ಮಂಗನ ಕಾಯಿಲೆ ಗಾಬರಿ ಬೇಡ, ಕಾಳಜಿ ಇರಲಿ


Team Udayavani, Jan 26, 2019, 11:17 AM IST

26-january-21.jpg

ಹೊನ್ನಾವರ: ಜಿಲ್ಲೆಯ ಹೊನ್ನಾವರ, ಸಿದ್ದಾಪುರ, ಭಟ್ಕಳ, ಕಾರವಾರ, ಶಿರಸಿ ತಾಲೂಕುಗಳ ಅರಣ್ಯ ಪ್ರದೇಶದಲ್ಲಿ ಮಂಗಗಳು ಸಾಯುತ್ತಿದ್ದು, ಹೊರಗಿನಿಂದ ಕಾಡಿನ ಪ್ರದೇಶಕ್ಕೆ ಹೋಗದೆ, ಕಾಡಿನ ಪ್ರದೇಶದಲ್ಲಿ ಇದ್ದವರು ವಿಶೇಷ ಕಾಳಜಿ ವಹಿಸಿ ಕಾಯಿಲೆ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಕೆಎಫ್‌ಡಿ ಪ್ರಭಾರ ವೈದ್ಯಾಧಿಕಾರಿ ಡಾ| ಸತೀಶ ಶೇಟ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ನಕುಲ್‌ ಇವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಸಭೆ ನಡೆಸಲಾಗಿದೆ. ಮಂಗಗಳು ಸತ್ತಿದ್ದು ಕಂಡುಬಂದಲ್ಲಿ ಅವುಗಳನ್ನು ಸುಟ್ಟುಹಾಕುವ ಮತ್ತು ಆ ಪ್ರದೇಶದಲ್ಲಿ ಔಷಧ ಸಿಂಪಡಿಸುವ ಕೆಲಸವನ್ನು ಅರಣ್ಯ ಇಲಾಖೆಗೆ ವಹಿಸಿಕೊಡಲಾಗಿದೆ. ದನಗಳ ಉಣ್ಣಿ ನಿವಾರಣೆಯ ಕೆಲಸವನ್ನು ಪಶು ವೈದ್ಯಕೀಯ ಇಲಾಖೆಗೆ ವಹಿಸಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಈ ಪ್ರದೇಶದಲ್ಲಿ ಜ್ವರ ಬಂದವರನ್ನು ಗುರುತಿಸಿ ಕೂಡಲೇ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಲಿದ್ದು, ಜ್ವರ ಪೀಡಿತ ಪ್ರದೇಶದಲ್ಲಿ ಆ್ಯಂಬುಲೆನ್ಸ್‌ ವ್ಯವಸ್ಥೆ ಮಾಡಲಾಗಿದೆ. ಕಾಡಿನ ಪ್ರದೇಶದಲ್ಲಿ ಮನೆಮಾಡಿಕೊಂಡವರು ಇಲಾಖೆ ಉಚಿತವಾಗಿ ನೀಡುವ ಎಣ್ಣೆಯನ್ನು ಕಾಲಿಗೆ ಹಚ್ಚಿಕೊಂಡು ಓಡಾಡಬೇಕು. ಹೊರಗೆ ಹೋಗಿ ಬಂದರೆ ಬಿಸಿ ನೀರಿನಿಂದ ಕೈಕಾಲು ತೊಳೆದುಕೊಳ್ಳಬೇಕು. ಈ ಸೂಚನೆಗಳನ್ನು ಆಯಾ ಭಾಗದ ಆರೋಗ್ಯ ಸಿಬ್ಬಂದಿ ನೀಡುತ್ತಾರೆ. ವೈರಾಣುಗಳು ತೀಕ್ಷ್ಣವಾಗಿರುವುದರಿಂದ ಸಾರ್ವಜನಿಕರು ಸಂಪೂರ್ಣ ಸಹಕರಿಸಬೇಕು ಎಂದು ಅವರು ಕೋರಿದ್ದಾರೆ.

