ಪ್ರವಾಸಿ ತಾಣವಾಗಿ ಬಾರಕೂರು: ಜಯಮಾಲಾ ಭರವಸೆ
Team Udayavani, Jan 26, 2019, 12:30 AM IST
ಉಡುಪಿ/ಬ್ರಹ್ಮಾವರ: ಬಾರಕೂರನ್ನು ಪ್ರವಾಸಿ ತಾಣವಾಗಿ ಘೋಷಿಸಲು ಪ್ರಯತ್ನಿಸುವುದಾಗಿ ಸಚಿವೆ ಡಾ| ಜಯಮಾಲಾ ಭರವಸೆ ನೀಡಿದರು.
ಜಿಲ್ಲಾಡಳಿತ, ಜಿ.ಪಂ., ಪ್ರವಾಸೋದ್ಯಮ ಇಲಾಖೆ, ಕನ್ನಡ ಸಂಸ್ಕೃತಿ ಇಲಾಖೆ, ತೋಟಗಾರಿಕಾ ಇಲಾಖೆ ಸಹಭಾಗಿತ್ವದಲ್ಲಿ ಬಾರಕೂರು ಕೋಟೆ ಪ್ರದೇಶದಲ್ಲಿ ಆರಂಭಗೊಂಡ 3 ದಿನಗಳ “ಆಳುಪೋತ್ಸವ 2019’ನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕರಾವಳಿಯ ನೆಲ, ಸಂಸ್ಕೃತಿ ಅದ್ಭುತವಾದುದು. ಅಳುಪರು ಮೊದಲು ಮಂಗಳೂರು, ಬಳಿಕ ಉದ್ಯಾವರ, ಅನಂತರ ಬಾರಕೂರನ್ನು ರಾಜಧಾನಿಯಾ ಗಿರಿಸಿಕೊಂಡು ಆಳಿದ್ದರು. ಆಳುಪೋತ್ಸವದ ಈ ಸಂದರ್ಭ ಬಾರಕೂರನ್ನು ಪ್ರವಾಸಿ ತಾಣವಾಗಿ ಘೋಷಿಸಲು ಪ್ರವಾಸೋದ್ಯಮ ಸಚಿವರಿಗೂ ಆಸಕ್ತಿ ಇದೆ. ಅವರಲ್ಲಿ ಮಾತನಾಡಿ ಇದಕ್ಕಾಗಿ ಪ್ರಯತ್ನಿಸುತ್ತೇನೆ ಎಂದರು.
ರಾಜರ ಸಾಂಸ್ಕೃತಿಕ ಕೊಡುಗೆಗಳಿಂದಾಗಿ ಇಂದಿಗೂ ಕರಾವಳಿಯ ನಾವು ಸುಸಂಸ್ಕೃತರಾಗಿ ಬದುಕುತ್ತಿದ್ದೇವೆ. ನಮ್ಮ ಸರಕಾರ ಮುಂದಿನ ಪೀಳಿಗೆಗೆ ಹಿಂದಿನವರ ಕೊಡುಗೆ ತಿಳಿಯುವಂತಾಗಲು ದಸರ, ಕದಂಬ, ಚಾಲುಕ್ಯ, ಕರಾವಳಿ, ಲಕ್ಕುಂಡಿ ಮೊದಲಾದ ಉತ್ಸವ ಗಳನ್ನು ನಡೆಸಿಕೊಂಡು ಬರುತ್ತಿದೆ ಎಂದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಇಂತಹ ಉತ್ಸವ ಪ್ರತಿವರ್ಷ ನಡೆಯುವಂತಾಗಬೇಕು. ಹೀಗಾದರೆ ಯುವ ಪೀಳಿಗೆಗೆ ಗತ ವೈಭವದ ಅರಿವು ಉಂಟಾಗುತ್ತದೆ ಎಂದರು.
ಬಾರಕೂರು ಸಂಸ್ಥಾನದ ಡಾ| ವಿಶ್ವ ಸಂತೋಷ ಭಾರತಿ ಗುರೂಜಿ, ಇಗರ್ಜಿಯ ಧರ್ಮಗುರು ವಂ| ಫಿಲಿಪ್ ಮೇರಿ ಅರಾನ್ಹ, ಮಸೀದಿಯ ಧರ್ಮಗುರು ಮೌಲಾನ ಮಹಮ್ಮದ್ ರಫೀಕ್ ಶುಭ ಕೋರಿದರು. ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಜಿ.ಪಂ. ಸಿಇಒ ಸಿಂಧು ರೂಪೇಶ್, ಎಡಿಸಿ ವಿದ್ಯಾಕುಮಾರಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್, ಜಿ.ಪಂ. ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ಗ್ರಾ.ಪಂ. ಅಧ್ಯಕ್ಷರಾದ ಬಾರಕೂರಿನ ಶೈಲಜಾ ಡಿ’ಸೋಜಾ, ಯಡ್ತಾಡಿಯ ಪ್ರಕಾಶ್ ಶೆಟ್ಟಿ, ತಾ.ಪಂ. ಸದಸ್ಯ ಅರುಣ್, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ, ಬಾರಕೂರಿನ ಮುಂದಾಳು ಶಾಂತಾರಾಮ ಶೆಟ್ಟಿ, ಜಾನಪದ ಜಾತ್ರೆ ನಿರ್ದೇಶಕ ಪಿಚ್ಚಳ್ಳಿ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ ಉಪಸ್ಥಿತರಿದ್ದರು. ಅಂಚೆ ಇಲಾಖೆ ಹೊರತಂದ ವಿಶೇಷ ಲಕೋಟೆಯನ್ನು ಸಚಿವರು ಬಿಡುಗಡೆಗೊಳಿಸಿದರು.
ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸ್ವಾಗತಿಸಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ಪ್ರಸ್ತಾವನೆಗೈದರು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್ ಕುಮಾರ್ ಶೆಟ್ಟಿ ವಂದಿಸಿದರು. ಬೆಂಗಳೂರಿನ ಗಣೇಶ ಪ್ರಸಾದ್ ನಿರ್ವಹಿಸಿದರು. ಸಿಂಹಾಸನ ಗುಡ್ಡೆಯಿಂದ ಕೋಟೆವರೆಗೆ ಆಕರ್ಷಕ ಹೆರಿಟೇಜ್ ವಾಕ್ ಜಾಥಾ ನಡೆಯಿತು.
ಉಲ್ಲೇಖವಿಲ್ಲದ ಪ್ರಾಚೀನತೆ
ಸುಮಾರು ಎಂಟು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಬಾರಕೂರಿನ ಭಂಡಾರಕೇರಿ ಮಠದ ಉಲ್ಲೇಖ ಆಳುಪೋತ್ಸವದಲ್ಲಿ ಎಲ್ಲಿಯೂ ಕಂಡುಬರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಎಸ್ ಐಟಿ ವಶಕ್ಕೆ ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