ಕಾವ್ಯದಲ್ಲಿ ಸಾಮಾಜಿಕ ಕಳಕಳಿ, ವರ್ತಮಾನ ಇರಲಿ


Team Udayavani, Jan 26, 2019, 10:45 AM IST

litr.jpg

ಚನ್ನಪಟ್ಟಣ: ಕಾವ್ಯದಲ್ಲಿ ಸಾಮಾಜಿಕ ಕಳಕಳಿ ಇರಬೇಕು. ಕವಿಗಳು ವರ್ತಮಾನ, ಭೂತ ಹಾಗೂ ಭವಿಷ್ಯಗಳನ್ನು ಮನಸಲ್ಲಿಟ್ಟುಕೊಂಡು ಕಾವ್ಯ ರಚಿಸಬೇಕು ಎಂದು ಜಾನಪದ ವಿದ್ವಾಂಸ ಡಾ.ಚಕ್ಕೆರೆ ಶಿವಶಂಕರ್‌ ಹೇಳಿದರು.

ಪಟ್ಟಣದ ಸಾರ್ವಜನಿಕ ವಿದ್ಯಾಸಂಸ್ಥೆ ಆವರಣದಲ್ಲಿ ನಡೆದ ಕವಿ ಮಂಜೇಶ್‌ ಬಾಬು ಅವರ ‘ಜೀವನ’ ಹನಿಗವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಕಾವ್ಯದ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸವಾಗಬೇಕು. ಯುವ ಕವಿಗಳು ಪ್ರಸ್ತುತ ಸಮಾಜದ ಅವ್ಯವಸ್ಥೆಯನ್ನು ಬಿಂಬಿಸುವ ಕಾವ್ಯಗಳನ್ನು ರಚನೆ ಮಾಡಬೇಕು ಎಂದರು.

ಸ್ಥಳೀಯ ಕವಿಗಳನ್ನು ಗುರುತಿಸಿ: ಕಾವ್ಯ ರಚನೆಗೆ ಆಳವಾದ ಅಧ್ಯಯನ ಅಗತ್ಯ. ಹಿರಿಯ ಕವಿಗಳು ಹೇಗೆ ಕಾವ್ಯ ರಚನೆ ಮಾಡಿದ್ದಾರೆಂಬ ಬಗ್ಗೆ ಸಮಗ್ರ ಅಧ್ಯಯನ ಮಾಡಬೇಕು. ಅವರನ್ನು ಮಾದರಿಯಾಗಿಸಿಕೊಂಡು ಕಾವ್ಯ ಸೃಷ್ಟಿಗೆ ಮುಂದಾಗಬೇಕು. ಸ್ಥಳೀಯ ಕವಿಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸವಾಗಬೇಕು. ಅವರ ಕಾವ್ಯ, ಕಾದಂಬರಿ, ನಾಟಕಗಳ ಪುಸ್ತಕಗಳು ಪ್ರಕಟವಾಗಬೇಕು. ಆಗ ಮಾತ್ರ ಉತ್ತಮ ಕವಿಗಳು ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದರು.

ತೋಚಿದ್ದನ್ನು ಗೀಚುವ ಮನೋಭಾವ ಇರಲಿ: ವಿಮರ್ಶಕ ಡಾ.ಭೈರಮಂಗಲ ರಾಮೇಗೌಡ ಮಾತನಾಡಿ, ಪರಿಸರ, ರೈತರ ಸಮಸ್ಯೆ, ಗ್ರಾಮೀಣರ ಬದುಕು, ಪ್ರಸಕ್ತ ಸನ್ನಿವೇಶದ ವಿಚಾರಧಾರೆಗಳನ್ನು ಸೇರ್ಪಡೆ ಮಾಡಿಕೊಂಡು ಕಾವ್ಯ ರಚನೆ ಮಾಡಬೇಕು. ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃಷಿ ಮಾಡಬೇಕು, ತೋಚಿದ್ದನ್ನು ಗೀಚುವ ಮನೋಭಾವ ಇರಬಾರದು, ಕಾವ್ಯಕ್ಕೆ ಒಂದು ಘನತೆಯನ್ನು ಸೃಷ್ಟಿಸುವ ಕೆಲಸ ಯುವಕಗಳಿಂದ ಆಗಬೇಕು ಎಂದು ಹೇಳಿದರು.

ಹಿರಿಯದ ಹಾದಿಯಲ್ಲೇ ನಡೆಯಿರಿ: ಆದಿಚುಂಚನಗಿರಿ ಮಠದ ಶ್ರೀಅನ್ನದಾನೇಶ್ವರ ಸ್ವಾಮೀಜಿ ಮಾತನಾಡಿ, ಅಕ್ಷರದಿಂದ ಮಾತ್ರ ಎಲ್ಲವನ್ನೂ ಪಡೆಯಲು, ಸೃಷ್ಟಿಸಲು ಸಾಧ್ಯ. ನಿಟ್ಟಿನಲ್ಲಿ ಯುವಕಗಳು ಸಮಾಜದ ಸ್ವಾಸ್ಥ್ಯವನ್ನು ತಮ್ಮ ಸಾಹಿತ್ಯ, ಕಾವ್ಯದ ಮೂಲಕ ಸರಿಪಡಿಸಲು ಮುಂದಾಗಬೇಕು. ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಹಿರಿಯ ಕವಿಗಳನ್ನು ಸ್ಮರಣೆ ಮಾಡುವ ಮೂಲಕ ಅವರ ಹಾದಿಯಲ್ಲೇ ನಡೆಯಬೇಕು ಎಂದು ಸಲಹೆ ನೀಡಿದರು.

ಜೀವನ ಪುಸ್ತಕ ಕುರಿತುಸಾಹಿತಿ ಡಾ.ಸಿಪಿಲೆ ಸತೀಶ್‌ ಮಾತನಾಡಿದರು. ಜಿಲ್ಲಾ ಕಸಾಪ ಅಧ್ಯಕ್ಷ ಸಿಂ.ಲಿಂ.ನಾಗರಾಜು ಕಾರ್ಯಕ್ರಮ ಉದ್ಘಾಟಿಸಿದರು. ಯುವ ಬರಹಗಾರರ ಬಳಗದ ಸತೀಶ್‌ ಜವರೇಗೌಡ, ಒಕ್ಕಲಿಗರ ಸಂಘದ ನಿರ್ದೇಶಕ ಎಚ್.ಸಿ.ಜಯಮುತ್ತು, ಸಾರ್ವಜನಿಕ ವಿದ್ಯಾಸಂಸ್ಥೆ ಕಾರ್ಯದರ್ಶಿ ಮೆಹರೀಶ್‌, ಸರ್ವೋದಯ ಪ್ರತಿಷ್ಠಾನದ ಅಧ್ಯಕ್ಷ ಎಸ್‌.ಟಿ.ಶ್ರೀನಿವಾಸ್‌ ಹಾಜರಿದ್ದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.