ಹೊನ್ನಾವರ 17, ಸಿದ್ದಾಪುರ 24, ಭಟ್ಕಳ 6, ಕಾರವಾರ 1, ಶಿರಸಿ 2 ಮಂಗಗಳು ಸತ್ತಿರುವುದನ್ನು ಗುರುತಿಸಿ ಉಣ್ಣಿಗಳನ್ನು ನಿವಾರಿಸಲಾಗಿದೆ. ಒಂಬತ್ತು ಮಂಗಗಳ ಶವ ಪರೀಕ್ಷೆ ಮಾಡಿಸಲಾಗಿದೆ. ಮೂರು ಕಡೆ ಉಣ್ಣಿ ಸಂಗ್ರಹಿಸಲಾಗಿದೆ. ಜ್ವರ ಬಂದ ಹೊನ್ನಾವರ 9, ಸಿದ್ದಾಪುರ 24 ಜನರ ರಕ್ತ ಪಡೆದು ಪರೀಕ್ಷೆಗೆ ಕಳಿಸಲಾಗಿದೆ. ಇಂತಹ ಕಾಯಿಲೆಯ ರಕ್ತ ಪರೀಕ್ಷೆಯನ್ನು ದೇಶದಲ್ಲಿ ಬೆಂಗಳೂರು ಮತ್ತು ಪುಣೆಗಳಲ್ಲಿ ಮಾತ್ರ ಮಾಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಗಳ ವರದಿಯನ್ನು ಆರೋಗ್ಯ ಇಲಾಖೆ ದೃಢಪಡಿಸುವುದಿಲ್ಲ. ಆದರೆ ಯಾವುದೇ ಆಸ್ಪತ್ರೆಯಲ್ಲಿ ಕಾಯಿಲೆ ಪೀಡಿತ ಜನ ಚಿಕಿತ್ಸೆ ಪಡೆಯುತ್ತಿದ್ದರೆ ಇಲಾಖೆಗೆ ತಿಳಿಸಬೇಕು. ಶಿರಸಿ, ಸಿದ್ದಾಪುರ ಸಹಿತ ಮಂಗಗಳು ಮೃತಪಟ್ಟ ತಾಲೂಕುಗಳಲ್ಲಿ ಸಭೆ ನಡೆಸಿ ಕಾರ್ಯಯೋಜನೆ ರೂಪಿಸಲಾಗಿದೆ. ಕರಪತ್ರ ಹಂಚಿಕೆ ಮತ್ತು ಧ್ವನಿವರ್ಧಕದ ಮುಖಾಂತರ ಜನರನ್ನು ಎಚ್ಚರಿಸಲಾಗುತ್ತಿದೆ.

ಇಲಾಖೆ ಏನೇ ಮಾಡಿದರೂ ಜನ ಸಹಕರಿಸಿದರೆ ಮಾತ್ರ ಕಾಯಿಲೆ ನಿಯಂತ್ರಣ ಸಾಧ್ಯವಿದೆ. ಲಸಿಕೆಗೆ ಬೇಡಿಕೆ ಹೆಚ್ಚುತ್ತಿದ್ದು, ಹೆಚ್ಚುವರಿ ತಂದು ಕೊರತೆಯನ್ನು ತುಂಬಲಾಗುವುದು ಎಂದು ಅವರು ಹೇಳಿದರು.

ಪ್ರತಿವರ್ಷ ಮಳೆಗಾಲ ಮುಗಿದ ಮೇಲೆ ಚಳಿಗಾಲದಲ್ಲಿ ಚುಚ್ಚುಮದ್ದು ನೀಡಲಾಗುತ್ತಿತ್ತು. ಬೇಸಿಗೆ ಆರಂಭವಾದೊಡನೆ ಚಿಗುರುವ ಮಂಗನ ಕಾಯಿಲೆ ಒಂದು ಮಳೆಬಿದ್ದೊಡನೆ ಉಣ್ಣಿಗಳೆಲ್ಲ ನಾಶವಾಗಿ ಮಾಯವಾಗುತ್ತಿತ್ತು. ಈ ವರ್ಷ ಚಳಿಗಾಲದಲ್ಲೇ ಕಾಯಿಲೆ ಆರಂಭವಾಗಿದೆ. ಇನ್ನು ನಾಲ್ಕು ತಿಂಗಳು ಬೇಸಿಗೆ ಇದೆ. ವೈರಾಣುಗಳು ತೀವ್ರ ವಿಷಪೂರಿತವಾಗಿವೆ. ಹೊಸ ಊರುಗಳಲ್ಲಿ ಮಂಗಗಳು ಸಾಯುತ್ತಿವೆ. ಸರ್ಕಾರಿ ಯಂತ್ರದೊಟ್ಟಿಗೆ ಸಾರ್ವಜನಿಕರು ಕಾಳಜಿವಹಿಸಿ ಜೀವಹಾನಿಯಿಂದ ದೂರ ಉಳಿಯಬೇಕಾಗಿದೆ. ಕಳೆದ ಎರಡು ವರ್ಷಗಳಿಂದ ಪೇಟೆಯಲ್ಲೂ ಮಂಗನ ಹಾವಳಿ ತೀವ್ರವಾಗಿದ್ದು, ರೋಗ ಎಲ್ಲಿಯ ತನಕ ಹಬ್ಬುತ್ತದೆಯೋ ಗೊತ್ತಿಲ್ಲ. ಕಾಳಜಿ ಅಗತ್ಯವಾಗಿದೆ.
•ಡಾ| ಸತೀಶ ಶೇಟ್,
ಕೆಎಫ್‌ಡಿ ಪ್ರಭಾರ ವೈದ್ಯಾಧಿಕಾರಿ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.