ಬೆಳ್ತಂಗಡಿ: ತಾಲೂಕಿನಲ್ಲಿ ಸದ್ಯಕ್ಕಿಲ್ಲ ನೀರಿನ ತೊಂದರೆ


Team Udayavani, Jan 25, 2019, 12:50 AM IST

beltangady.jpg

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿಲ್ಲವಾದರೂ ಮುಂದಿನ ದಿನಗಳಲ್ಲೂ ಇದೇ ಪರಿಸ್ಥಿತಿ ಇರಬಹುದು ಎನ್ನುವಂತಿಲ್ಲ. ಅಂದರೆ ಬಹುತೇಕ ಕಡೆಗಳಲ್ಲಿ ಕೊಳವೆಬಾವಿಯನ್ನೇ ನಂಬಿರುವುದರಿಂದ ಮಾರ್ಚ್‌-ಎಪ್ರಿಲ್‌ನಲ್ಲಿ ಇದ್ದಕ್ಕಿದ್ದಂತೆ ಕೊಳವೆಬಾವಿಗಳು ಕೈಕೊಟ್ಟರೆ ನೀರಿಗೆ ಹಾಹಾಕಾರ ನಿರ್ಮಾಣವಾಗಬಹುದು.

ತಾಲೂಕಿನಲ್ಲಿ ಈ ವರ್ಷ ಕಳೆದ ಬಾರಿಗಿಂತ ಹೆಚ್ಚಿನ ಮಳೆಯಾದರೂ ಅದು ಅಂತರ್ಜಲದ ಮೇಲೆ ದೊಡ್ಡ ಪರಿಣಾಮ ಬೀರಿಲ್ಲ ಎನ್ನು ತ್ತಾರೆ ತಜ್ಞರು. ಕಳೆದ ವರ್ಷ ನೀರಿನ ಅಭಾವ ಗಂಭೀರ ಎನ್ನುವಷ್ಟರ ಮಟ್ಟಿಗೆ ತಲೆದೋರಿರ ಲಿಲ್ಲ. ಆದರೆ ಪಂಪ್‌, ವಿದ್ಯುತ್‌ ಕೈಕೊಟ್ಟು, ಕೊಳವೆಬಾವಿ ನಿಷ್ಕ್ರಿಯ ವಾಗಿ ತೊಂದರೆಯಾಗಿತ್ತು ಎನ್ನುತ್ತದೆ ತಾಲೂಕು ಆಡಳಿತ.

75 ಕೊಳವೆಬಾವಿ ಬೇಡಿಕೆ
ತಾಲೂಕಿನಲ್ಲಿ ಸದ್ಯದ ಪರಿಸ್ಥಿತಿಯಲ್ಲಿ 75 ಕೊಳವೆಬಾವಿ ಗಳ ಬೇಡಿಕೆ ಇದೆ. ಸಾಮಾನ್ಯವಾಗಿ ಒಂದು ಕೊಳವೆಬಾವಿಗೆ ಒಂದು ಲಕ್ಷ ರೂ. ಅನುದಾನವಾಗಿದ್ದರೆ, 1.25 ಲಕ್ಷ ರೂ. ವರೆಗೆ ಉಪಯೋಗಿಸಬಹುದಾಗಿದೆ. ಆದರೆ 700 ಅಡಿ ಕೊರೆದರೆ 1.50 ಲಕ್ಷ ರೂ. ಬೇಕಾಗುತ್ತದೆ. ಅಷ್ಟು ಖರ್ಚು ಮಾಡಿ ಕೊರೆಸಿದರೂ ನೀರು ಸಿಗುತ್ತದೆ ಎಂಬ ದೃಢ ವಿಶ್ವಾಸ ಇಲ್ಲ  ಎನ್ನುತ್ತಾರೆ ಅಧಿಕಾರಿಗಳು.

ಶಾಶ್ವತ ಯೋಜನೆ: ಪ್ರಸ್ತಾವನೆ
ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕೊಳವೆಬಾವಿಗಳನ್ನೇ ನಂಬಿ ಕೂತರೆ ಆಗದು ಎಂದು ಈಗಾಗಲೇ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದಿಂದ ಕುಡಿಯುವ ನೀರಿನ ಶಾಶ್ವತ ಯೋಜನೆಗಾಗಿ ಮೂರು ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಆದರೆ ಡಿಪಿಆರ್‌ ಸಿದ್ಧಪಡಿಸುವಂತೆ ಸರಕಾರದಿಂದ ನಿರ್ದೇಶನ ಬಂದಿಲ್ಲ.

