ಹಿರಿಯ ಶ್ರೀಗಳ ಇಚ್ಛೆಯಂತೆಯೇ ಮಠದ ನಿರ್ವಹಣೆ: ಸಿದ್ಧಲಿಂಗ ಶ್ರೀ


Team Udayavani, Jan 24, 2019, 1:08 AM IST

73.jpg

ತುಮಕೂರು: ಹಿರಿಯ ಶ್ರೀಗಳ ಆಶೀರ್ವಾದ ನಮ್ಮೆಲ್ಲರ ಮೇಲೆ ಇರುತ್ತದೆ. ಅವರು ನಮಗೆ ನೀಡಿರುವ ಮಾರ್ಗದರ್ಶನದಂತೆ ಮಠದಲ್ಲಿ ಈ ಹಿಂದೆ ನಡೆಯುತ್ತಿದ್ದ ರೀತಿಯಲ್ಲಿಯೇ ಎಲ್ಲಾ ಕಾರ್ಯಗಳು ನಡೆಯುತ್ತವೆ. ಶ್ರೀಗಳ ಶ್ರೀರಕ್ಷೆ ನಮ್ಮ ಮೇಲಿದ್ದು, ಅದು ಮುಂದುವರಿದುಕೊಂಡು ಹೋಗುತ್ತದೆ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ತಿಳಿಸಿದರು.

ಸಿದ್ಧಗಂಗಾ ಮಠದಲ್ಲಿ ಹಿರಿಯ ಶ್ರೀಗಳ ಕ್ರಿಯಾ ಸಮಾಧಿ ಗದ್ದುಗೆಗೆ ಬುಧವಾರ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀಗಳು ಮಠವನ್ನು ಯಾವ ರೀತಿಯಲ್ಲಿ ನಡೆಸಿಕೊಂಡು ಬಂದಿದ್ದಾರೆ. ಅದೇ ರೀತಿ ಶ್ರೀಗಳ ಆಶಯದಂತೆ ಎಲ್ಲಾ ಕಾರ್ಯ ನಡೆಸಲಾಗುವುದು. ಕಾಯಕ ದಾಸೋಹ, ಪೂಜಾದಿ ಕ್ರಮಗಳು ಎಂದಿನಂತೆ ನಿರಂತರವಾಗಿ ನಡೆಯಲಿವೆ ಎಂದರು.

ಶ್ರೀಗಳ ಇಚ್ಛೆಯಂತೆ ಸಿದ್ಧಗಂಗಾ ಮಠದ ಕಾರ್ಯಗಳು ಸೇರಿದಂತೆ ಮಠದ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸಿಕೊಂಡು ಹೋಗುವ ಜವಾಬ್ದಾರಿ ನನ್ನ ಮೇಲಿದೆ. ಅವರ ಆಶೀರ್ವಾದದಿಂದ ಎಲ್ಲವನ್ನೂ ಸುಸ್ಥಿರವಾಗಿ ನಿರ್ವಹಿಸಿಕೊಂಡು ಹೋಗುತ್ತೇನೆ ಎಂದು ನುಡಿದರು.

ಅನ್ನದಾಸೋಹ, ಜ್ಞಾನದಾಸೋಹ ಪಾಲಿಸುತ್ತೇವೆ: ಸಿದ್ಧಗಂಗಾ ಸಂಸ್ಥೆಯ ಎÇ್ಲಾ ಕಾರ್ಯ ಚಟುವಟಿಕೆಗಳು ಎಂದಿನಂತೆ ಆರಂಭವಾಗಿವೆ. ಮಠದಲ್ಲಿ ದಿನನಿತ್ಯದಂತೆ ದಾಸೋಹ, ಪ್ರಾರ್ಥನೆ ನೆರವೇರಿದೆ. ಹಿರಿಯ ಶ್ರೀಗಳು ನೆರವೇರಿಸಿಕೊಂಡು ಹೋಗುತ್ತಿದ್ದ ಪೂಜಾ ಕೈಂಕರ್ಯ ಎಂದಿನಂತೆ ನೆರವೇರಿದೆ. ಶ್ರೀಗಳ ಇಚ್ಛೆಯಂತೆ ಅನ್ನದಾಸೋಹ, ಜ್ಞಾನದಾಸೋಹ ಕಾರ್ಯವನ್ನು ಚಾಚೂ ತಪ್ಪದೆ ನಾವೆಲ್ಲರೂ ಪಾಲಿಸಿಕೊಂಡು ಹೋಗುತ್ತೇವೆ ಎಂದರು.

