ಜಿಪಂನಲ್ಲೂ ರೆಸಾರ್ಟ್‌ ರಾಜಕೀಯ!


Team Udayavani, Jan 27, 2019, 9:14 AM IST

27-january-15.jpg

ಚಿತ್ರದುರ್ಗ: ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ರೆಸಾರ್ಟ್‌ ರಾಜಕೀಯ ಈಗ ಜಿಲ್ಲಾ ಪಂಚಾಯತ್‌ಗೂ ಕಾಲಿಟ್ಟಿದೆ. ಈ ಬಾರಿ ಶತಾಯಗತಾಯ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಅವರನ್ನು ಪದಚ್ಯುತಗೊಳಿಸಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಸದಸ್ಯರು, ಗಣರಾಜ್ಯೋತ್ಸವದ ಮುನ್ನಾ ದಿನವಾದ ಶುಕ್ರವಾರ ರಾತ್ರಿ ಗೋವಾ ರೆಸಾರ್ಟ್‌ಗೆ ತೆರಳಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಜಿಲ್ಲೆಯಲ್ಲಿ ತೀವ್ರ ಬರ ಇದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಹಾಗೂ ಅಕ್ರಮ ಮರಳುಗಾರಿಕೆ ಸಮಸ್ಯೆ ಇದೆ. ಇಂತಹ ಸಂದರ್ಭದಲ್ಲಿ ಜಿಪಂ ಸದಸ್ಯರ ಪ್ರವಾಸ ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟಿಸಲ್ಪಟ್ಟಿರುವ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಶೇಷ ಸಭೆ ಕರೆಯುವಂತೆ ಜಿಪಂ ಉಪಾಧ್ಯಕ್ಷರಿಗೆ ಜ. 25 ರಂದು ಮನವಿ ಸಲ್ಲಿಸಲು ತೀರ್ಮಾನಿಸಲಾಗಿತ್ತು. ಆದರೆ ಮನವಿ ಸಲ್ಲಿಕೆಗೆ ಸದಸ್ಯರು ಬಹು ಸಂಖ್ಯೆಯಲ್ಲಿ ಆಗಮಿಸದೇ ಇದ್ದಿದ್ದರಿಂದ ಜ. 28 ರಂದು ಅವಿಶ್ವಾಸ ನಿರ್ಣಯ ಮಂಡನೆಗೆ ಮನವಿ ಸಲ್ಲಿಸಲು ಜಿಪಂ ಸದಸ್ಯರು ಸಿದ್ಧತೆ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಶುಕ್ರವಾರ ರಾತ್ರಿ ದಿಢೀರ್‌ ಹೊರ ರಾಜ್ಯದತ್ತ ಖಾಸಗಿ ಬಸ್‌ನಲ್ಲಿ ಪ್ರವಾಸಕ್ಕೆ ತೆರಳಿರುವುದು ಅಚ್ಚರಿಗೆ ಕಾರಣವಾಗಿದೆ.

ವಿಫಲವಾಯ್ತು ತಂತ್ರಗಾರಿಕೆ: ಉಪಾಧ್ಯಕ್ಷರಿಗೆ ಮನವಿ ಸಲ್ಲಿಸಲು ಬಾರದಿದ್ದ ಸದಸ್ಯರು ರೆಸಾರ್ಟ್‌ ಪ್ರವಾಸಕ್ಕೆ ಹೇಗೆ ಪ್ರತ್ಯಕ್ಷರಾದರು ಎಂಬ ಪ್ರಶ್ನೆಯೂ ಎದುರಾಗಿದೆ. ಪೂರ್ವ ಯೋಜನೆಯಂತೆ ಕೇವಲ ಮೂರ್ನಾಲ್ಕು ಸದಸ್ಯರು ಉಪಾಧ್ಯಕ್ಷರಿಗೆ ಮನವಿ ಸಲ್ಲಿಸಿ ಉಳಿದ ಸದಸ್ಯರ ಜೊತೆ ಪ್ರವಾಸ ತೆರಳಬೇಕು ಎಂದಾಗಿತ್ತು. ಆದರೆ ಜಿಪಂ ಸದಸ್ಯರು. ಉಪಾಧ್ಯಕ್ಷರು ಹಾಗೂ ಸಿಇಒ ಚಲನವಲನದ ಮೇಲೆ ಮಾಧ್ಯಮಗಳು ನಿಗಾ ಇಟ್ಟಿದ್ದರಿಂದ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿರುವ ಸದಸ್ಯರ ತಂತ್ರ ಫಲಿಸಲಿಲ್ಲ. ಒಂದು ವೇಳೆ ಮಾಧ್ಯಮದವರಿಗೆ ಮಾಹಿತಿ ತಿಳಿಯದೇ ಇದ್ದಲ್ಲಿ ಹಿಂದಿನ ದಿನಾಂಕವನ್ನು ನಮೂದು ಮಾಡಿ ಅವಿಶ್ವಾಸ ನಿರ್ಣಯ ಮಂಡಿಸಲು ಮನವಿ ಪತ್ರವನ್ನು ಉಪಾಧ್ಯಕ್ಷರಿಗೆ ಕೊಡುವ ನಿರ್ಧಾರ ಮಾಡಲಾಗಿತ್ತು ಎನ್ನಲಾಗಿದೆ.

