ಸ್ಮಾರ್ಟ್‌ಸಿಟಿಯಡಿ ಬಂದರು ದಕ್ಕೆ ಕಾಮಗಾರಿ


Team Udayavani, Jan 24, 2019, 12:30 AM IST

mangalore-smartcity-project.jpg

ಮಂಗಳೂರು: ಅನುದಾನದ ಕೊರತೆಯಿಂದಾಗಿ ಆಮೆಗತಿಯಲ್ಲಿ ಸಾಗಿರುವ ಮಂಗಳೂರು ಮೀನುಗಾರಿಕಾ ದಕ್ಕೆಯ ತೃತೀಯ ಹಂತದ ವಿಸ್ತರಣೆ ಕಾಮಗಾರಿಯನ್ನು ಈಗ ಸ್ಮಾರ್ಟ್‌ಸಿಟಿ ಯೋಜನೆಯ ಏರಿಯಾ ಬೇಸ್ಡ್ ಡೆವಲಪ್‌ಮೆಂಟ್(ಎಬಿಡಿ)ನಡಿ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಇದರಿಂದ ಎಂಟು ವರ್ಷಗಳಿಂದ ಹಿನ್ನಡೆ ಅನುಭವಿಸುತ್ತಿರುವ ಈ ದಕ್ಕೆಯ ಅಭಿವೃದ್ಧಿ ಕಾರ್ಯ ವೇಗ ಪಡೆದುಕೊಳ್ಳಲಿದೆ.

ಮೀನುಗಾರಿಕಾ ಬಂದರಿನ ಸಮಗ್ರ ಅಭಿವೃದ್ಧಿಯಲ್ಲಿ ಕೈಗೊಳ್ಳುವ ಯೋಜನೆಗಳ ಕುರಿತಂತೆ ಇತ್ತೀಚೆಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಮೀನುಗಾರರ ಮುಖಂಡರ ಜತೆ‌ ನಡೆದ ಸಮಾಲೋಚನ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ಈ ತೀರ್ಮಾನಕ್ಕೆ ಬರಲಾಗಿದೆ.

ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಯ ಎಬಿಡಿಯಡಿ ಈಗಾಗಲೇ ಮಂಗಳೂರು ಮೀನುಗಾರಿಕಾ ಬಂದರು ಹಾಗೂ ಹಳೆಯ ವಾಣಿಜ್ಯ ಬಂದರಿನ ಸಮಗ್ರ ಅಭಿವೃದ್ಧಿ ಒಳಗೊಂಡಿದೆ. ಇದರಲ್ಲಿ ನಿರ್ಮಾಣದಲ್ಲಿರುವ ಮೂರನೇ ಹಂತದ ಮೀನುಗಾರಿಕಾ ಜೆಟ್ಟಿಯನ್ನು ಕೂಡ ಸೇರಿಸಿ ಸಮಗ್ರವಾಗಿ ಮೀನುಗಾರಿಕಾ ಬಂದರಿಗೆ ಹೊಸ ರೂಪ ನೀಡುವ ಯೋಜನೆಯಿದೆ. ಮೀನುಗಾರಿಕಾ ಚಟುವಟಿಕೆಗಳ ಜತೆಗೆ ಗೋವಾ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಇರುವ ಮಾದರಿಯಲ್ಲೇ ಪ್ರವಾಸಿಗರನ್ನು ಕೂಡ ಆಕರ್ಷಿಸಲು ನಿರ್ಧರಿಸಲಾಗಿದೆ.

ಆರಂಭದಲ್ಲೇ ವಿಘ್ನ
ಮೀನುಗಾರಿಕಾ ಬೋಟ್‌ಗಳ ದಟ್ಟಣೆಯಿಂದಾಗಿ 2010ರಲ್ಲಿ 3ನೇ ಹಂತದ ವಿಸ್ತರಣೆಗೆ ಚಾಲನೆ ನೀಡಲಾಗಿತ್ತು. ಯೋಜನೆಯಂತೆ 2015ಕ್ಕೆ ಪೂರ್ಣಗೊಂಡು ಉಪಯೋಗಕ್ಕೆ ಬಿಟ್ಟುಕೊಡಬೇಕಾಗಿತ್ತು. ಆರಂಭದಲ್ಲಿ ಯೋಜನಾ ವೆಚ್ಚ 57 ಕೋ.ರೂ. ಇತ್ತು. ಆದರೆ ಅನುಷ್ಠಾನ ಹಂತದಲ್ಲಿದ್ದಾಗ ಹಸಿರುಪೀಠದಲ್ಲಿ ದಾವೆ ದಾಖಲಾಗಿ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ವಾದ-ವಿವಾದಗಳ ಬಳಿಕ ನ್ಯಾಯಾಲಯ ಕಾಮಗಾರಿ ಮುಂದುವರಿಸಲು ಹಸಿರು ನಿಶಾನೆ ತೋರಿಸಿತ್ತು. ಆದರೆ ಯೋಜನಾ ವೆಚ್ಚದಲ್ಲಿ ಆಗಿರುವ ಏರಿಕೆ ಮತ್ತು ಕಾಮಗಾರಿಯಲ್ಲಿ ಕೆಲವು ಬದಲಾವಣೆ ಮಾಡಿ ಯೋಜನೆಯನ್ನು 80 ಕೋ.ರೂ. ವೆಚ್ಚಕ್ಕೆ ಪರಿಷ್ಕರಿಸಲಾಗಿತ್ತು.