ಶ್ರೀಗಳ ಗದ್ದುಗೆ ದರ್ಶನಕ್ಕಾಗಿ ಭಕ್ತರು ರಾತ್ರಿಯಿಡಿ ಮಠದÇ್ಲೇ ತಂಗಿದ್ದರು. ಹಾಗಾಗಿ ಅವರಿಗೆÇ್ಲಾ ಶ್ರೀಗಳ ಗದ್ದುಗೆಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇಂದಿನಿಂದ 11 ದಿನಗಳ ಕಾಲ ನಿರಂತರವಾಗಿ ಗದ್ದುಗೆಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಲಿವೆ ಎಂದು ಹೇಳಿದರು. ಶಿವಕುಮಾರ ಸ್ವಾಮೀಜಿಯವರು ಶಿವೈಕ್ಯರಾಗಿ ಬುಧವಾರ ಮೂರನೇ ದಿನವಾಗಿದ್ದು, ವಿವಿಧ ಮಠಗಳ ಮಠಾಧೀಶ್ವರರು ಹಾಗೂ ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜೆ ನೆರವೇರಿಸಿದರು.

ಶ್ರೀಗಳ ಪಾದುಕೆಗೆ ಭಕ್ತರಿಂದ ಭಕ್ತಿಯ ನಮನ

ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ಸದಾ ಲವಲವಿಕೆಯಿಂದ ನಡೆದಾಡುತ್ತಾ ಭಕ್ತರಿಗೆ ಆಶೀರ್ವಾದ ಮಾಡುತ್ತಿದ್ದ ಡಾ.ಶಿವಕುಮಾರ ಸ್ವಾಮೀಜಿ ಅವರು ಶಿವನಲ್ಲಿ ಲೀನವಾಗಿದ್ದಾರೆ. ಆದರೆ, ಅವರ ನೆನಪು ಮಾತ್ರ ಇನ್ನೂ ಭಕ್ತರಲ್ಲಿ ಮನೆ ಮಾಡಿದೆ. ಬುಧವಾರ ಮಠಕ್ಕೆ ಭಕ್ತ ಸಾಗರವೇ ಹರಿದು ಬಂತು. ಭಕ್ತರಿಗೆ ಆಶೀರ್ವದಿಸುತ್ತಿದ್ದ ಶಕ್ತಿಪೀಠ ಮಂಚದಲ್ಲಿ ಅವರು ಇರದೇ ಇರುವುದನ್ನು ಕಂಡು ಭಾವುಕರಾದ ಭಕ್ತರು, ಶಕ್ತಿಪೀಠದ ಮೇಲೆ ಇರಿಸಲಾಗಿದ್ದ ಶ್ರೀಗಳ ಪಾದುಕೆಗಳಿಗೆ ಭಕ್ತಿಯಿಂದ ನಮನ ಸಲ್ಲಿಸುತ್ತಿ ರುವುದು ಕಂಡು ಬಂತು.

ಮಠವನ್ನು 88 ವರ್ಷಗಳ ಕಾಲ ಜಾತ್ಯತೀತ ವಾಗಿ ನಡೆಸಿಕೊಂಡು ಬಂದಿದ್ದ ಶ್ರೀಗಳು, ಮಠಕ್ಕೆ ಬರುವ ಭಕ್ತರಿಗೆ ಆಶೀರ್ವಾದ ಮಾಡು ತ್ತಿದ್ದರು. ಮಠದ ಆವರಣದಲ್ಲಿರುವ ಶಕ್ತಿ ಪೀಠದ ಮಂಚದ ಮೇಲೆ ಶ್ರೀಗಳು ಕುಳಿತು ಯಂತ್ರ ಬರೆದು ಬರುವ ಭಕ್ತರಿಗೆ ಸ್ವತಃ ಕೈಯಾರೆ ಕಟ್ಟಿ ಕತ್ತರಿಯಿಂದ ಕತ್ತರಿಸುತ್ತಿದ್ದರು.

