ಎಲ್ಲ ಪೌರ ಕಾರ್ಮಿಕರನ್ನು ಕಾಯಂಗೊಳಿಸಿ


Team Udayavani, Jan 24, 2019, 5:30 AM IST

dvg-3.jpg

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 15-20 ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ 270 ಪೌರ ಕಾರ್ಮಿಕರನ್ನು ಕಾಯಂ ಮಾಡಬೇಕು. ಜಿಲ್ಲಾಡಳಿತ ಪ್ರಕಟಿಸಿರುವ 34 ಜನರ ನೇರ ನೇಮಕಾತಿ ತಾತ್ಕಾಲಿಕ ಪಟ್ಟಿ ರದ್ದುಗೊಳಿಸಬೇಕು ಎಂದು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಪೌರ ಕಾರ್ಮಿಕರ ಮಹಾ ಸಂಘದ ರಾಜ್ಯ ಉಪಾಧ್ಯಕ್ಷ ಎಲ್‌.ಎಂ. ಹನುಮಂತಪ್ಪ ಒತ್ತಾಯಿಸಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 270 ಪೌರ ಕಾರ್ಮಿಕರನ್ನು ಫೆ. 1ರ ಒಳಗಾಗಿ ಏಕಕಾಲಕ್ಕೆ ಕಾಯಂ ಮಾಡಬೇಕು. ಇಲ್ಲದಿದ್ದಲ್ಲಿ, ಫೆ. 2 ರಿಂದ ಎಲ್ಲಾ ರೀತಿಯ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ, ನಗರಪಾಲಿಕೆಗೆ ಮುತ್ತಿಗೆ ಹಾಕಲಾಗುವುದು. ಮೈಮೇಲೆ ಮಲ-ಮೂತ್ರ ಸುರಿದುಕೊಂಡು ಪ್ರತಿಭಟನೆ ನಡೆಸಲಾಗುವುದು. ರಾಜ್ಯ ಸಮಿತಿಯೊಂದಿಗೆ ಚರ್ಚಿಸಿ, ವಿಧಾನ ಸೌಧ ಮುತ್ತಿಗೆ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾಡಳಿತ 74 ಜನ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿತ್ತು. ಜ.5 ರಂದು 34 ಜನರಿಗೆ ಮಾತ್ರ ನೇರ ನೇಮಕಾತಿಯಲ್ಲಿ ಕಾಯಂಗೊಳಿಸಲು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿರುವುದಕ್ಕೆ ನಮ್ಮ ವಿರೋಧ ಇದೆ. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಇರುವವರು ನಮ್ಮವರೇ. ಆದರೆ, ಆ 34 ಜನರನ್ನು ಮಾತ್ರ ನೇರ ನೇಮಕಾತಿ ಮಾಡಿಕೊಳ್ಳುವುದರಿಂದ ಇನ್ನುಳಿದರಿಗೆ ಅನ್ಯಾಯ ಆಗುತ್ತದೆ. ಹಾಗಾಗಿ ಜಿಲ್ಲಾಡಳಿತ ಪ್ರಕಟಿಸಿರುವ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಗೊಳಿಸಿ, ಏಕ ಕಾಲಕ್ಕೆ ಎಲ್ಲಾ 270 ಜನರನ್ನ ಕಾಯಂ ಮಾಡುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ದಾವಣಗೆರೆ ಮಹಾನಗರ ಪಾಲಿಕೆಯ 270 ಜನರು ಒಳಗೊಂಡಂತೆ ರಾಜ್ಯದ ಇತರೆ ನಗರಪಾಲಿಕೆ, ನಗರಸಭೆ, ಪುರಸಭೆಯ ಕೆಲಸ ಮಾಡುತ್ತಿರುವವರ ಕಾಯಂಗೆ ಒತ್ತಾಯಿಸಿ ಹಲವಾರು ಹೋರಾಟ ಕೈಗೊಂಡಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಎಚ್. ಆಂಜನೇಯ ಇತರರು ಎಲ್ಲರನ್ನೂ ಏಕಕಾಲಕ್ಕೆ ಕಾಯಂಗೊಳಿಸುವ ತೀರ್ಮಾನ ತೆಗೆದುಕೊಂಡು ಆದೇಶವನ್ನೂ ಹೊರಡಿಸಿದ್ದರು. ಈಗ ಹಿಂದಿನ ಸರ್ಕಾರದ ಆದೇಶವನ್ನೇ ಉಲ್ಲಂಘಿಸಿ, ಕೆಲವರ ನೇರ ನೇಮಕಾತಿಗೆ ಮಾತ್ರ ಮುಂದಾಗಿರುವುದು ಸರಿಯಲ್ಲ. ನಮ್ಮ ಬೇಡಿಕೆಯಂತೆ ಎಲ್ಲರನ್ನೂ ಏಕ ಕಾಲಕ್ಕೆ ಕಾಯಂ ಮಾಡಬೇಕು ಎಂದು ಒತ್ತಾಯಿಸಿದರು.

ಪೌರ ಹಾಗೂ ಕೊಳಚೆ ನಿರ್ಮೂಲನಾ ಗುತ್ತಿಗೆ ಸಫಾಯಿ ಕರ್ಮಚಾರಿಗಳ ಸಂಘದ ಜಿಲ್ಲಾ ಅಧ್ಯಕ್ಷ ಎಲ್‌.ಡಿ. ಗೋಣೆಪ್ಪ ಮಾತನಾಡಿ, ನಗರಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 260 ಪೌರ ಕಾರ್ಮಿಕರಲ್ಲಿ 34 ಜನರಿಗೆ ಮಾತ್ರ ಕಾಯಂ ಮಾಡಲು ಜಿಲ್ಲಾಡಳಿತ ಪ್ರಕಟಿಸಿರುವ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಘದಿಂದ ಆಕ್ಷೇಪಣೆ ಸಲ್ಲಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದುಪಡಿಸಿ, ಎಲ್ಲಾ 270 ಜನರನ್ನು ಏಕ ಕಾಲಕ್ಕೆ ಕಾಯಂ ಮಾಡಬೇಕು ಎಂದು ಒತ್ತಾಯಿಸಿ ಫೆ. 2 ರಂದು ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಕೆ.ಸಿ. ಮಂಜುನಾಥ್‌, ಮತ್ತೂರಮ್ಮ, ಎಚ್. ರವಿವರ್ಧನ್‌, ಎಸ್‌. ಸಂದೀಪ್‌, ಎನ್‌. ಶಿವರಾಜ್‌, ಎಂ. ಓಮೇಶ್‌, ಎಸ್‌. ರಾಮಚಂದ್ರಪ್ಪ, ಆರ್‌. ಮೂರ್ತಿ, ಎಸ್‌. ರವಿಕುಮಾರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.