ಏ.1 ಜ್ಞಾನದಿನವಾಗಿ ಸರ್ಕಾರ ಆಚರಿಸಲಿ


Team Udayavani, Jan 26, 2019, 7:56 AM IST

26-january-100.jpg

ದಾವಣಗೆರೆ: ತುಮಕೂರಿನ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮದಿನವಾದ ಏ.1ನೇ ತಾರೀಕನ್ನು ಜ್ಞಾನ ದಿನವಾಗಿ ಸರ್ಕಾರ ಆಚರಿಸಬೇಕು ಎಂದು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಆಗ್ರಹಿಸಿದರು.

ನಗರದ ಕಾಯಿಪೇಟೆಯ ಬಸವೇಶ್ವರ ಪುತ್ಥಳಿ ಮುಂಭಾಗದಲ್ಲಿ ಶುಕ್ರವಾರ ಸ್ವಾಗತ್‌ ಯುವಕರ ಸಂಘದಿಂದ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಹಮ್ಮಿಕೊಂಡಿದ್ದ ನುಡಿನಮನ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ದೇಶದಲ್ಲೆಡೆ ಏ.1 ನ್ನು ಮೂರ್ಖರ ದಿನವೆಂದು ಆಚರಿಸಲಾಗುತ್ತಿದೆ. ಆದರೆ, ಆ ದಿನವನ್ನು ಜ್ಞಾನದ ದಿನವಾಗಿ ಆಚರಿಸುವ ಮೂಲಕ ಸಿದ್ಧಗಂಗಾ ಶ್ರೀಗಳಿಗೆ ಗೌರವ ಸಲ್ಲಿಸಬೇಕು ಎಂದರು.

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂಬ ಆಗ್ರಹ ಎಲ್ಲೆಡೆ ಕೇಳಿಬರುತ್ತಿದೆ. ಆದರೆ, ಶ್ರೀಗಳು ಎಂದೂ ಪ್ರಶಸ್ತಿ ಬಯಸಿದವರಲ್ಲ. ಅವರಿಗೆ ಭಾರತರತ್ನ ನೀಡಬೇಕು ಎಂಬುದು ಕೇವಲ ಒಬ್ಬರ ಮಾತಲ್ಲ. ಕೋಟ್ಯಾಂತರ ಭಕ್ತರ ಆಗ್ರಹವಾಗಿದೆ. ಈ ಪ್ರಶಸ್ತಿ ನೀಡುವುದರಿಂದ ಪ್ರಶಸ್ತಿಯ ಗೌರವ ಮತ್ತಷ್ಟು ಹೆಚ್ಚುತ್ತದೆ ಎಂದು ಹೇಳಿದರು.

ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯವಹಿಸಿ ಮಾತನಾಡಿ, ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಬೇಕೆಂಬುದು ಅಸಂಖ್ಯಾತ ಭಕ್ತರ ಆಗ್ರಹವಾಗಿದೆ. ಅನ್ನ, ಅಕ್ಷರ, ಆಶ್ರಯದಂತಹ ತ್ರಿವಿಧ ದಾಸೋಹಗಳಿಂದ ಶ್ರೀಗಳಿಂದು ಕೋಟ್ಯಾಂತರ ಜನರ ಮನಸ್ಸಿನಲ್ಲಿ ದೊಡ್ಡರತ್ನವಾಗಿ ಮನೆ ಮಾಡಿದ್ದಾರೆ. ಹುಟ್ಟಿದ ಬಳಿಕ ಒಳ್ಳೆಯ ಕಾರ್ಯಗಳ ಮೂಲಕ ಹೇಗೆ ಜನರು ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸನ್ಮಾರ್ಗದ ದಾರಿ ತೋರಿಸಿರುವ ದಿವ್ಯಜ್ಯೋತಿಯಾಗಿದ್ದಾರೆ ಎಂದರು.

ಚಿತ್ರದುರ್ಗದ ಮುರುಘಾಮಠದ ಮೇಲೆ ಸಿದ್ಧಗಂಗಾ ಶ್ರೀಗಳು ಅಪಾರ ಭಕ್ತಿಶ್ರದ್ಧೆಯನ್ನು ಹೊಂದಿದ್ದರು. ಮೊಟ್ಟಮೊದಲ ಬಾರಿಗೆ ಜಯದೇವ ಶ್ರೀಗಳು ಪ್ರಾರಂಭಿಸಿದ ಉಚಿತ ಪ್ರಸಾದ ನಿಲಯದ ಪರಿಕಲ್ಪನೆಯನ್ನು ತಮ್ಮ ಮಠದ ಮೂಲಕವೂ ಹೆಚ್ಚು ಕಾರ್ಯರೂಪಕ್ಕೆ ತಂದರು ಎಂದು ಸ್ಮರಿಸಿಕೊಂಡರು.

ಆವರಗೊಳ್ಳ ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಸಿದ್ಧಗಂಗಾ ಶಾಲೆ ಮುಖ್ಯೋಪಾಧ್ಯಾಯಿನಿ ಜಸ್ಟಿನ್‌ ಡಿಸೋಜಾ, ಪತ್ರಕರ್ತ ವೀರಪ್ಪ ಎಂ. ಬಾವಿ,ಹದಡಿ ನಟರಾಜ್‌, ಶಂಕರ್‌, ಶಾಂತಕುಮಾರ್‌ ಸೋಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.