ತಮ್ಮ ಎಲ್ಲಾ ಪೂಜಾ ಕಾರ್ಯಗಳು ಮುಗಿದ ನಂತರ ಮಂಚದ ಮೇಲೆ ಕುಳಿತು ಭಕ್ತರಿಗೆ ದರ್ಶನ ನೀಡಿ ಆಶೀರ್ವಾದ ಮಾಡು ತ್ತಿದ್ದುದನ್ನು ಕಂಡಿದ್ದ ಭಕ್ತರು, ಮಂಚದ ಮೇಲೆ ಇರಿಸಲಾಗಿರುವ ಶ್ರೀಗಳು ತೊಡುತ್ತಿದ್ದ ಪಾದುಕೆಗಳಿಗೆ ಭಕ್ತಿಯಿಂದ ನಮಿಸುತ್ತಿದ್ದರು. ಈ ವೇಳೆ ಮಾತನಾಡಿದ ಹಲವು ಭಕ್ತರು, ಶ್ರೀಗಳ ಪಾದುಕೆಯನ್ನು ಮುಟ್ಟಿ ನಮಸ್ಕರಿಸು ವಾಗ ಶ್ರೀಗಳ ಪಾದವನ್ನೇ ಮುಟ್ಟಿದ ಅನುಭವ ವಾಗುತ್ತಿದೆ ಎಂಬ ಭಾವನೆ ವ್ಯಕ್ತಪಡಿಸುತ್ತಿದ್ದರು.

ಶ್ರೀಗಳಿಗೆ ಭಾರತರತ್ನ ನೀಡಲು ಕೇಂದ್ರಕ್ಕೆ ನಿಯೋಗ

ಬೆಂಗಳೂರು: ಸಿದ್ಧಗಂಗಾ ಶ್ರೀಗಳಾದ ಶಿವಕುಮಾರಸ್ವಾಮಿಯವರಿಗೆ ಮರಣೋತ್ತರವಾಗಿ ಭಾರತರತ್ನ ನೀಡುವಂತೆ ಮನವಿ ಮಾಡಲು ಸದ್ಯದಲ್ಲೇ ಸರ್ವಪಕ್ಷಗಳ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಾಗುವುದು ಎಂದು ಗೃಹ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಹೀಗಾಗಿ, ರಾಜ್ಯದ ಬಿಜೆಪಿ ಸಚಿವರು, ಸಂಸದರು ಸೇರಿ ಎಲ್ಲ ಪಕ್ಷಗಳ ಮುಖಂಡರ ನಿಯೋಗವನ್ನು ಪ್ರಧಾನಿ ಬಳಿ ಕರೆದೊಯ್ಯಲಾಗುವುದು. ಇದರಲ್ಲಿ ರಾಜಕೀಯ ಇರಬಾರದು. ಅವರಿಗೆ ನೊಬೆಲ್‌ ಪುರಸ್ಕಾರ ಸಹ ಲಭಿಸಬೇಕು ಎಂದರು.

ಡಾ.ಶಿವಕುಮಾರ ಸ್ವಾಮಿಗಳ ಅಂತಿಮ ದರ್ಶನ ಹಾಗೂ ಕ್ರಿಯಾ ಸಮಾಧಿ ಸೇರಿ ಇತರ ಪ್ರಕ್ರಿಯೆ ಸುಗಮವಾಗಿ ನೆರವೇರಲು ಸಾಕಷ್ಟು ಮಂದಿ ಶ್ರಮಿಸಿದ್ದಾರೆ. ತುಮಕೂರು ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನತೆಯ ನೆರವು ಸಹಕಾರ ಅಭಿನಂದನೀಯ ಎಂದು ಹೇಳಿದರು. ಎರಡು ದಿನಗಳ ಕಾಲ ಸ್ಥಳದಲ್ಲಿಯೇ ನಿಂತು 15 ಲಕ್ಷ ಜನರಿಗೆ ದರ್ಶನ, 10 ಲಕ್ಷ ಜನರಿಗೆ ದಾಸೋಹ ಸೇರಿ ಗಣ್ಯರು, ಮಠಾಧೀಶರಿಗೆ ಯಾವುದೇ ಲೋಪ ಆಗದಂತೆ ಶ್ರಮಿಸಿದ ಪೊಲೀಸ್‌ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.