ಗಾಳಿಪಟ ಪ್ರಾದೇಶಿಕವಾರು ಹಾರಾಟ


Team Udayavani, Jan 25, 2019, 12:30 AM IST

w-26.jpg

ಒಂದು ಕಡೆ “ಗಾಳಿಪಟ’ ಚಿತ್ರಕ್ಕೆ 11 ವರ್ಷ, ಇನ್ನೊಂದು ಕಡೆ “ಗಾಳಿಪಟ-2′ ಆರಂಭ … ಈ ಎರಡು ಸಂಭ್ರಮಕ್ಕೆ ಯೋಗರಾಜ್‌ ಭಟ್‌ ಹಾಗೂ ತಂಡ ಸಾಕ್ಷಿಯಾಗಿತ್ತು. “ಗಾಳಿಪಟ’ ಚಿತ್ರಕ್ಕೆ 11 ವರ್ಷ ತುಂಬಿದ ದಿನವೇ ತಮ್ಮ ಹೊಸ ಚಿತ್ರ “ಗಾಳಿಪಟ-2′ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಮಾಧ್ಯಮ ಮುಂದೆ ಬಂದಿದ್ದರು ಭಟ್ಟರು. ಈ ಬಾರಿಯೂ ಭಟ್ಟರು ತಮ್ಮ ಹೊಸ ಚಿತ್ರಕ್ಕಾಗಿ ದೊಡ್ಡ ತಂಡವನ್ನು ಸೇರಿಸಿದ್ದಾರೆ. ಈ ಬಾರಿ ಭಟ್ಟರದ್ದು ಮಲ್ಟಿಸ್ಟಾರ್‌ ಸಿನಿಮಾ ಎನ್ನಬಹುದು. ಮೂವರು ನಾಯಕಿಯರು ಹಾಗೂ ಐವರು ನಾಯಕರಿದ್ದಾರೆ. ಜೊತೆಗೆ ಅನಂತ್‌ನಾಗ್‌ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. “ಗಾಳಿಪಟ-2′ ಚಿತ್ರದಲ್ಲಿ ಯೋಗರಾಜ್‌ ಭಟ್ಟರು ಬೇರೆ ಬೇರೆ ಪ್ರಾದೇಶಿಕತೆಯನ್ನು ಒಟ್ಟು ಸೇರಿಸಿದ್ದಾರೆ. ಕರಾವಳಿ, ವಿದೇಶ, ಉತ್ತರ ಕರ್ನಾಟಕ, ಮಂಡ್ಯ ಹಾಗೂ ಬೆಂಗಳೂರು … ಈ ಭಾಗದ ಪಾತ್ರಗಳೊಂದಿಗೆ ಭಟ್ಟರು ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರವನ್ನು ಮಹೇಶ್‌ ದಾನನ್ನವರ್‌ ನಿರ್ಮಿಸುತ್ತಿದ್ದಾರೆ. “ಶು ತಾಯ್‌’ ಎಂಬ ಪಂಜಾಬಿ ಸಿನಿಮಾ ನಿರ್ಮಿಸಿರುವ ಮಹೇಶ್‌ ಅವರಿಗೆ ಇದು ಮೊದಲ ಸಿನಿಮಾ. 

ಚಿತ್ರದಲ್ಲಿ ನಾಯಕರಾಗಿ ಶರಣ್‌, ಪವನ್‌( ಲೂಸಿಯಾ), ರಿಷಿ ಹಾಗೂ ನಾಯಕಿಯರಾಗಿ ಸೋನಾಲ್‌ ಮೊಂತೆರೋ, ಶರ್ಮಿಳಾ ಮಾಂಡ್ರೆ ಈಗಾಗಲೇ ಆಯ್ಕೆಯಾಗಿದ್ದು, ಇನ್ನೊಬ್ಬಳು ಮಾಡೆಲ್‌ ಹಾಗೂ ಚೈನಾ ಹುಡುಗಿಯ ಆಯ್ಕೆ ನಡೆಯಬೇಕಿದೆ. ಚಿತ್ರದ ಬಗ್ಗೆ ಮಾತನಾಡುವ ಯೋಗರಾಜ್‌ ಭಟ್‌, “ಮೊದಲ “ಗಾಳಿಪಟ’ಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. “ಗಾಳಿಪಟ-2′ ಮಾಡಬೇಕೆಂದುಕೊಂಡಾಗಲೇ ಮೊದಲ ಪಾತ್ರಗಳು ಯಾವುದೂ ಇರಲ್ಲ ಅಂದುಕೊಂಡಿದ್ದೆ. ಅದರಂತೆ ಮಾಡುತ್ತಿದ್ದೇನೆ. ಈ ಚಿತ್ರದಲ್ಲಿ ಇವತ್ತಿನ ಹುಡುಗರ ಬಾಳು-ಗೋಳು ಪ್ರೇಮ-ಕಾಮ, ಜೀವನವನ್ನು ನೋಡುವ ಹಾಗೂ ಹೆಣೆಯುವ ರೀತಿಯನ್ನು ಹೇಳಲು ಹೊರಟಿದ್ದೇನೆ. ಮೊದಲ ಬಾರಿಗೆ ಜಯಂತ್‌ ಕಾಯ್ಕಿಣಿ ಹಾಗೂ ನಾನು ಜೊತೆಗೆ ಕುಳಿತು ಸ್ಕ್ರಿಪ್ಟ್ ಮಾಡುತ್ತಿದ್ದೇವೆ’ ಎನ್ನುವುದು ಅವರ ಮಾತು. ನಿರ್ಮಾಪಕ ಮಹೇಶ್‌ ಈ ಸಿನಿಮಾವನ್ನು ಅಕ್ಟೋಬರ್‌ 4ಕ್ಕೆ ಬಿಡುಗಡೆ ಮಾಡಲು ಮುಂದಾಗಿದ್ದಾರಂತೆ. “ಮಹೇಶ್‌ ಚಿತ್ರವನ್ನು ಅಕ್ಟೋಬರ್‌ 4 ಬಿಡುಗಡೆ ಮಾಡುವುದಾಗಿ ಘೋಷಿಸುವ ಎಂದರು. ಆಗ ನಾನು ಹೇಳಿದೆ, “ಬಿಡುಗಡೆಯ ತಾರೀಕು ಹಾಗೂ ತಿಂಗಳು ಬೇಕಾದರೆ ಹೇಳುವ, ಆದರೆ ಇಸವಿ ಬೇಡ. ಇದು ಕರ್ನಾಟಕ’ ಎಂದು. ಈ ಬಾರಿ ಅಕ್ಟೋಬರ್‌ 4ಕ್ಕೆ ರಿಲೀಸ್‌ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇವೆ’ ಎನ್ನುವುದು ಭಟ್ಟರ ಮಾತು. ಚಿತ್ರದ ಬಹುತೇಕ ಭಾಗ ವಿದೇಶದಲ್ಲಿ ಚಿತ್ರೀಕರಣವಾಗಲಿದೆಯಂತೆ. 