ನಗರಕ್ಕೆ ನೀರು ಲಭ್ಯ
ಬೆಳ್ತಂಗಡಿ ನಗರ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ಈಗಾ ಗಲೇ ಸೋಮಾವತಿ ನದಿಗೆ ತಾತ್ಕಾಲಿಕ ಕಟ್ಟ ನಿರ್ಮಿಸ ಲಾಗಿದೆ. ಜತೆಗೆ 9 ಕೊಳವೆಬಾವಿಯಿಂದ ನೀರು ಉಪಯೋಗಿಸ ಲಾಗುತ್ತದೆ. ಒಂದು ವೇಳೆ ಕೊಳವೆಬಾವಿಯಲ್ಲಿ ನೀರಿನ ಕೊರತೆ ಕಂಡುಬಂದರೂ ನದಿಯ ನೀರನ್ನೇ ಪೂರೈಸಲು ಟ್ಯಾಂಕ್‌ಗಳ ವ್ಯವಸ್ಥೆ ಇದೆ. ಪ್ರತಿನಿತ್ಯ 1.05 ಎಂಎಲ್‌ಡಿ ನೀರಿನ ಬೇಡಿಕೆ ಇದ್ದು, 0.6 ಎಂಎಲ್‌ಡಿಯಷ್ಟು ನದಿ ನೀರನ್ನೇ ಬಳಸಲಾಗುತ್ತಿದೆ.

ಸಾಧ್ಯತೆಗಳು
ಬಂಟ್ವಾಳ ತಾಲೂಕಿನ ಎಎಂಆರ್‌ ಡ್ಯಾಮ್‌ನ ಹಿನ್ನೀರನ್ನು ಉಪಯೋಗಿಸಿಕೊಂಡು ತೆಕ್ಕಾರು ಗ್ರಾ.ಪಂ.ನ ವ್ಯಾಪ್ತಿಗೆ ಕುಡಿಯುವ ನೀರಿನ ಯೋಜನೆ ರೂಪಿಸುವುದಕ್ಕೆ 40 ಕೋ.ರೂ. ಪ್ರಸ್ತಾವನೆ ಹೋಗಿದೆ. ಇದು ಕಾರ್ಯಗತವಾದರೆ ಪರಿಸರದ 11 ಗ್ರಾಮಗಳಿಗೆ ಅನುಕೂಲವಾಗುತ್ತದೆ. ಬೆಳಾಲಿನಲ್ಲಿ ನೇತ್ರಾವತಿಗೆ ಸಣ್ಣ ಅಣೆಕಟ್ಟು ನಿರ್ಮಿಸಿದರೆ 6 ಗ್ರಾ.ಪಂ.ಗಳಿಗೆ ನೀರುಣಿಸಬಹುದು. ಇದಕ್ಕಾಗಿ 17 ಕೋ.ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ. ಮೇಲಂತಬೆಟ್ಟು ಗ್ರಾ.ಪಂ.ನ್ನು ದೃಷ್ಟಿಯಲ್ಲಿರಿಸಿ ಅಳದಂಗಡಿಯಲ್ಲಿ ಶಾಶ್ವತ ಯೋಜನೆ ರೂಪಿಸಲು 16 ಕೋ.ರೂ. ಪ್ರಸ್ತಾವನೆ ಕಳುಹಿಸಲಾಗಿದೆ. ಆದರೆ ಅಲ್ಲಿ ಅಗತ್ಯಕ್ಕೆ ತಕ್ಕಷ್ಟು ನೀರು ಸಿಗದಿರುವ ಆತಂಕವೂ ಇದೆ.

– ಚೆನ್ನಪ್ಪ ಮೊಲಿ, ಎಇಇ, ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗ

ಸದ್ಯ ತೊಂದರೆಯಿಲ್ಲ
ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಗ್ರಾ.ಪಂ.ನಿಂದ ನೀರಿನ ಕೊರತೆಯ ಕುರಿತು ಗಂಭೀರ ದೂರುಗಳು ಬಂದಿಲ್ಲ. ಮೇಲಂತಬೆಟ್ಟಿನ ಹಿರಿಯಾಜೆಯಲ್ಲಿದ್ದ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿದೆ. ನೀರಿನ ಕೊರತೆ ನಿವಾರಣೆಗೆ 14ನೇ ಹಣಕಾಸಿನ ಯೋಜನೆಯ ಅನುದಾನ ಉಪಯೋಗಿಸುವಂತೆ ಸರಕಾರ ನಿರ್ದೇಶನ ನೀಡಿದೆ. ಮುಂದಿನ 2 ತಿಂಗಳಲ್ಲಿ  ಮಳೆಯಾಗದಿದ್ದರೆ ಸಮಸ್ಯೆ ಎದುರಾಗಬಹುದು.
– ಕುಸುಮಾಧರ ಬಿ., ಇಒ, ಬೆಳ್ತಂಗಡಿ ತಾ.ಪಂ.

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.