ಜ್ಞಾನ ಅನಾವರಣಕ್ಕೆ ಚಿತ್ರಕಲೆ ಅಗತ್ಯ


Team Udayavani, Jan 23, 2019, 10:47 AM IST

vij-2.jpg

ವಿಜಯಪುರ: ಚಿತ್ರಕಲೆ ಮಕ್ಕಳಲ್ಲಿ ಹುದಗಿರುವ ಜ್ಞಾನವನ್ನು ಜಗತ್ತಿಗೆ ಅನಾವರಣ ಮಾಡುವ ಸಾಧನವಾಗಿದೆ. ಪ್ರಸಕ್ತ ಸಂದರ್ಭದಲ್ಲಿ ಮಕ್ಕಳು ಮುಖ್ಯವಾಗಿ ಅಧುನಿಕ ತಂತ್ರಜ್ಞಾನದ ಅಂತರ್ಜಾಲದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮೇಲ್ಮನೆ ಸದಸ್ಯ ಸುನೀಲಗೌಡ ಪಾಟೀಲ ಅಭಿಪ್ರಾಯಪಟ್ಟರು.

ನಗರದ ಪ್ರವಾಸೋದ್ಯಮ ಇಲಾಖೆಯ ಆರ್ಟ್‌ ಗ್ಯಾಲರಿಯಲ್ಲಿ ಎಕ್ಸ್‌ಲೆಂಟ್ ಶಿಕ್ಷಣ ಸಂಸ್ಥೆ ಚಿತ್ರಕಲಾ ಶಿಕ್ಷಕ ಮುಸ್ತಾಕ್‌ ತಿಕೋಟಾ ಮಾರ್ಗದರ್ಶನದಲ್ಲಿ 500 ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಚಿತ್ರಕಲಾ ಶಿಕ್ಷಕ ಮುಸ್ತಾಕ್‌ ಆವರು ತಮ್ಮೊಂದಿಗೆ ತಮ್ಮ 500 ಶಿಷ್ಯರ ಪ್ರತಿಭೆ ಅನಾವರಣಕ್ಕೆ ಈ ವೇದಿಕೆ ಕಲ್ಪಿಸಿರುವುದು ಸ್ವಾಗತಾರ್ಹ ಕ್ರಮ. ಮಕ್ಕಳಲ್ಲಿ ಹಲವಾರು ವಿಷಯಗಳ ಕುರಿತು ಮನಸ್ಸಿನಲ್ಲಿರುವ ಪ್ರಶ್ನೆಗಳ ಹಾಗೂ ಜಗತ್ತಿನ ಸಮಸ್ಯೆಗಳ ಪ್ರತಿಬಿಂಬವಾಗಿ ಚಿತ್ರಕಲೆಯು ಸಾಧನವಾಗಿದೆ ಎಂದರು.

ಪ್ರಾಸ್ತಾವಿಕ ಮಾತನಾಡಿದ ಎಕ್ಸ್‌ಲೆಂಟ್ ಸಂಸ್ಥೆ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ, ಚಿತ್ರಕಲೆಯು ಇಡಿ ಇತಿಹಾಸವನ್ನು ಒಂದು ಚಿತ್ರದಲ್ಲಿ ಸೆರೆ ಹಿಡಿಯಬಹುದು. ಜಗತ್ತಿಗೆ ಸಂದೇಶ ನೀಡಲು ಹಾಗೂ ಸಮಸ್ಯೆಗಳನ್ನು ಒಂದು ಚಿತ್ರದಲ್ಲಿ ಅನಾವರಣ ಮಾಡಬಹುದು. ಚಿತ್ರಕಲೆಯು ಮನಸ್ಸಿಗೆ ಮುದ ನೀಡುವ ವಿಷಯವಾಗಿ ಕಾರ್ಯ ನಿರ್ವಹಿಸುತ್ತದೆ ಎಂದರು.

ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಹೇಶ ಕ್ಯಾಥನ್‌ ಮಾತನಾಡಿ, 500 ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ 7 ದಿನ ನಡೆಯಲಿದ್ದು, ಜಿಲ್ಲೆಯ ಜನರು ಅದರಲ್ಲೂ ಶಾಲಾ ಮಕ್ಕಳು ಈ ಪ್ರದರ್ಶನ ವೀಕ್ಷಣೆ ಮೂಲಕ ತಮ್ಮಲ್ಲಿರುವ ಪ್ರತಿಭೆ ಅನಾವರಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.

ಖ್ಯಾತ ಕಲಾವಿದ ಪಿ.ಎಸ್‌. ಕಡೆಮನಿ ಮಾತನಾಡಿ, ತಮ್ಮ ಕಲೆಯೊಂದಿಗೆ ಮಕ್ಕಳ ಕಲೆ ಅಭಿರುಚಿ ಹಾಗೂ ಅವರಲ್ಲಿ ಅಡಗಿರುವ ಜ್ಞಾನವನ್ನು ಅಭಿವ್ಯಕ್ತಿಸಲು ಮುಸ್ತಾಕ್‌ ತಿಕೋಟಾ ಮುಕ್ತ ವೇದಿಕೆ ಕಲ್ಪಿಸಿರುವುದು ಅನುಕರಣೀಯ ಎಂದರು.

ಸಿದ್ದೇಶ್ವರ ಬ್ಯಾಂಕ್‌ ನಿರ್ದೇಶಕ ವೈಜನಾಥ ಕರ್ಪೂರಮಠ ಮಾತನಾಡಿದರು. ನಗರಸಭೆ ಮಾಜಿ ಸದಸ್ಯ ಶರಣಪ್ಪ ಯಕ್ಕುಂಡಿ, ಮೈಹಬೂಬ ತಿಕೋಟಾ, ಎಂ.ಕೆ. ಪತ್ತಾರ, ರಾಜು ಶಟಗಾರ, ಲಿಂಗರಾಜ ಕಾಚಾಪುರ, ರುದ್ರೇಶ ಕುಂಬಾರ, ರಮೇಶ ಚವ್ಹಾಣ, ಶಬ್ಬೀರ್‌ ನದಾಫ್‌, ಜಾವೀದ್‌ ತಿಕೋಟಾ, ಇಕ್ಬಾಲ್‌ ತಿಕೋಟಾ, ರಾಜೇಶ್ವರಿ ಕುಮಸಿ ಇದ್ದರು. ಬಸವರಾಜ ವಾಲೀಕಾರ ಸ್ವಾಗತಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.