ಅರ್ಜಿ ಸಲ್ಲಿಸದವರ ಬ್ಯಾಂಕ್‌ ಖಾತೆಗೆ ಸಾಲ-ಸಹಾಯಧನ ಜಮಾ!


Team Udayavani, Jan 24, 2019, 10:28 AM IST

chikk-7.jpg

ಚಿತ್ರದುರ್ಗ: ಸಾಲ ನೀಡುವಂತೆ ಅರ್ಜಿ ಸಲ್ಲಿಸಿಲ್ಲ, ಯಾರೂ ಸಾಲ ಮಂಜೂರು ಮಾಡಿಲ್ಲ. ಆದರೂ ಬ್ಯಾಂಕ್‌ ಖಾತೆಗೆ ಸಾಲ ಮತ್ತು ಸಹಾಯ ಧನದ ಲಕ್ಷಾಂತರ ರೂ. ಜಮಾ ಆಗಿದೆ!

ಹೌದು. ಆಶ್ಚರ್ಯ ಎನ್ನಿಸುವ ಇಂತಹದ್ದೊಂದು ಪ್ರಕರಣ ಡಾ| ಬಿ.ರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ಸರ್ಕಾರದ ಯಾವುದೇ ಯೋಜನೆಯ ಸಾಲ, ಸಹಾಯಧನ ಮತ್ತಿತರ ಸೌಲಭ್ಯ ಪಡೆಯಲು ವರ್ಷಗಳ ಕಾಲ ಅಲೆಯಬೇಕಾಗುತ್ತದೆ. ಆದರೆ, ಇಲ್ಲಿ ನೇರ ಸಾಲ ಯೋಜನೆಯಡಿಯಲ್ಲಿ ಹೈನುಗಾರಿಕೆ ಮಾಡಲು ಯಾವುದೇ ಅರ್ಜಿ ಸಲ್ಲಿಸದ ವ್ಯಕ್ತಿಯ ಇಡೀ ಕುಟುಂಬದ ಎಲ್ಲ ಸದಸ್ಯರ ಬ್ಯಾಂಕ್‌ ಖಾತೆಗಳಿಗೆ ಸಾಲ ಮತ್ತು ಸಹಾಯಧನದ ಹಣ ಆರ್‌ಟಿಜಿಎಸ್‌ ಮೂಲಕ ಜಮಾ ಆಗಿದೆ. ಈ ಬಗ್ಗೆ ಪೊಲೀಸ್‌ ದೂರು ದಾಖಲಾಗುತ್ತದೆ ಎಂಬ ಹಂತದಲ್ಲಿ ಇಡೀ ಪ್ರಕರಣ ಬಹಿರಂಗಗೊಂಡಿದೆ.

ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದ ಪ್ರಕಾಶ್‌ ಮಲ್ಲಪ್ಪ, ಇವರ ಮೂವರು ಪುತ್ರಿಯರಾದ ಪಲ್ಲವಿ, ರಜತ್‌ ಐಹೊಳೆ, ಪ್ರಿಯಾ, ಪತ್ನಿ ನರಸಮ್ಮ, ಪ್ರಕಾಶ್‌ ತಾಯಿ ಓಬಮ್ಮ ಇವರ ಹೆಸರಿನಲ್ಲಿರುವ ಚಿತ್ರದುರ್ಗದ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಮತ್ತು ಚಿತ್ರದುರ್ಗದ ಸಿಂಡಿಕೇಟ್ ಬ್ಯಾಂಕ್‌ಗಳ ಖಾತೆಗಳಿಗೆ ಕುರಿ ಸಾಕಾಣಿಕೆ ಮಾಡಲು ನೇರ ಸಾಲ ಯೋಜನೆಯಡಿಯಲ್ಲಿ ಹಣ ವರ್ಗಾವಣೆ ಆಗಿದೆ. ಇದರೊಂದಿಗೆ ಚಿತ್ರದುರ್ಗ ನಗರ ನಿವಾಸಿ ಗೌರಮ್ಮ ಕೋಂ ತಿಪ್ಪೇರುದ್ರಪ್ಪ ಎನ್ನುವವರ ಖಾತೆಗೂ ಹಣ ವರ್ಗಾವಣೆಯಾಗಿದೆ.

ಹಗರಣ: ಯಾವುದೇ ಅರ್ಜಿ ಸಲ್ಲಿಸದೇ ಸಾಲ ಮತ್ತು ಸಹಾಯಧನದ ಹಣ ಇಡೀ ಕುಟುಂಬದ ಸದಸ್ಯರ ಬ್ಯಾಂಕ್‌ ಖಾತೆಗೆ ಜಮಾ ಆಗಿದ್ದಾರೂ ಹೇಗೆ ಎಂಬ ಪ್ರಶ್ನೆ ಉದ್ಭವಿಸಿದೆ. ಇಲ್ಲಿ ಇಲಾಖೆ, ಬ್ಯಾಂಕ್‌ ಸಿಬ್ಬಂದಿ ಭ್ರಷ್ಟಾಚಾರ ಎಸಗಿದ್ದಾರೆಯೇ? ಅಥವಾ ಸಹಾಯಧನ ಬಿಡುಗಡೆ ಮಾಡುವಂತೆ ಜನಪ್ರತಿನಿಧಿಗಳು ಸೂಚಿಸಿದ್ದಾರೆಯೇ ಎಂಬುದಕ್ಕೆಲ್ಲ ಉತ್ತರ ಸಿಗಬೇಕಿದೆ.

