ಮಲ್ಪೆ: ನಾಲ್ಕನೇ ಹಂತದ ಮೀನುಗಾರಿಕಾ ಬಂದರು ಯೋಜನೆ


Team Udayavani, Jan 25, 2019, 12:50 AM IST

malpe.jpg

ಉಡುಪಿ: ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಯಾಂತ್ರೀಕೃತ ಬೋಟುಗಳ ಸಂಖ್ಯೆ ಹೆಚ್ಚುತ್ತಿದ್ದು, ನಾಲ್ಕನೇ ಹಂತದ ಯೋಜನೆಗೆ ಹಳೇ ಮೀನುಗಾರಿಕಾ ಬಂದರು ಸಮೀಪ ಜಾಗ ಗುರುತಿಸಲಾಗಿದೆ. ಈ ಬಗ್ಗೆ ಮೀನುಗಾರಿಕಾ ಇಲಾಖೆಯು ಬಂದರು ಇಲಾಖೆಗೆ ಪ್ರಸ್ತಾವನೆಯನ್ನೂ ಸಲ್ಲಿಸಿದೆ. ಬಂದರು ಇಲಾಖೆಯ ಅನುಮೋದನೆ ಮಾತ್ರ ಬಾಕಿಯಿದೆ. ರಾಜ್ಯ ಮತ್ತು ಕೇಂದ್ರ ಸರಕಾರಗಳ ಜಂಟಿ ಸಹಭಾಗಿತ್ವದಲ್ಲಿ ಸುಮಾರು 10 ಕೋ.ರೂ. ವೆಚ್ಚದ ಯೋಜನೆ ಇದಾಗಿದೆ. 

ಈ ಹಿಂದೆ ಪಡುಕೆರೆಯಲ್ಲಿ 4ನೇ ಹಂತದ ಯೋಜನೆ ರೂಪಿಸಲು ತೀರ್ಮಾನಿಸಲಾಗಿತ್ತು. ಆದರೆ ಸಣ್ಣ ಪ್ರಮಾಣದ (ನಾಡದೋಣಿ) ಮೀನುಗಾರಿಕೆ ನಡೆಸುವವರಿಗೆ ಇದರಿಂದ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಆ ಪ್ರಸ್ತಾವವನ್ನು ಕೈಬಿಡಲಾಗಿದೆ. ಜಟ್ಟಿ ನಿರ್ಮಾಣವಾಗಿ ದೊಡ್ಡ ಗಾತ್ರದ ಯಾಂತ್ರೀಕೃತ ಬೋಟುಗಳು ನಿಲುಗಡೆಯಾದರೆ ಮೀನುಗಾರಿಕೆಗೆ ಅನನುಕೂಲವಾಗುತ್ತದೆ ಎಂದು ಸ್ಥಳೀಯರು ವಿರೋಧಿಸಿದ್ದರು.

ಮಲ್ಪೆಯಲ್ಲಿರುವ 1, 2 ಮತ್ತು 3ನೇ ಹಂತದಲ್ಲಿ ಬೋಟುಗಳು ನಿಲುಗಡೆಯಾಗುತ್ತಿದ್ದು, ಯಾಂತ್ರೀಕೃತ ಬೋಟುಗಳ ಸಂಖ್ಯೆಯ ಹೆಚ್ಚಳದಿಂದಾಗಿ 4ನೇ ಹಂತದ ಯೋಜನೆ ಅಗತ್ಯವಾಗಿದೆ.

ಪ್ರಸ್ತುತ ಬಂದರಿನಲ್ಲಿ 2100 ಯಾಂತ್ರೀ ಕೃತ ಬೊಟುಗಳಿದ್ದು, ಆಳಸಮುದ್ರದಲ್ಲಿ ಕಾರ್ಯಾಚರಿಸುವ 1,100 ಬೋಟು ಗಳಿವೆ. 150 ಪರ್ಸಿನ್‌ ಸಹಿತ ಇತರ 800 ಯಾಂತ್ರೀಕೃತ ಬೋಟುಗಳು ಇಲ್ಲಿವೆ.

ಪ್ರಥಮ ಹಾಗೂ ಎರಡನೇ ಹಂತದಲ್ಲಿ 800 ಬೋಟುಗಳು ನಿಲುಗಡೆ ಸಾಮರ್ಥ್ಯ ಹೊಂದಿದ್ದು, 3ನೇ ಹಂತದಲ್ಲಿ 600 ಬೋಟುಗಳು ನಿಲುಗಡೆಯಾಗಬಹುದು. ನಾಲ್ಕನೆಯ ಹಂತದ ಯೋಜನೆಯಲ್ಲಿ 400 ಬೋಟುಗಳು ನಿಲುಗಡೆಗೊಳ್ಳಬಹುದು. ಇದರಿಂದ ಈಗಾಗಲೇ ಸ್ಥಳಾಭಾವದಿಂದ ಉಂಟಾಗುತ್ತಿದ್ದ ಅನೇಕ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತದೆ. 

ಕೆಲವೊಂದು ಬಾರಿ ಹವಾಮಾನ ವೈಪರೀತ್ಯ ಉಂಟಾದಾಗ ಇತರ ಭಾಗದ ಬೋಟುಗಳು ಕೂಡ ಇಲ್ಲಿಗೆ ಬಂದು ಲಂಗರು ಹಾಕುವ ಪ್ರಮೇಯವೂ ಇದೆ. ಇದರಿಂದ ಇಲ್ಲಿ ಬೋಟುಗಳ ದಟ್ಟನೆಯೂ ಉಂಟಾಗುತ್ತದೆ. ನಾಲ್ಕನೆಯ ಹಂತದ ಯೋಜನೆ ಪ್ರಾರಂಭಗೊಂಡರೆ ಸುಮಾರು 400ರಷ್ಟು ಬೋಟುಗಳನ್ನು ನಿಲುಗಡೆ ಮಾಡಬಹುದು.
– ಪಾರ್ಶ್ವನಾಥ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕರು, ಉಡುಪಿ ಜಿಲ್ಲೆ 

ನಾಲ್ಕನೇ ಹಂತದ ಯೋಜನೆಯಲ್ಲಿ ಸುಮಾರು 400ರಿಂದ 500ರಷ್ಟು ಬೋಟುಗಳು ನಿಲುಗಡೆಗೆ ಅವಕಾಶ ಲಭಿಸಲಿದ್ದು, ಮೀನುಗಾರರಿಗೆ ಅನುಕೂಲವಾಗಲಿದೆ.
-ಸತೀಶ್‌ ಕುಂದರ್‌,  ಮಲ್ಪೆ ಮೀನುಗಾರಿಕಾ ಸಂಘದ ಅಧ್ಯಕ್ಷ. 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.