ ಬಲಿಷ್ಠವಾಗಿರುವ ಕಿವೀಸ್‌ ತಂಡ ಭಾರತದ ಗೆಲುವಿನ ಓಟಕ್ಕೆ ಬ್ರೇಕ್‌ ನೀಡುವ ಸಾಧ್ಯತೆಗಳೆಲ್ಲವೂ ದಟ್ಟವಾಗಿವೆ. ಮ್ಯಾಕ್ಲಿನ್‌ ಪಾರ್ಕ್‌ನಲ್ಲಿ ನಡೆಯಲಿರುವ ಈ ಪಂದ್ಯವನ್ನು 30 ಡಿಗ್ರಿ ಸೆಲ್ಸಿಯಸ್‌ ಧಗೆಯ ವಾತಾವರಣದಲ್ಲಿ ಆಡಬೇಕಾಗಿದೆ.

ವಿಶ್ವಕಪ್‌ಗಾಗಿ ಸಂಪೂರ್ಣ ಗಮನ ಕೇಂದ್ರೀಕರಿಸಿರುವ ಭಾರತ ತಂಡ ಇನ್ನೂ ಮಧ್ಯಮ ಕ್ರಮಾಂಕದಲ್ಲಿ ಗಟ್ಟಿಯಾಗಿ ನೆಲೆಯೂರಬಲ್ಲ ಆಟಗಾರರ ಹುಡುಕಾಟದಲ್ಲಿದೆ. ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ಧೋನಿ ಅವರ ಹ್ಯಾಟ್ರಿಕ್‌ ಅರ್ಧಶತಕದಿಂದ ತಂಡ ಸ್ವಲ್ಪಮಟ್ಟಿಗೆ ಸಮಾಧಾನಪಟ್ಟುಕೊಂಡಿದೆ. ಆದರೆ ನ್ಯೂಜಿಲ್ಯಾಂಡ್‌ನ‌ ಸಣ್ಣ ಮೈದಾನಗಳು ಸೀಮ್‌ ದಾಳಿಗೆ ಯೋಗ್ಯವಾಗಿರುವುದರಿಂದ ಟ್ರೆಂಟ್‌ ಬೌಲ್ಟ್,  ಲಾಕಿ ಫ‌ಗುÕìಸನ್‌, ಟಿಮ್‌ ಸೌಥಿ ಅವರ ದಾಳಿ “ಮೆನ್‌ ಇನ್‌ ಬ್ಲೂ’ಗೆ ದೊಡ್ಡ ಸವಾಲಾಗಿ ಪರಿಣಮಿಸಲಿದೆ.

ಎಲ್ಲ ತಂಡಗಳು ತವರು ಮೈದಾನದಲ್ಲಿ ಬಲಿಷ್ಠವಾಗಿರುವಂತೆ ನ್ಯೂಜಿಲ್ಯಾಂಡ್‌ ಕೂಡ ತನ್ನ ತವರಿನ ಪಂದ್ಯಗಳಲ್ಲಿ ಹಿಡಿತ ಸಾಧಿಸಿಕೊಂಡಿದೆ. ತವರಿನಲ್ಲಿ ಆಡಲಾದ 34 ಪಂದ್ಯಗಳಲ್ಲಿ ಆತಿಥೇಯರು ಕೇವಲ 10 ಪಂದ್ಯಗಳನ್ನು ಮಾತ್ರ ಭಾರತಕ್ಕೆ ಬಿಟ್ಟುಕೊಟ್ಟಿದ್ದಾರೆ.

ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಪ್ರಾಧಾನ್ಯ
ಭಾರತದ ತಂಡವನ್ನು ಗಮನಿಸಿದರೆ ಅಗ್ರ ಕ್ರಮಾಂಕ ಬಲಿಷ್ಠವಾಗಿದೆ. ಎಡಗೈ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ ಅವರ ಫಾರ್ಮ್ ಬಗ್ಗೆ ಹೆದರುವ ಅಗತ್ಯವಿಲ್ಲ. ಆದರೆ ಕಳೆದ 9 ಪಂದ್ಯಗಳಲ್ಲಿ ಅವರದು ನೀರಸ ಬ್ಯಾಟಿಂಗ್‌. ಈ ವೇಳೆ 35 ರನ್‌ ಗಳಿಸಿದ್ದು ಗರಿಷ್ಠ ಮೊತ್ತವಾಗಿತ್ತು. ಇಂಗ್ಲೆಂಡ್‌ ಲಯನ್ಸ್‌ ತಂಡದ ವಿರುದ್ಧದ ಪಂದ್ಯಕ್ಕಾಗಿ ರಿಷಬ್‌ ಪಂತ್‌ ಅವರನ್ನು ತಂಡದಿಂದ  ಕೈಬಿಡಲಾಗಿದೆ. ಪ್ರತಿಭಾನ್ವಿತ ಶುಭ್‌ಮನ್‌ ಗಿಲ್‌ ಅವರನ್ನು ಮೀಸಲು ಆರಂಭಿಕರಾಗಿ ಆಯ್ಕೆ ಮಾಡಲಾಗಿದೆ. ಅವರು ಧವನ್‌ ಬದಲಿಗೆ ತಂಡಕ್ಕೆ ಆಯ್ಕೆಯಾಗುವ ಸಂಭವವಿದೆ. 

ಭಾರತ ಗಮನ ಹರಿಸಬೇಕಾದ ಮತ್ತೂಂದು ಸ್ಥಾನ ನಂ. 4. ಈ ಸ್ಥಾನವನ್ನು ಸದ್ಯ ಅಂಬಟಿ ರಾಯುಡು ಭದ್ರಪಡಿಸಿಕೊಳ್ಳುವ ಉತ್ಸಾಹ ದಲ್ಲಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ಧೋನಿ 4ನೇ ಸ್ಥಾನದಲ್ಲಿ ಆಡಿದ್ದು, ನಾಯಕ ಕೊಹ್ಲಿ ಪಂದ್ಯದ ಸನ್ನಿವೇಶಕ್ಕೆ ಅನುಗುಣವಾಗಿ ಅವರನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ. ನೇಪಿಯರ್‌ ಮೈದಾನ ರನ್‌ ಹೊಳೆಗೆ ಉತ್ತಮವಾಗಿರುವುದರಿಂದ ದಿನೇಶ್‌ ಕಾರ್ತಿಕ್‌ ಅಥವಾ ಕೇದಾರ್‌ ಜಾಧವ್‌ ಅಗ್ರ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ. 

ಬೌಲಿಂಗ್‌ ವಿಭಾಗದಲ್ಲಿ ಭಾರತ ಸಾಕಷ್ಟು ಬಲಿಷ್ಠವಾಗಿದ್ದು, ಭುವನೇಶ್ವರ್‌ ಕುಮಾರ್‌, ಮೊಹ್ಮಮದ್‌ ಶಮಿ ಅವರ ಕೈಚಳಕ ನಡೆಯುವ ಭರವಸೆಯಿದೆ. ಮೂರನೇ ವೇಗಿಯಾಗಿ ಮೊಹಮ್ಮದ್‌ ಸಿರಾಜ್‌ ಅಥವಾ ಖಲೀಲ್‌ ಅಹ್ಮದ್‌ ಇವರಿಬ್ಬರಲ್ಲಿ ಓರ್ವನನ್ನು ಆಯ್ಕೆ ಮಾಡಲೂಬಹುದು.

ತವರಿನಲ್ಲಿ ನ್ಯೂಜಿಲ್ಯಾಂಡ್‌ ತಂಡ ಉತ್ಕೃಷ್ಟ ನಿರ್ವಹಣೆ ನೀಡುತ್ತಿದೆ. ತಂಡದ ಅಗ್ರಕ್ರಮಾಂಕದ ಆಟಗಾರರ ಶ್ರೇಷ್ಠ ನಿರ್ವಹಣೆಯಿಂದ ತಂಡ ಬಲಿಷ್ಠವಾಗಿದೆ. ನಾಯಕ ಕೇನ್‌ ವಿಲಿಯಮ್ಸನ್‌, ಮಾರ್ಟಿನ್‌ ಗಪ್ಟಿಲ್‌ ಮತ್ತು ರಾಸ್‌ ಟೇಲರ್‌ ಅಪಾಯಕಾರಿ ಆಟಗಾರರಾಗಿದ್ದಾರೆ. ಟಾಮ್‌ ಲಾಥಂ ಅವರ ಆಗಮನದಿಂದ ಮಧ್ಯಮ ಕ್ರಮಾಂಕ ಮತ್ತಷ್ಟು ಬಲಗೊಂಡಿದೆ. 