ಅರ್ಜಿ ಸಲ್ಲಿಸುವಾಗ ಕೊಡಬೇಕಾಗುವ ದಾಖಲೆಗಳು ಸರಿಯಿದ್ದಲ್ಲಿ ಮಾತ್ರ ಹಣ ದೊರಕಲಿದೆ. ಸ್ಥಳೀಯ ಶಾಸಕರು ಅಧ್ಯಕ್ಷರಾಗಿರುವ ಸಮಿತಿ ಯೋಜನೆಗೆ ಫಲಾನುಭವಿ ಆಯ್ಕೆ ಮಾಡಲಿದೆ. ಈ ಪ್ರಕರಣದಲ್ಲಿ ಯಾವುದೂ ಸಹ ನಿಯಮದಂತೆ ನಡೆದಿಲ್ಲ; ಈ ಕುರಿತು ಸಮಗ್ರ ತನಿಖೆ ಮಾಡಿದರೆ ಸಂಪೂರ್ಣ ಸತ್ಯ ಹೊರ ಬೀಳಲಿದೆ.

ಗೊಂದಲದ ಹೇಳಿಕೆ: ಈ ಪ್ರಕರಣಕ್ಕೆ ಸಂಬಂಧಿಸಿ ಕಚೇರಿ ಅಧಿಕಾರಿ ಮತ್ತು ನೌಕರರು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಸಂಶಯ ಹೆಚ್ಚಲು ಕಾರಣವಾಗಿದೆ. ವ್ಯವಸ್ಥಾಪಕ ಶಿವಲಿಂಗಯ್ಯ, ಕ್ಷೇತ್ರಾಧಿಕಾರಿ ಹಾಲಸ್ವಾಮಿ, ಕೇಸ್‌ ವರ್ಕರ್‌ ಕಾರ್ತಿಕ್‌ ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದು, ಹಲವಾರು ಅನುಮಾನ ಮೂಡಿಸಿದೆ.

ಈ ಹಿಂದೆ ಜಿಲ್ಲಾ ವ್ಯವಸ್ಥಾಪಕರಾಗಿದ್ದವರಿಂದ ಈ ರೀತಿಯಾಗಿದೆ ಎಂದು ಒಬ್ಬರು ಹೇಳಿದರೆ, ಹಣ ಬಿಡುಗಡೆ ಮಾಡುವಂತೆ ಶಾಸಕರೊಬ್ಬರು ಶಿಫಾರಸು ಪತ್ರಗಳನ್ನು ನೀಡಿದ್ದರು ಎಂದು ಮತ್ತೂಬ್ಬರು ಹೇಳುತ್ತಿದ್ದಾರೆ. ಅಲ್ಲದೆ ಈಗಾಗಲೇ ಹಣ ಪಡೆದಿರುವ ವ್ಯಕ್ತಿ ಕಚೇರಿಗೆ ಬಂದು ಗಲಾಟೆ ಮಾಡಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದೂ ಕೆಲ ಸಿಬ್ಬಂದಿ ಹೇಳುತ್ತಿದ್ದು ಎಲ್ಲವೂ ಅಸ್ಪಷ್ಟವಾಗಿದೆ.

ನಾನು ಯಾರಿಗೂ ಶಿಫಾರಸು ಪತ್ರ ನೀಡಿಲ್ಲ. ಪ್ರಕರಣ ಗಮನಕ್ಕೆ ಬಂದಿದ್ದು ಕೂಡಲೇ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿ ಸಮಗ್ರ ತನಿಖೆ ಮಾಡಿ ಕ್ರಿಮಿನಲ್‌ ಮೊಕದ್ದಮೆ ಹೂಡಿ ಆರೋಪಿತರನ್ನು ಬಂಧಿಸುವಂತೆ ಸೂಚಿಸಿದ್ದೇನೆ.
• ಟಿ.ರಘುಮೂರ್ತಿ, ಶಾಸಕರು, ಚಳ್ಳಕೆರೆ 
ಪ್ರಕಾಶ್‌ ಎನ್ನುವ ವ್ಯಕ್ತಿ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲು ಮನವಿ ಸಲ್ಲಿಸಲಾಗಿದೆ. ಈಗಾಗಲೇ ಅವರು 2.67 ಲಕ್ಷ ರೂ.ಗಳನ್ನು ಇಲಾಖೆಗೆ ಪಾವತಿಸಿದ್ದಾರೆ. ಇನ್ನೂ 2 ಲಕ್ಷ ರೂ. ಪಾವತಿಸಬೇಕಿದೆ. ಈ ಪ್ರಕರಣ ನನ್ನ ಅವಧಿಯಲ್ಲಿ ಆಗಿದ್ದಲ್ಲ. 2017-18ನೇ ಸಾಲಿನಲ್ಲಿ ನಡೆದಿದೆ.
•ಶಿವಲಿಂಗಯ್ಯ, ಜಿಲ್ಲಾ ವ್ಯವಸ್ಥಾಪಕರು, ಅಂಬೇಡ್ಕರ್‌ ಅಭಿವೃದ್ಧಿ ನಿಗಮ.

ಟಾಪ್ ನ್ಯೂಸ್

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.