ಭಾರತವು ಚೀನಾ ನೋಡಿ ಕಲಿಯಬೇಕು: ರಾಹುಲ್
Team Udayavani, Jan 26, 2019, 12:30 AM IST
ಭುವನೇಶ್ವರ: ಉದ್ಯೋಗಾವಕಾಶ ಸೃಷ್ಟಿಯ ವಿಚಾರದಲ್ಲಿ ಭಾರತವು ಚೀನಾವನ್ನು ನೋಡಿ ಕಲಿಯಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಒಡಿಶಾದ ಭುವನೇಶ್ವರದಲ್ಲಿ ಶುಕ್ರವಾರ ಸಂವಾದ ಕಾರ್ಯಕ್ರಮ ಹಾಗೂ ರ್ಯಾಲಿ ನಡೆಸಿದ ರಾಹುಲ್, “ಮೋದಿಯವರು ಮೇಕ್ ಇನ್ ಇಂಡಿಯಾ ಬಗ್ಗೆ ಮಾತನಾಡುತ್ತಾರೆ. ಆದರೆ ಫಲಿತಾಂಶ ವೇನು? ಚೀನಾದಲ್ಲಿ 24 ಗಂಟೆಗಳಲ್ಲಿ 15 ಸಾವಿರ ಉದ್ಯೋಗ ಸೃಷ್ಟಿಯಾಗುತ್ತದೆ. ಆದರೆ, ಭಾರತದಲ್ಲಿ ಇದೇ ಅವಧಿಯಲ್ಲಿ 450 ಉದ್ಯೋಗ ಮಾತ್ರ ಸೃಷ್ಟಿಯಾಗುತ್ತದೆ. ಭಾರತವು ಚೀನಾವನ್ನು ನೋಡಿ ಕಲಿಯಬೇಕಿದೆ. ಚೀನಾ ಹಾಕುವ ಸವಾಲುಗಳನ್ನು ಎದುರಿಸುವ ಶಕ್ತಿ ಭಾರತಕ್ಕೆ ಮಾತ್ರವೇ ಇರುವುದು’ ಎಂದು ಹೇಳಿದ್ದಾರೆ. ಇದೇ ವೇಳೆ, ಪ್ರಿಯಾಂಕಾ ಅವರ ಸಕ್ರಿಯ ರಾಜಕಾರಣ ಪ್ರವೇಶವು ನಿನ್ನೆ -ಮೊನ್ನೆ ಕೈಗೊಂಡ ದಿಢೀರ್ ನಿರ್ಧಾರವಲ್ಲ. ಮಕ್ಕಳು ದೊಡ್ಡವರಾದ ನಂತರ ಪಕ್ಷದಲ್ಲಿ ಸಕ್ರಿಯಳಾಗುತ್ತೇನೆ ಎಂದು ಪ್ರಿಯಾಂಕಾ ಈ ಹಿಂದೆಯೇ ಹೇಳಿದ್ದರು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಹೇಳಿದ್ದಾರೆ. ಇದೇ ವೇಳೆ, ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಕಾಂಗ್ರೆಸ್ಗೆ ಸೇರುತ್ತಾರೆಂಬ ವದಂತಿ ಬಗ್ಗೆ ತಮಗೆ ಮಾಹಿತಿಯಿಲ್ಲ ಎಂದಿದ್ದಾರೆ ರಾಹುಲ್. ಇದಕ್ಕೂ ಮುನ್ನ, ಭುವನೇಶ್ವರ ಏರ್ಪೋರ್ಟ್ನಲ್ಲಿ ಫೋಟೋ ಕ್ಲಿಕ್ಕಿಸುತ್ತಿದ್ದ ವೇಳೆ ಕೆಳಕ್ಕೆ ಬಿದ್ದ ಫೋಟೋಗ್ರಾಫರ್ ಅನ್ನು ರಾಹುಲ್ ಅವರೇ ಸ್ವತಃ ಓಡಿಬಂದು ಮೇಲೆತ್ತಿದ ವಿಡಿಯೋವೊಂದು ಈಗ ವೈರಲ್ ಆಗಿದೆ.
ಪ್ರಿಯಾಂಕಾಗೆ ಅವಹೇಳನ: ಈ ನಡುವೆ ಬಿಹಾರದ ಸಚಿವ, ಬಿಜೆಪಿ ನಾಯಕ ವಿನೋದ್ ನಾರಾಯಣ ಝಾ ಅವರು ಪ್ರಿಯಾಂಕಾ ಗಾಂಧಿ ಬಗ್ಗೆ ಅವಹೇಳನಕಾರಿ ಪದಪ್ರಯೋಗ ಮಾಡಿ ವಿವಾದ ಸೃಷ್ಟಿಸಿದ್ದಾರೆ. ಪ್ರಿಯಾಂಕಾಗಾ ಸೌಂದರ್ಯವೊಂದು ಬಿಟ್ಟರೆ, ಬೇರೆ ಯಾವ ಅರ್ಹತೆಯೂ ಇಲ್ಲ ಎಂದಿದ್ದಾರೆ.
ಕಾಂಗ್ರೆಸ್ಗೆ ಮಂಜು ವಾರಿಯರ್?
ತ್ರಿಶೂರ್: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಮಲಯಾಳಂ ಖ್ಯಾತ ನಟಿ ಮಂಜು ವಾರಿಯರ್ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ. ಈಗಾಗಲೇ ಅವರು ಕಾಂಗ್ರೆಸ್ ಸೇರುವ ಇಚ್ಛೆ ವ್ಯಕ್ತಪಡಿಸಿ, ಈ ಬಗ್ಗೆ ಹಿರಿಯ ನಾಯಕರೊಂದಿಗೆ ಮಾತುಕತೆಯನ್ನೂ ನಡೆಸಿದ್ದಾರೆ. ಆದರೆ, ಲೋಕಸಭೆ ಚುನಾವಣೆ ವೇಳೆ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಕಡಿಮೆಯಿದೆ. ಆದರೆ, ಅವರನ್ನು ಸ್ಟಾರ್ ಪ್ರಚಾರಕರನ್ನಾಗಿ ನೇಮಕ ಮಾಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