ನಾಟಕಗಳಿಂದ ಜ್ಞಾನ ಜಾಗೃತಿ: ಚಂದ್ರಪ್ಪ


Team Udayavani, Jan 23, 2019, 9:35 AM IST

cta-4.jpg

ಹೊಳಲ್ಕೆರೆ: ಶರಣರು 21ನೇ ಶತಮಾನದಲ್ಲಿ ಧಾರ್ಮಿಕ, ಸಾಮಾಜಿಕ, ರಾಜಕೀಯ ಹಾಗೂ ಜಾತಿ ಸಮುದಾಯ ಎನ್ನದೆ ಎಲ್ಲರಲ್ಲೂ ಸಮಾನತೆ ಸಂದೇಶ ಬಿತ್ತಿಸಿದ್ದರು. ಇಂದಿನ ಶಿವಸಂಚಾರ ನಾಟಕ ಅಂಧಕಾರದಲ್ಲಿರುವ ಜನರನ್ನು ಜ್ಞಾನದ ಕಡೆಗೆ ಸಾಗಲು ಜಾಗೃತಿ ಮೂಡಿಸುತ್ತಿದೆ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು.

ಪಟ್ಟಣದ ಬಯಲು ರಂಗಮಂದಿರದಲ್ಲಿ ಶ್ರೀ ಶಿವಕುಮಾರ ಕಲಾಸಂಘದ ಹಾಗೂ ನಾಗರಿಕರ ಸಹಯೋಗದಲ್ಲಿ ಆಯೋಜಿಸಿದ್ದ ಶಿವಸಂಚಾರ ನಾಟಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಾಟಕ ಎನ್ನುವುದು ಕೇವಲ ಮನರಂಜನೆ ವಸ್ತು ಎನ್ನುವುದಕ್ಕಿಂತ ಅದೊಂದು ಸಾಮಾಜಿಕ ಪರಿವರ್ತನೆಗೆ ಬೇಕಾದ ಮಾನವೀಯ ಮೌಲ್ಯಯುತ ಸಂದೆೇಶಗಳನ್ನು ಬಿತ್ತರಿಸುವ ಮಾಧ್ಯಮವಾಗಿದೆ. ಆಧುನಿಕತೆ ಸೆಳೆತದಲ್ಲಿರುವ ಇಂದಿನ ಜನರಿಗೆ ನಾಟಕದ ಮೂಲಕ ಹೊಸ ಆಲೋಚನೆಗಳನ್ನು ಹುಟ್ಟಿಸುವ ನಿಟ್ಟಿನಲ್ಲಿ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ರಂಗ ಪ್ರಯೋಗ ಮಾರ್ಗದಲ್ಲಿ ಸಾಗಲು ಚಿಂತಿಸಿದರು ಎಂದರು.

ಶ್ರೀ ಶಿವಕುಮಾರ ಕಲಾಸಂಘದಿಂದ ಆರಂಭವಾದ ನಾಟಕ ಗೀಳು ಶಿವಸಂಚಾರ ಎನ್ನುವ ಕಲ್ಪನೆಯೊಂದಿಗೆ ನಾಡಿನುದ್ದಕ್ಕು ಸಂಚರಿಸುತ್ತಿದೆ. ಈ ಮೂಲಕ ಸಾಮಾಜಿಕ ಸ್ಥಿತಿಗತಿಗಳು, ಕಂದಾಚಾರ, ಮೂಢನಂಬಿಕೆ, ಸಮಾಜದಲ್ಲಿ ನಡೆಯುತ್ತಿರುವ ಅನಾಚಾರಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಿ ಶುದ್ಧ ಸಮಾಜ ಕಟ್ಟಲು ಶ್ರಮಿಸುತ್ತಿದ್ದಾರೆ ಎಂದರು.

ನಾವೆಲ್ಲ ನಾಟಕ ನೋಡಲು ಸಾಣೇಹಳ್ಳಿಗೆ ಹೊಗಬೇಕು ಎನ್ನುವಷ್ಟು ಶ್ರೇಷ್ಠವಾಗಿರುವ ರಂಗಭೂಮಿಯನ್ನು ಸೃಷ್ಠಿಸಿದ್ದಾರೆ. ಶ್ರೀಗಳ ಸಾರಥ್ಯದಲ್ಲಿರುವ ಶಿವಸಂಚಾರ ನಾಟಕ ತಂಡದ ಕಲಾವಿದರು ಇಲ್ಲಿಗೆ ಆಗಮಿಸಿದ್ದಾರೆ. ಪ್ರತಿಯೊಬ್ಬರು ಇಲ್ಲಿ ನಡೆಯುವ ಮೂರು ದಿನಗಳ ನಾಟಕ ಪ್ರದರ್ಶನ ವೀಕ್ಷಿಸಬೇಕು. ಅ ಮೂಲಕ ಬದಲಾವಣೆ ಸಂದೇಶಗಳನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ಪಪಂ ಅಧ್ಯಕ್ಷೆ ಸವಿತಾ ಬಸವರಾಜ್‌, ಸದಸ್ಯ ಕೆ.ಸಿ. ರಮೇಶ್‌, ಇಂದ್ರಪ್ಪ, ಚಿಕ್ಕಜಾಜೂರು ಗ್ರಾಪಂ ಅಧ್ಯಕ್ಷ ಡಿ.ಸಿ. ಮೋಹನ್‌, ವಕೀಲರಾದ ಎಸ್‌.ಎಂ. ಅನಂದಮೂರ್ತಿ, ಬಸವರಾಜ್‌, ಕೆ.ಎಸ್‌.ತಿಪ್ಪೇಸ್ವಾಮಿ, ಎ.ಸಿ. ಗಂಗಾಧರಪ್ಪ, ಗುಂಜಿಗನೂರು ಇಂದಪ್ಪ, ಶಿವಸಂಚಾರ ನಾಟಕ ಕಲಾವಿದರು ಇದ್ದರು. ‘ಊರು ಸುಟ್ಟರೂ ಹನುಮಪ್ಪ ಹೊರಗ’ಎನ್ನುವ ನಾಟಕ ಪ್ರದರ್ಶಿಸಲಾಯಿತು. ಹನುಮಂತ ಹಾಲಿಗೇರಿ ರಚನೆ, ಮಾತೇಶ ಬಡಿಗೇರ ನಿರ್ದೇಶನ, ಸರೋಜಾ ನಿಂಬನಗೌಡರ ನಿರ್ವಹಣೆ, ನೆರಳು ಬೆಳಕು ಜೀವನಗೌಡ, ಸಂಗೀತ ರಮೇಶ್‌ ಕುರುಬಗಟ್ಟೆ ನೀಡಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.