ಆ ಪೈಕಿ ಸುಮಾರು 56 ಕೋ.ರೂ. ಕಾಮಗಾರಿ ನಡೆದಿದ್ದು, ರಾಜ್ಯ ಹಾಗೂ ಕೇಂದ್ರ ಸರಕಾರದಿಂದ 51 ಕೋ.ರೂ. ಬಿಡುಗಡೆಯಾಗಿದೆ. ಇನ್ನೂ ಸುಮಾರು 5 ಕೋ.ರೂ. ಬಿಡುಗಡೆಗೆ ಬಾಕಿಯಿದೆ.

ಪ್ರಸ್ತುತ ತೃತೀಯ ಹಂತದ ಜೆಟ್ಟಿ ಕಾಮಗಾರಿ ಅಪೂರ್ಣವಾಗಿದ್ದರೂ ದೋಣಿಗಳ ಕಾರ್ಯಾಚರಣೆ ಆರಂಭವಾಗಿದೆ. ಮೀನಿನ ಎಣ್ಣೆ ಹಾಗೂ ಗೊಬ್ಬರಕ್ಕೆ ಹೋಗುವ ಮೀನುಗಳನ್ನು ಅಲ್ಲಿ ಇಳಿಸಲಾಗುತ್ತಿದೆ. ದ್ವಿತೀಯ ಹಂತದ ಜೆಟ್ಟಿಯಿಂದ ತೃತೀಯ ಹಂತದ ಜೆಟ್ಟಿಗೆ ಹೋಗಲು ಸೇತುವೆ ನಿರ್ಮಾಣವಾಗಿದೆ. ಆದರೆ ಇದಕ್ಕೆ ಸಂಪರ್ಕ ರಸ್ತೆ ನಿರ್ಮಾಣವಾಗಿಲ್ಲ. ಸದ್ಯಕ್ಕೆ ಹೊಗೆ ಬಜಾರ್‌ನಲ್ಲಿ ಇರುವ ಸಂರ್ಪಕ ರಸ್ತೆಯನ್ನು ತೃತೀಯ ಹಂತದ ಜೆಟ್ಟಿಗೆ ಸಂಪರ್ಕ ರಸ್ತೆಯಾಗಿ ಬಳಸಲಾಗುತ್ತಿದೆ. ಮೀನುಗಾರರೇ ತಾತ್ಕಾಲಿಕವಾಗಿ ಈ ರಸ್ತೆಯನ್ನು ಬಳಕೆಗೆ ಸಿದ್ಧಗೊಳಿಸಿದ್ದಾರೆ. ಇದೇ ರೀತಿ ಬೆಂಗರೆ ಬದಿಯಲ್ಲಿರುವ ಮೀನುಗಾರಿಕಾ ಜೆಟ್ಟಿಯಲ್ಲಿ ದೋಣಿಗಳು ತಂಗುತ್ತಿವೆ.

ತುರ್ತು ಕಾಮಗಾರಿಗಳು
ತೃತೀಯ ಹಂತದ ಮೀನುಗಾರಿಕಾ ಜೆಟ್ಟಿಯ ಪೂರ್ಣಪ್ರಮಾಣದಲ್ಲಿ ಬಳಕೆಗೆ ಯೋಜನೆಯಲ್ಲಿ ಒಳಗೊಂಡಿರುವ ಕೆಲವು ಕಾಮಗಾರಿಗಳು ತುರ್ತಾಗಿ ನಡೆಯಬೇಕಿದೆ. ರಸ್ತೆ, ನೀರು, ವಿದ್ಯುತ್‌ ಸಂಪರ್ಕ, ಆವರಣಗೋಡೆ, ಮೈನಸ್‌ 3 ಮೀಟರ್‌ ಡ್ರೆಜ್ಜಿಂಗ್‌, ಶೌಚಾಲಯ ಸೌಲಭ್ಯಗಳು ಮುಖ್ಯವಾದವುಗಳು.

ಜತೆಗೆ ಮೀನುಗಾರರ ವಿಶ್ರಾಂತಿಕೊಠಡಿ, ಬಲೆ ದುರಸ್ತಿ ಶೆಡ್‌ ನಿರ್ಮಾಣವೂ ಮೂಲ ಯೋಜನೆಯಲ್ಲಿ ಒಳಗೊಂಡಿದೆ. ಇದಕ್ಕೆ ಇನ್ನೂ ಸುಮಾರು 25 ಕೋ.ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಹೀಗಾಗಿ ಬಾಕಿಯಿರುವ ಈ ಹಣವನ್ನು ಸ್ಮಾರ್ಟ್‌ಸಿಟಿ ಅನುದಾನದಡಿ ವಿನಿಯೋಗಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.

ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಮಂಗಳೂರಿನ ಮೀನುಗಾರಿಕಾ ಬಂದರಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತಿದೆ. ಇದರಲ್ಲಿ ಮೂರನೇ ಹಂತವನ್ನು ಸೇರಿಸಿ ಅಭಿವೃದ್ಧಿಗೊಳಿಸಲಾಗುವುದು.
-ಶಶಿಕಾಂತ ಸೆಂಥಿಲ್‌, ದ.ಕ. ಜಿಲ್ಲಾಧಿಕಾರಿ

– ಕೇಶವ ಕುಂದರ್‌
 

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.