ನೇಪಿಯರ್‌: ಬ್ಯಾಟಿಂಗ್‌ ಸ್ವರ್ಗ
ಇಲ್ಲಿನ “ಮೆಕ್‌ಲೀನ್‌ ಪಾರ್ಕ್‌’ ಬ್ಯಾಟ್ಸ್‌ಮನ್‌ಗಳ ಪಾಲಿನ ಸ್ವರ್ಗವಾಗಿದ್ದು, ಧಾರಾಳ ರನ್‌ ಹರಿದು ಬರುವ ನಿರೀಕ್ಷೆ ಇದೆ. ಇದಕ್ಕೆ 2018-19ನೇ ಸಾಲಿನ ಸೆಂಟ್ರಲ್‌ ಡಿಸ್ಟ್ರಿಕ್ಟ್-ಕ್ಯಾಂಟರ್‌ಬರಿ ತಂಡಗಳ ನಡುವಿನ “ಸೂಪರ್‌ ಸ್ಮ್ಯಾಶ್‌’ ಟಿ20 ಪಂದ್ಯವೇ ಸಾಕ್ಷಿ. ಮೊದಲು ಬ್ಯಾಟಿಂಗ್‌ ನಡೆಸಿದ ಟಾಮ್‌ ಬ್ರೂಸ್‌ ನಾಯಕತ್ವದ ಸಿ.ಡಿ. ತಂಡ 3 ವಿಕೆಟಿಗೆ 225 ರನ್‌ ರಾಶಿ ಹಾಕಿತ್ತು. ಚೇಸಿಂಗ್‌ ವೇಳೆ ಟಾಮ್‌ ಲ್ಯಾಥಂ 60 ಎಸೆತಗಳಿಂದ 110 ರನ್‌ ಸಿಡಿಸಿದ್ದರು. 

ಫ‌ಲಿತಾಂಶ ಏನೇ ಆಗಿರಲಿ, ಭಾರತ-ನ್ಯೂಜಿಲ್ಯಾಂಡ್‌ ನಡುವಿನ ಪಂದ್ಯದ ವೇಳೆ ನೇಪಿಯರ್‌ ಟ್ರ್ಯಾಕ್‌ನಲ್ಲಿ ಹೆಚ್ಚಿನ ಬದಲಾವಣೆಯಾಗುವ ಸಂಭವ ಇಲ್ಲ. ಮೊದಲು ಬ್ಯಾಟಿಂಗ್‌ ನಡೆಸುವ ತಂಡ 300 ರನ್‌ ಗಡಿ ದಾಟುವುದರಲ್ಲಿ ಅನುಮಾನವಿಲ್ಲ. ಹಾಗೆಯೇ ಇಂಥ ದೊಡ್ಡ ಮೊತ್ತವನ್ನು ಬೆನ್ನಟ್ಟುವುದೂ ಇಲ್ಲಿ ಸಮಸ್ಯೆಯಾಗಿ ಕಾಡದು. ಮೊದಲ 10 ಓವರ್‌ಗಳ ಪವರ್‌-ಪ್ಲೇ ವೇಳೆ ವಿಕೆಟ್‌ ಉರುಳುವ ಸಾಧ್ಯತೆಯೂ ಕಡಿಮೆ ಎಂಬುದು ಸದ್ಯದ ಲೆಕ್ಕಾಚಾರ. ಹೀಗಾಗಿ ನೇಪಿಯರ್‌ ಟ್ರ್ಯಾಕ್‌ ಬೌಲರ್‌ಗಳ ಜಾಣ್ಮೆಗೆ ಸವಾಲಾಗುವುದರಲ್ಲಿ ಅನುಮಾನವಿಲ್ಲ.

ಟಾಪ್ ನ್ಯೂಸ್

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.