ಕನ್ನಡಿಯಲ್ಲಿ ಕಂಡ ನಾನು


Team Udayavani, Jan 25, 2019, 12:30 AM IST

w-11.jpg

ಜೀವನದಲ್ಲಿ ಯಶಸ್ವಿಯಾಗುವುದು ಹೇಗೆ ಎಂಬ ಚಿಂತನೆಯಲ್ಲಿ ಮುಳುಗಿದ್ದೆ. ಎಷ್ಟೊಂದು ಗಹನವಾಗಿ ಆಲೋಚಿಸುತ್ತಿದ್ದೆ ಎಂದರೆ ಹೊರಜಗತ್ತಿನ ಪರಿವೆಯೇ ಇರಲಿಲ್ಲ. ಯಾರೋ ನನ್ನ ಭುಜವನ್ನು ತಟ್ಟಿದ ಹಾಗಾಯಿತು. ಕೂಡಲೇ ಬಾಹ್ಯ ಜಗತ್ತಿಗೆ ಮರಳಿದೆ. ತಿರುಗಿ ನೋಡಿದರೆ ನನ್ನ ಕಣ್ಣುಗಳನ್ನು ನಾನೇ ನಂಬಲಾಗದ ಸ್ಥಿತಿ. ನನ್ನೆದುರು ಭಗವಂತನೇ ನಿಂತಿದ್ದ. ಸರ್ವಶಕ್ತ, ಸರ್ವವ್ಯಾಪಿಯಾದ ಭಗವಂತನೇ! ದೇವರು ಕಣ್ಣಮುಂದೆ ಬಂದಾಗ ಎಲ್ಲರೂ ಏನು ಮಾಡುತ್ತಾರೆ? ವರವನ್ನು ಬೇಡುತ್ತಾರೆ. ನನ್ನದು ಕೂಡಾ ಸಾಮಾನ್ಯ ಮನುಷ್ಯನ ಮನಸ್ಸೇ. ನನಗೆ ಯಶಸ್ಸು ಬೇಕು, ಕೀರ್ತಿ ಸಂಪಾದಿಸಬೇಕು, ಸಂಪತ್ತನ್ನು ಸಂಚಯನಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳು ಮನಸ್ಸಿಗೆ ಬಂದವು. ನಾನು ವರಗಳನ್ನು ಬೇಡುತ್ತೇನೆಂದು ದೇವರಿಗೆ ಗೊತ್ತಾಗಿಬಿಟ್ಟಿತ್ತು. ಹೇಗೂ ದೇವರಲ್ಲವೆ? ನಾನು ಬಾಯಿ ತೆರೆಯುವ ಮುನ್ನವೇ, “ನೀನು ಬಯಸಿದ್ದನ್ನೆಲ್ಲ ನೀಡಬಲ್ಲ ಒಬ್ಬ ವ್ಯಕ್ತಿಯನ್ನು ತೋರಿಸಬಲ್ಲೆ’ ಎಂದು ಅವನೇ ಹೇಳಿದ. “ಆ ವ್ಯಕ್ತಿಯನ್ನು ತೋರಿಸು ದೇವರೇ’ ಎಂದು ಕೇಳಿಕೊಂಡೆ.

ಭಗವಂತ ಕಣ್ಣು ಮುಚ್ಚಲು ಹೇಳಿದ. ನಾನು ಕಣ್ಣು ಮುಚ್ಚಿದೆ. ಕಣ್ಣು ತೆರೆದರೆ ಭಗವಂತನಿಲ್ಲ. ಮಾಯೆ. ಭಗವಂತ ನನಗೆ ಮೋಸ ಮಾಡಿಬಿಟ್ಟ ಎಂದು ಭಾವಿಸಿದೆ. ಭಗವಂತನ ಬದಲಿಗೆ ನನ್ನ ಮುಂದೆ ಒಂದು ಕನ್ನಡಿ ಪ್ರತ್ಯಕ್ಷವಾಗಿತ್ತು! ಅದರಲ್ಲಿ ನನ್ನದೇ ಪ್ರತಿಬಿಂಬವಿತ್ತು. ಆ ಪ್ರತಿಬಿಂಬವನ್ನು ನೋಡುತ್ತ ನಿಂತೆ.

ಭಗವಂತ ಹೇಳಿದ ವ್ಯಕ್ತಿ ಯಾರೆಂದು ಕೂಡಲೇ ಗೊತ್ತಾಯಿತು. ಆತ ಸೂಚಿಸಿದ್ದು ನನ್ನನ್ನೇ! ನಾವು ನಮ್ಮಲ್ಲಿ ವರ ಬೇಡಿಕೊಳ್ಳಬೇಕೇ ಹೊರತು ಇನ್ನೊಬ್ಬರಲ್ಲಿ ಅಲ್ಲ. ನಮ್ಮ ಸಾಧನೆಯನ್ನು ನಾವು ಮಾಡಿಕೊಳ್ಳಬೇಕೇ ಹೊರತು ಅದಕ್ಕೆ ದೇವರಿಂದ ನೆರವನ್ನು ನಿರೀಕ್ಷಿಸಬಾರದು. ನಮ್ಮ ಗೆಲುವಿಗೂ ಸೋಲಿಗೂ ನಾವು ಕಾರಣರೇ ಹೊರತು ಅನ್ಯರಲ್ಲ. ಈ ಬಗ್ಗೆ ವಿದ್ಯಾರ್ಥಿಗಳಾದ ನಾವು ಯೋಚಿಸಬೇಕಾಗಿದೆ. ನಾವು ನಮ್ಮ ಪ್ರಯತ್ನವನ್ನು ಮಾಡದೆ ದೇವರ ಮೊರೆ ಹೋಗುವುದು ತಪ್ಪು. ಮನುಷ್ಯ ಪ್ರಯತ್ನವಿದ್ದಲ್ಲಿ ದೈವಬಲವೂ ಕೂಡಿಬರುತ್ತದೆ.

ಶರತ್‌ ಕೆ.ಎಸ್‌., ಕುಂದಾಪುರ
ಸಮಾಜಸೇವಾ ಸ್ನಾತಕೋತ್ತರ ವಿಭಾಗ, ಮಂಗಳೂರು ವಿ.ವಿ.

 

ಟಾಪ್ ನ್ಯೂಸ್

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.