ಮೀಸಲು ಬದಲಿಗೆ ಬಾದರ್ಲಿ ಒತ್ತಡ?


Team Udayavani, Jan 25, 2019, 11:19 AM IST

ray-3.jpg

ಗೊರೇಬಾಳ: ಜೆಡಿಎಸ್‌-ಕಾಂಗ್ರೆಸ್‌ ಜಂಗಿ ಕುಸ್ತಿಗೆ ಕಾರಣವಾಗಿದ್ದ ಸಿಂಧನೂರು ನಗರಸಭೆ ಅಧ್ಯಕ್ಷ ಸ್ಥಾನ ಮೀಸಲಾತಿಗೆ ಸಂಬಂಧಿಸಿದಂತೆ ಸೆ.3ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯೇ ಅಂತಿಮ ಎಂದು ನ್ಯಾಯಾಲಯ ತಿಳಿಸಿದೆ. ಆದರೂ ಇದೀಗ ಮತ್ತೇ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಬೆಂಗಳೂರಿನಲ್ಲಿ ಬೀಡು ಬಿಟ್ಟು ಕೈ ನಾಯಕರ ಮೇಲೆ ಒತ್ತಡ ತಂದು ಮೀಸಲಾತಿ ಬದಲಿಗೆ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

2018ರ ಆ.31ರಂದು ಸಿಂಧನೂರು ನಗರಸಭೆಗೆ ನಗರಸಭೆಗೆ ಚುನಾವಣೆ ನಡೆದಿತ್ತು. ಸೆ.3ರಂದು ಫಲಿತಾಂಶ ಪ್ರಕಟವಾಗಿತ್ತು. ಅಂದೇ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿತ್ತು. ಸಿಂಧನೂರು ನಗರಸಭೆ ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆಗೆ ಮೀಸಲಾಗಿದ್ದರಿಂದ ನಗರಸಭೆ ಚುನಾವಣಾ ಫಲಿತಾಂಶದಲ್ಲಿ 20 ಸ್ಥಾನಗಳೊಂದಿಗೆ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆದರೂ ಅಧ್ಯಕ್ಷ ಸ್ಥಾನದಿಂದ ವಂಚಿತವಾಯಿತು. ಇದನ್ನು ಅರಗಿಸಿಕೊಳ್ಳಲಾಗದ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅಂದೇ ಬೆಂಗಳೂರಿಗೆ ತೆರಳಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಮೂಲಕ ಮೈತ್ರಿ ಸರ್ಕಾರದ ಮೇಲೆ ಒತ್ತಡ ಹಾಕಿದ್ದರಿಂದ ಸೆ.6ರಂದು ರಾಜ್ಯ ಸರ್ಕಾರ ಮೀಸಲಾತಿ ಪರಿಷ್ಕರಿಸಿ ಮತ್ತೂಂದು ಅಧಿಸೂಚನೆ ಹೊರಡಿಸಿತ್ತು. ಇದರನ್ವಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಎರಡೂ ಸಾಮಾನ್ಯಕ್ಕೆ ಮೀಸಲಾದವು.

