ಅವ್ಯವಸ್ಥೆಯ ಆಗರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಶೌಚಾಲಯ 


Team Udayavani, Jan 24, 2019, 12:50 AM IST

ksrtc.jpg

ಉಡುಪಿ: ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣಿಕರು ಬಂದು ಹೋಗುವ ಉಡುಪಿ ಕೆಎಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯ ನಿರ್ವಹಣೆಯಿಲ್ಲದೆ ಅವ್ಯವಸ್ಥೆಯ ಆಗರವಾಗಿದೆ. 

ನಿಲ್ದಾಣಕ್ಕೆ ಹೋದರೆ ಸಾಕು, ಗಬ್ಬೆನ್ನುವ ದುರ್ನಾತ, ನೀರಿನ ಸಮಸ್ಯೆ, ತುಂಡಾದ ಫ್ಲಶ್‌! ಇದು ಇಲ್ಲಿನ ಬಸ್‌ ನಿಲ್ದಾಣದಲ್ಲಿ ಸಾಮಾನ್ಯವೇನೋ ಎಂಬಂತೆ ಇದೆ. 

ನಿಲ್ದಾಣದಲ್ಲಿ ಕೂರುವುದು ಸಮಸ್ಯೆ 
ಶೌಚಾಲಯದ ವಾಸನೆ ನಿಲ್ದಾಣದ ಹೊರಕ್ಕೂ ವ್ಯಾಪಿಸಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಅಲ್ಲಿನ ಸಿಬಂದಿಯನ್ನು ಪ್ರಶ್ನಿಸಿದರೆ ದಿನಕ್ಕೆ 4ರಿಂದ 5 ಬಾರಿ ಕ್ಲೀನಿಂಗ್‌ ಮಾಡುತ್ತೇವೆ ಎನ್ನುತ್ತಾರೆ. ಆದರೆ ಇಲ್ಲಿ ಆ ಯಾವ ಅಂಶಗಳು ಕಾಣುತ್ತಿಲ್ಲ. ಬೆಳಗ್ಗಿನಿಂದ ಸಂಜೆಯವರೆಗೂ ಒಂದೇ ರೀತಿಯ ವಾತಾವರಣವಿದೆ ಎನ್ನುತ್ತಾರೆ ಸ್ಥಳೀಯರು.

ಇಲ್ಲಿ ದಿನನಿತ್ಯ 300ಕ್ಕೂ ಅಧಿಕ ಬಸ್ಸುಗಳು ಆಗಮಿಸುತ್ತಿದ್ದು ಸಾವಿರಾರು ಪ್ರಯಾಣಿಕರು ಈ ಶೌಚಾಲಯವನ್ನು ಬಳಸುತ್ತಾರೆ. ಆದರೆ ಸೂಕ್ತ ನಿರ್ವಹಣೆಯ ಕೊರತೆಯಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.

ನೀರು ಇಲ್ಲ
ನಗರಸಭೆಯಿಂದ ಟ್ಯಾಂಕರ್‌ ಮೂಲಕ ಇಲ್ಲಿಗೆ ನೀರು ಪೂರೈಸುತ್ತಿದ್ದು, ನೀರು ಖಾಲಿಯಾದರೆ, ವಿದ್ಯುತ್‌ ಕೈಕೊಟ್ಟರೆ ಪರ್ಯಾಯ ವ್ಯವಸ್ಥೆಯೇ ಇಲ್ಲದಂತಾಗಿದೆ. ಈ ಬಗ್ಗೆ ನಗರಸಭೆಗೆ ಹೇಳಿದರೆ “ಈಗ ಬರುತ್ತೇನೆ’ ಎಂದು ಕೇಳಿ ಹಲವು ತಾಸು ತಗೊಳ್ಳುತ್ತಾರೆ ಎನ್ನುತ್ತಾರೆ ಅಲ್ಲಿನ ಸಿಬಂದಿ.

ಫ್ಲಶ್‌ ಸಮಸ್ಯೆ
ಶೌಚಾಲಯದೊಳಗೆ ಫ್ಲಶ್‌ ಔಟ್‌ ಸಿಸ್ಟಮ್‌ ಜೋಡಿಸಲಾಗಿದೆ. ಆದರೆ ಫ್ಲಶ್‌ ಔಟ್‌ನ ಪೈಪ್‌ ತುಂಡಾಗಿದ್ದು, ಕಬ್ಬಿಣದ ರಾಡ್‌ ಮಾತ್ರ ಉಳಿದುಕೊಂಡಿದೆ. ಅಲ್ಲದೆ, ಪುರುಷರ ಶೌಚಾಲಯದ ಫ್ಲಶ್‌ ಔಟ್‌ ಸಿಸ್ಟಮ್‌ನ ಮೇಲ್ಭಾಗ ಸಂಪೂರ್ಣ ತೆರೆದುಕೊಂಡಿದೆ. ಟ್ಯಾಪ್‌ನಲ್ಲಿ ಕೆಲವೊಮ್ಮೆ ನೀರೂ ಅಲಭ್ಯವಾಗುವುದರಿಂದ ಫ್ಲಶ್‌ ಔಟ್‌ ಅಗತ್ಯವಾಗಿ ಬೇಕಾಗುತ್ತದೆ. ಆದರೆ ಪೈಪ್‌ ಸಂಪರ್ಕ ಇಲ್ಲದೆ, ಇದರಲ್ಲಿ ನೀರೇ ಬರುತ್ತಿಲ್ಲ. ಟ್ಯಾಪ್‌ಗ್ಳು ಕೂಡ ನಾದುರಸ್ತಿಯಲ್ಲಿವೆ.

ಬಳಕೆ ಅನಿವಾರ್ಯ
” ದರ ವಸೂಲಿ ಮೂಡಿಯೂ ನಿರ್ವಹಣೆ ಇಲ್ಲದಿರುವುದು ವಿಪರ್ಯಾಸ. ಸಂಬಂಧಪಟ್ಟವರು ಈ ಬಗ್ಗೆ ಪರಿಶೀಲನೆ ನಡೆಸಿ ಪ್ರಯಾಣಿಕರಿಗೆ ಅನುಕೂಲ ಮಾಡಬೇಕು.  
-ಹೇಮಂತ್‌ ಪ್ರಯಾಣಿಕರು

ಶೀಘ್ರ ಕ್ರಮ
ಕೆಎಸ್ಸಾರ್ಟಿಸಿ ಶೌಚಾಲಯದ ಅವ್ಯವಸ್ಥೆ ಬಗ್ಗೆ ಗಮನಕ್ಕೆ ಬಂದಿದ್ದು, ಪರಿಶೀಲನೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು. 
–  ಆನಂದ್‌ ಕೆ. ಪೌರಾಯುಕ್ತರು, ನಗರಸಭೆ

ಟಾಪ್ ನ್ಯೂಸ್

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.