ಸೌಲಭ್ಯಕ್ಕೆ ಆಗ್ರಹಿಸಿ ನಿವೃತ್ತ ಸಾರಿಗೆ ನೌಕರರ ಪ್ರತಿಭಟನೆ


Team Udayavani, Jan 25, 2019, 11:48 AM IST

25-january-22.jpg

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿವೃತ್ತ ಹಾಗೂ ಹಾಲಿ ನೌಕರರಿಗೆ ವಿವಿಧ ಸೌಲಭ್ಯ ನೀಡುವಲ್ಲಿ ಸರಕಾರ ಹಾಗೂ ಸಂಸ್ಥೆ ವಿಫ‌ಲವಾಗಿದೆ ಎಂದು ಆರೋಪಿಸಿ ನಿವೃತ್ತ ನೌಕರರ ಸಂಘದಿಂದ ಇಲ್ಲಿನ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಗುರುವಾರ ಇಲ್ಲಿನ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿದ ನಿವೃತ್ತ ನೌಕರರು, 2018 ರಿಂದ ನಿವೃತ್ತಿಯಾದ ನೌಕರರಿಗೆ ಉಪದಾನ, ರಜೆ ನಗದೀಕರಣ ನೀಡಿಲ್ಲ. ಹಾಲಿ ನೌಕರರಿಗೆ ಸಮಯಕ್ಕೆ ವೇತನ ಆಗುತ್ತಿಲ್ಲ. ಈ ನೌಕರರಿಗೆ ನೀಡಬೇಕಾದ ರಜೆ ನಗದೀಕರಣ, ಪ್ರೊಬೇಷನರಿ ಹಿಂಬಾಕಿ, ವೇತನ ಪರಿಷ್ಕರಣೆ ಬಾಕಿ, ಓಟಿ ಸೇರಿದಂತೆ ಇತರೆ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ಸಂಸ್ಥೆ ಆರ್ಥಿಕ ನಷ್ಟದಲ್ಲಿದೆ ಎನ್ನುವ ಕಾರಣಕ್ಕೆ ಕಾರ್ಮಿಕರನ್ನು ಸೌಲಭ್ಯ ವಂಚಿತರನ್ನಾಗಿ ಮಾಡುತ್ತಿರುವುದು ಆಡಳಿತ ವರ್ಗ ಹಾಗೂ ಸರಕಾರದಿಂದ ನಡೆಯುತ್ತಿರುವ ಕಾರ್ಮಿಕ ದೌರ್ಜನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಕರಸಾಸಂ ನೌಕರರ ಹಾಗೂ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಚ್.ಜಿ. ಕೊಪ್ಪದ ಮಾತನಾಡಿ, ಇತರೆ ಸಾರಿಗೆ ನಿಗಮಗಳ ನೌಕರರು ಸಕಾಲಕ್ಕೆ ಸೌಲಭ್ಯ ಸೇರಿದಂತೆ ವೇತನ ಪಡೆಯುತ್ತಿದ್ದಾರೆ. ಆದರೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಮಾತ್ರ ನೌಕರರನ್ನು ಶೋಷಣೆ ಮಾಡಲಾಗುತ್ತಿದೆ. ಸಂಸ್ಥೆಯ ಆರ್ಥಿಕ ಅವನತಿಗೆ ಸರಕಾರ ನಿರ್ಲಕ್ಷ್ಯವೇ ಕಾರಣವಾಗಿದೆ. ಸಂಸ್ಥೆ ಉಳಿಸುವ ನಿಟ್ಟಿನಲ್ಲಿ 2019-20ನೇ ಸಾಲಿಗೆ ವಿದ್ಯಾರ್ಥಿಗಳ ರಿಯಾಯಿತಿ ಪಾಸ್‌ ವಿತರಣೆ, ಸಿ ಶೆಡ್ಯೂಲ್‌ಗ‌ಳನ್ನು ಸ್ಥಗಿತಗೊಳಿಸುವ ತೀರ್ಮಾನ ಕೈಗೊಂಡು ಸರಕಾರಕ್ಕೆ ಎಚ್ಚರಿಕೆ ರವಾನಿಸಬೇಕು ಎಂದು ಒತ್ತಾಯಿಸಿದರು.

ಕೂಡಲೇ ಬಾಕಿಗಳನ್ನು ಪಾವತಿ ಮಾಡಬೇಕು. ದುಡಿಯುತ್ತಿರುವ ಕಾರ್ಮಿಕರಿಗೆ ಸರಿಯಾದ ಸಮಯಕ್ಕೆ ವೇತನ ಬಟವಡೆ ಮಾಡಬೇಕು. ಬಾಕಿ ಉಳಿಸಿಕೊಂಡಿರುವುದಕ್ಕೆ ಬಡ್ಡಿ ಸಮೇತ ಪಾವತಿ ಮಾಡಬೇಕು. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಕೇಂದ್ರ ಕಚೇರಿಯಲ್ಲಿ ಇಲ್ಲದ್ದರಿಂದ ಮುಖ್ಯ ಲೆಕ್ಕಾಧಿಕಾರಿ ಶಾಂತಪ್ಪ ಗೋಟಖಂಡಕಿ ಹಾಗೂ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಎಸ್‌.ಕೆ. ಹಳ್ಳಿ ಮನವಿ ಸ್ವೀಕರಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಬಿ. ತಹಶೀಲ್ದಾರ, ಕಾರ್ಮಿಕ ಮುಖಂಡರಾದ ಆರ್‌.ಎಫ್. ಕವಳಿಕಾಯಿ, ಆರ್‌.ಸಿ. ಮಠದ, ಎ.ಎಚ್. ಜವಳಿ, ವಿ.ಎಸ್‌. ಮಜ್ಜಿಗುಡ್ಡ, ಬಿ.ಎಸ್‌. ದೋತ್ರದ, ಅರುಣ ಭೊಸ್ಲೆ, ಆರ್‌.ಡಿ. ಎಲಿಸೂರ, ಐ.ವಿ. ಭದ್ರಾಪುರ, ಎಸ್‌.ಎಸ್‌. ವಿರಕ್ತಿಮಠ ಇನ್ನಿತರರಿದ್ದರು.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.