ಸರ್ಕಾರದ ಆದೇಶ ವಿರೋಧಿಸಿ ಸಿಂಧನೂರು ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಸದಸ್ಯರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಸುಮಾರು ಐದಾರು ತಿಂಗಳ ಕಾಲ ನ್ಯಾಯಾಲಯದಲ್ಲಿ ಪ್ರಕರಣವಿತ್ತು. ಇದರ ನಡುವೆ ರಾಜ್ಯ ಸರ್ಕಾರ ಸೆ.6ರಂದು ಹೊರಡಿಸಿದ ಅಧಿಸೂಚನೆ ಹಿಂಪಡೆದು 3ರಂದು ಹೊರಡಿಸಿದ್ದ ಮೀಸಲಾತಿ ಅಧಿಸೂಚನೆಯನ್ನೇ ಮಾನ್ಯ ಮಾಡಿದೆ. ಸುದೀರ್ಘ‌ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರದ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದೆ. ಈ ಮೂಲಕ ಸೆ.3ರಂದು ಹೊರಡಿಸಿದ ಆದೇಶವೇ ಅಂತಿಮವಾಗಿರುವುದರಿಂದ ಸಿಂಧನೂರು ನಗರಸಭೆ ಅಧ್ಯಕ್ಷ ಸ್ಥಾನ ಎಸ್‌ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾದಂತಾಗಿದೆ. ಇದರಿಂದ ನಾಡಗೌಡ ಚಾಣಾಕ್ಷ ರಾಜಕಾರಣಕ್ಕೆ ಗೆಲುವು ದಕ್ಕಿದರೆ, ಇನ್ನೊಂದೆಡೆ ಮಾಜಿ ಶಾಸಕ ಬಾದರ್ಲಿ ಬಳಗಕ್ಕೆ ತೀವ್ರ ಹಿನ್ನಡೆಯಾಗಿದೆ.

ನಾಡಗೌಡ ಚಾಣಾಕ್ಷ ನಡೆ: ವಿಧಾನಸಭೆ ಚುನಾವಣೆಯಲ್ಲಿ ಸಿಂಧನೂರು ನಗರದಲ್ಲಿ ಜೆಡಿಎಸ್‌ಗೆ ಹಿನ್ನಡೆಯಾಗಿದ್ದನ್ನು ಮನಗಂಡಿದ್ದ ಸಚಿವ ವೆಂಕಟರಾವ್‌ ನಾಡಗೌಡ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಬಹುಮತ ಬರುವುದಿಲ್ಲ ಎನ್ನುವುದನ್ನು ಅರಿತಿದ್ದರು. ಆದರೂ ಅಧಿಕಾರ ಜೆಡಿಎಸ್‌ಗೆ ಸಿಗಬೇಕು ಎನ್ನುವ ಮುಂದಾಲೋಚನೆಯಿಂದ ಸಿಂಧನೂರು ನಗರಸಭೆ ಮೀಸಲಾತಿ ಪರಿಗಣಿಸಿ, ಎಸ್‌ಟಿ ಮಹಿಳೆ ಜೆಡಿಎಸ್‌ನಲ್ಲಿ ಮಾತ್ರ ಗೆಲ್ಲುವ ಲೆಕ್ಕಾಚಾರದೊಂದಿಗೆ ಅಧ್ಯಕ್ಷ ಸ್ಥಾನವೂ ಎಸ್‌ಟಿ ಮಹಿಳೆಗೆ ಮೀಸಲಿಡುವಂತೆ ಚಾಣಾಕ್ಷತೆ ಮೆರೆದರು. ಅವರ ಚಾಣಾಕ್ಷತನದಂತೆ ಈಗ ಎಲ್ಲವೂ ನಡೆದಿದೆ. ಇದರೊಂದಿಗೆ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲು ಬದಲಿಗೆ ನಡೆಸಿದ ಪ್ರಯತ್ನ ಹೊಳೆಯಲ್ಲಿ ಹುಣಸೆಹಣ್ಣು ತೊಳೆದಂತಾಗಿದ್ದು, ಅವರಿಗೆ ಹಿನ್ನಡೆ ಆಗಿದೆ.

ಮತ್ತೆ ಮೀಸಲು ಬದಲಿಗೆ ಒತ್ತಡ: ಬಹುಮತ ಪಡೆದ ಕಾಂಗ್ರೆಸ್‌ ನಗರಸಭೆ ಅಧಿಕಾರ ಹಿಡಿಯಲೇಬೇಕು ಎನ್ನುವ ಪಟ್ಟಿನೊಂದಿಗೆ ಹಂಪನಗೌಡ ಬಾದರ್ಲಿ ಈಗ ಮತ್ತೇ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದು, ಮೀಸಲಾತಿ ಬದಲಾವಣೆ ಮಾಡಲು ಕೈ ಮುಖಂಡರ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.