ಹೊಸದಿಲ್ಲಿ ರಿಪಬ್ಲಿಕ್‌ ಪೆರೇಡ್‌ನ‌ಲ್ಲಿ ಕರಾವಳಿ ಕಲಾವಿದರ ಕೈಚಳಕ


Team Udayavani, Jan 26, 2019, 5:14 AM IST

26-january-32.jpg

ಮಹಾನಗರ : ಈ ಬಾರಿಯ ಗಣರಾಜ್ಯೋತ್ಸವದಂದು ಹೊಸದಿಲ್ಲಿಯ ರಾಜ್‌ಪಥ್‌ ಪೆರೇಡ್‌ನ‌ಲ್ಲಿ ‘ಮಹಾತ್ಮ ಗಾಂಧೀಜಿ ಬೆಳಗಾವಿ ಕಾಂಗ್ರೆಸ್‌ ಅಧಿವೇಶನ’ದ ಕರ್ನಾಟಕ ರಾಜ್ಯದ ಸ್ತಬ್ಧಚಿತ್ರ ಸಾಗಲಿದ್ದು, ಇದರ ನಿರ್ಮಾಣದ ಹಿಂದೆ ಕರಾವಳಿ ಕಲಾವಿದರ ಕೈಚಳಕವಿದೆ.

ದ.ಕ. ಜಿಲ್ಲೆಯ ಮುಚ್ಚಾರು ಮೂಲದ ಅಂತಾರಾಷ್ಟ್ರೀಯ ಕಲಾವಿನ್ಯಾಸಕ ಶಶಿಧರ ಅಡಪ ಮತ್ತು ತಂಡದವರು ಈ ಸ್ತಬ್ಧಚಿತ್ರ ನಿರ್ಮಾಣ ಮಾಡಿದ್ದು, ಈ ತಂಡದಲ್ಲಿ ಸುಳ್ಯ ಮೂಲದ ವಿನೋದ್‌ ಎಂಬ ಕಲಾವಿದ ಸಹಿತ 50 ಮಂದಿ ಕೈ ಜೋಡಿಸಿದ್ದಾರೆ. ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನಾಚರಣೆಯನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಎಲ್ಲ ರಾಜ್ಯಗಳು ಗಾಂಧೀಜಿ ಅವರ ಜೀವನಾಧಾರಿತ ಸ್ತಬ್ಧಚಿತ್ರದ ಪರಿಕಲ್ಪನೆ ಮಾಡುವಂತೆ ಕೇಂದ್ರ ಸರಕಾರ ಸೂಚಿಸಿತ್ತು.

ಪ್ರತಿ ವರ್ಷವು ಸ್ತಬ್ಧಚಿತ್ರ ನಿರ್ಮಾಣಕ್ಕೆ ಸಂಬಂಧಿತ ಮೂರು ಪರಿಕಲ್ಪನೆಯನ್ನು ಆಯಾ ರಾಜ್ಯಗಳಿಂದ ಕೇಂದ್ರಕ್ಕೆ ನೀಡಬೇಕು. ಆದರೆ ಈ ಬಾರಿ ಕೇಂದ್ರವೇ ಸೂಚಿಸಿತ್ತು. ಜ. 7ರಿಂದ ಸ್ತಬ್ಧಚಿತ್ರದ ಕಾರ್ಯದಲ್ಲಿ ಶಶಿಧರ ಅವರ ತಂಡ ತೊಡಗಿದೆ. 1924ರ ಮಹಾತ್ಮ ಗಾಂಧೀಜಿ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದಲ್ಲಿ ಏನೆಲ್ಲಾ ನಡೆಯಿತು? ಯಾರೆಲ್ಲ ಭಾಗವಹಿಸಿದ್ದರು ಎಂಬ ನಿಖರ ಮಾಹಿತಿಯನ್ನು ಸಂಗ್ರಹಿಸಿ, ಆ ವೇಳೆಯ ಫೋಟೋಗಳನ್ನು ಗಮನಿಸಿ ಸ್ತಬ್ಧಚಿತ್ರಕ್ಕೆ ಮತ್ತಷ್ಟು ಮೆರುಗು ನೀಡಿದ್ದಾರೆ. ಶಶಿಧರ ಅವರ ಒಂದು ತಂಡ ಹೊಸದಿಲ್ಲಿಯಲ್ಲಿ ಸ್ತಬ್ಧಚಿತ್ರ ಮಾಡುತ್ತಿದ್ದರೆ, ಮತ್ತೂಂದು ತಂಡ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿತ್ತು.