ಚಿತ್ರದ ಬಗ್ಗೆ ಮಾತನಾಡುವ ಜಯಂತ್‌ ಕಾಯ್ಕಿಣಿ, “ಮೊದಲ “ಗಾಳಿಪಟ’ ಹುಟ್ಟಿ 11 ವರ್ಷ. ಆಗಲೂ ನಾನಿದ್ದೆ, ಈಗಲೂ ನಾನಿದ್ದೇನೆ ಎಂಬ ಖುಷಿ. “ಗಾಳಿಪಟ’ ಸ್ವತ್ಛಂದವಾಗಿ ಹಾರಬೇಕಾದರೆ ಸೂತ್ರ ಗಟ್ಟಿ ಇರಬೇಕು. ಆ ಸೂತ್ರ ಯಾವುದಾದರೂ ಇರಬಹುದು, ಜೀವನಪ್ರೀತಿ, ಭಾವನಾತ್ಮಕ ಕೇಂದ್ರ ಅಥವಾ ಸಂಬಂಧಗಳು … ಈ ತರಹದ ಅಂಶಗಳೊಂದಿಗೆ ಈ ಸಿನಿಮಾ ಸಾಗಲಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಬೆಂಗಳೂರಿನ ಬಗ್ಗೆ ಆಕರ್ಷಿತರಾಗಿ ಬರುವ ಯುವಕರ ಕಣ್ಣಿನ ಖುಷಿ, ದುಃಖ, ಹತಾಶೆಯನ್ನು ಕಟ್ಟಿಕೊಡುವ ಅಪರೂಪದ ನಿರ್ದೇಶಕ ಯೋಗರಾಜ್‌ ಭಟ್‌. ಈ ಚಿತ್ರದಲ್ಲಿ ಅದನ್ನು ಕಟ್ಟಿಕೊಡಲಿದ್ದಾರೆ’ ಎಂದರು. ಹಿರಿಯ ನಟ ಅನಂತ್‌ನಾಗ್‌, ಭಟ್ಟರ ಜೊತೆಗೆ ಈ ಹಿಂದಿನ ಚಿತ್ರಗಳಲ್ಲಿ ಕೆಲಸ ಮಾಡಿದ ಅನುಭವ ಹಂಚಿಕೊಂಡರು. ರಂಗಾಯಣ ರಘು ಚಿತ್ರದಲ್ಲಿ ನಟಿಸುತ್ತಿದ್ದಾರೆ. 

ಉಳಿದಂತೆ ಚಿತ್ರದಲ್ಲಿ ನಟಿಸುತ್ತಿರುವ ಶರಣ್‌ ಇಲ್ಲಿ ಉತ್ತರ ಕರ್ನಾಟಕದ ಹುಡುಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜನಪದ ಕಲೆಯನ್ನು ಮೈಗೂಢಿಸಿಕೊಂಡಿರುವ ಹುಡುಗನಾದರೆ, ಸೋನಾಲ್‌ ಮೊಂತೆರೋ ಕರಾವಳಿಯ ಯಕ್ಷಗಾನ ಕಲಾವಿದೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೆ ತರಬೇತಿ ಕೂಡಾ ಪಡೆಯುತ್ತಿದ್ದಾರಂತೆ. ರಿಷಿ ಮಂಡ್ಯ ಹುಡುಗನಾದರೆ, ಶರ್ಮಿಳಾ ವಿದೇಶದಿಂದ ಬಂದ ಹುಡುಗಿಯಾಗಿ ನಟಿಸಲಿದ್ದಾರೆ. ಪವನ್‌ ಪಕ್ಕಾ ಬೆಂಗಳೂರು ಹುಡುಗನಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತವಿದೆ. ಮೊದಲ ಬಾರಿಗೆ ಭಟ್ಟರ ಚಿತ್ರಕ್ಕೆ ಕೆಲಸ ಮಾಡುತ್ತಿರುವ ಖುಷಿ ಅರ್ಜುನ್‌ ಅವರದು. 

ಟಾಪ್ ನ್ಯೂಸ್

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.