ಸ್ತಬ್ಧಚಿತ್ರದಲ್ಲೇನಿದೆ?
ಮಹಾತ್ಮ ಗಾಂಧೀಜಿ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ಸ್ತಬ್ಧಚಿತ್ರದಲ್ಲಿ ಸ್ವಾತಂತ್ರ್ಯ ಪರ ಹೋರಾಟದಲ್ಲಿ ದೇಸಿ ಪ್ರತಿಮೆಗಳನ್ನು ಬಳಕೆ ಮಾಡಲಾಗಿದೆ. ಅಧಿವೇಶನ ನಡೆದ ಜಾಗವನ್ನು ‘ವಿಜಯನಗರ’ ಎಂದು ಹೆಸರಿಡಲಾಗಿದೆ. ಪ್ರವೇಶ ದ್ವಾರದಲ್ಲಿ ಹಂಪಿ ವಿರೂಪಾಕ್ಷ ಗೋಪುರದ ಮಹಾದ್ವಾರವಿದ್ದು, ಸುತ್ತಮುತ್ತಲು ಜನಸಾಮಾನ್ಯರು ಓಡಾಡುತ್ತಿದ್ದಾರೆ. ಅಧಿವೇಶಕ್ಕೆ ಆಗಮಿಸಿದವರು ತಂಗಲು ಕುಟೀರಗಳನ್ನು ನಿರ್ಮಿಸಲಾಗಿದೆ. ಪಕ್ಕದಲ್ಲಿಯೇ ರೈಲು ನಿಲ್ದಾಣವಿದೆ. ಕುಡಿಯು ನೀರಿಗಾಗಿ ಪಂಪಾಸಾಗರವಿದೆ. ಅಧಿವೇಶನದಲ್ಲಿ ಗಾಂಧೀಜಿ ಭಾಷಣ ಮಾಡುವ ವೇದಿಕೆ ಇದ್ದು, ಅವರ ಹಿಂದೆ ಬಸವಣ್ಣ, ನಾಲ್ವಡಿ ಕೃಷ್ಣರಾಜ ಒಡೆಯರ್‌, ಬಸವೇಶ್ವರ, ವಿದ್ಯಾರಣ್ಯ, ಬಾಲ ಗಂಗಾಧರ ತಿಲಕರ ಫೋಟೋ ಇಡಲಾಗಿದೆ. 1921ರಲ್ಲಿ ಧ್ವಜವಂದನೆ ಮಾಡುತ್ತಿರುವ ಚಿತ್ರ ಬಿಂಬಿಸಲಾಗಿದ್ದು, ಅಂದಿನ ಕೆಂಪು, ಹಸಿರು, ಬಿಳಿ ಬಣ್ಣ ಧ್ವಜವಿದೆ. ಪಕ್ಕದಲ್ಲಿಯೇ ಸ್ವಾತಂತ್ರ್ಯ ಹೋರಾಟಗಾರ ಗಂಗಾಧರ ದೇಶಪಾಂಡೆ ಅವರು ಚರಕ ತಿರುಗಿಸುತ್ತಿದ್ದಾರೆ.

ಅಡಪರ ಚಿತ್ರಕ್ಕೆ ನಾಲ್ಕು ಬಾರಿ ಪ್ರಶಸ್ತಿ
ಗಣರಾಜ್ಯೋತ್ಸವ ಪೆರೇಡ್‌ನ‌ಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಶಶಿಧರ ಅಡಪ ಅವರು 12 ವರ್ಷಗಳಿಂದ ಸ್ತಬ್ಧಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಸಿದ್ಧಪಡಿಸಿದ ಸ್ತಬ್ದಚಿತ್ರಗಳ ಪೈಕಿ ಇಲ್ಲಿಯವೆರೆಗ 4 ಬಾರಿ ಪ್ರಶಸ್ತಿ ಸಂದಿದೆ. 2008 ಸಾಲಿನ ಹೊಯ್ಸಳ ವಾಸ್ತುಶಿಲ್ಪ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ, 2011 ಸಾಲಿನ ಬಿದರಿ ಕಲೆ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ, 2012 ಸಾಲಿನ ಭೂತಾರಾಧನೆ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ, 2015ನೇ ಸಾಲಿನ ಚೆನ್ನಪಟ್ಟಣದ ಆಟಿಕೆಗಳು ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ ಲಭಿಸಿತ್ತು.

ಬಹುಮಾನದ ನಿರೀಕ್ಷೆ
ಗಣರಾಜ್ಯೋತ್ಸವ ಪೆರೇಡ್‌ನ‌ಲ್ಲಿ ಕರ್ನಾಟಕ ರಾಜ್ಯಕ್ಕೆ ಸ್ತಬ್ಧಚಿತ್ರ ನಿರ್ಮಿಸಿದ್ದು, ಗೌರವದ ಕೆಲಸ. ನಮ್ಮ ರಾಜ್ಯದ ಸ್ತಬ್ಧಚಿತ್ರವು ಈ ಬಾರಿಯೂ ಬಹುಮಾನಗಳಿಸುತ್ತದೆ ಎಂಬ ನಿರೀಕ್ಷೆ ಇದೆ.
 – ಶಶಿಧರ ಅಡಪ,
ಕಲಾವಿನ್ಯಾಸಕ

ಟಾಪ್ ನ್ಯೂಸ್

D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

19-madikeri

Madikeri: ಕಾಡೆಮ್ಮೆ ದಾಳಿ: ಗಾಯ

18-missing-case

Missing case: ಹಾವಂಜೆ: ಯುವತಿ ನಾಪತ್ತೆ

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

17-thekkatte

Kumbhashi: ಟಯರ್‌ ಸಿಡಿದು ರಸ್ತೆ ವಿಭಾಜಕ ಏರಿದ ಕಾರು !

16-brahmavara

Bramavara: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ

15-belthanagdy

ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ; ಪಶು ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

D. K. Shivakumar ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು ನುಂಗಲಿ

19-madikeri

Madikeri: ಕಾಡೆಮ್ಮೆ ದಾಳಿ: ಗಾಯ

21-ganagvathi

ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ

18-missing-case

Missing case: ಹಾವಂಜೆ: ಯುವತಿ ನಾಪತ್ತೆ

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.