ಜಿಪಂ ಉಪಾಧ್ಯಕ್ಷೆ ಕಾಂಗ್ರೆಸ್‌ ಪಕ್ಷದ ಸುಶೀಲಮ್ಮ, ಸದಸ್ಯರಾದ ಕೌಶಲ್ಯ, ಸುಧಾ ರವಿಕುಮಾರ್‌, ಕೃಷ್ಣಮೂರ್ತಿ ಹೊರತು ಪಡಿಸಿ ಉಳಿದ 18 ಮಂದಿ ಜಿಪಂ ಸದಸ್ಯರ ಜೊತೆಗೆ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದ ತಲಾ ಇಬ್ಬರು ಸದಸ್ಯರು ಸೇರಿ ಒಟ್ಟು 22 ಮಂದಿ ಹೊರ ರಾಜ್ಯದತ್ತ ಪ್ರವಾಸ ತೆರಳಿದ್ದಾರೆ. ಕಾಂಗ್ರೆಸ್‌ ಪಕ್ಷದ ಎಲ್ಲ ಸದಸ್ಯರೂ ಕಡ್ಡಾಯವಾಗಿ ಗೋವಾ ಟೂರ್‌ ಹೋಗಲೇಬೇಕು ಎನ್ನುವ ಪಕ್ಷದ ವರಿಷ್ಠರ ಕಟ್ಟಪ್ಪಣೆಯಿಂದಾಗಿ 18 ಸದಸ್ಯರು ತೆರಳಿದ್ದಾರೆ. ಇಲ್ಲವಾದರೆ ಈ ಸಂಖ್ಯೆ 12ನ್ನು ಮೀರುತ್ತಿರಲಿಲ್ಲ ಎಂದು ಹೇಳಲಾಗಿದೆ.

ಮಗನ ಮದುವೆ ತಯಾರಿಯಲ್ಲಿ ಅಧ್ಯಕ್ಷರು ಬ್ಯುಸಿ: ಒಂದೆಡೆ ಜಿಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಪ್ರಯತ್ನ ನಡೆಯುತ್ತರೆ, ಮತ್ತೂಂದೆಡೆ ಅಧ್ಯಕ್ಷೆ ಸೌಭಾಗ್ಯ ಅವರು ತಮ್ಮ ಮಗನ ಮದುವೆ ತಯಾರಿಯಲ್ಲಿ ಮಗ್ನರಾಗಿದ್ದಾರೆ.

ಸೌಭಾಗ್ಯ ಮತ್ತು ಮಾಜಿ ಶಾಸಕ ಎಸ್‌.ಕೆ. ಬಸವರಾಜನ್‌ ಅವರ ಪುತ್ರ ಬಿಜ್ಜಳ ಅವರ ವಿವಾಹ ಭೀಮಸಮುದ್ರದ ರಚಿತ ಅವರೊಂದಿಗೆ ಫೆ. 10 ರಂದು ನಡೆಯಲಿದೆ. ಮಗನ ಮದುವೆಯಲ್ಲಿ ಸೌಭಾಗ್ಯ ಬಸವರಾಜನ್‌ ಮಗ್ನರಾಗಿರುವುದರಿಂದ ಅಧಿಕಾರ ಉಳಿಸಿಕೊಳ್ಳಲು ತಂತ್ರ ಹೆಣೆಯುವುದು ಸೌಭಾಗ್ಯ ಅವರಿಎ ಕಷ್ಟವಾಗಲಿದೆ. ಹಾಗಾಗಿ ಈ ಸಂದರ್ಭ ಬಳಸಿಕೊಂಡು ಅವಿಶ್ವಾಸ ನಿರ್ಣಯ ಮಂಡಿಸಿ ಜಯ ಗಳಿಸಬೇಕು ಎಂಬುದು ಕಾಂಗ್ರೆಸ್‌ ಮುಖಂಡರ ಹಠ. ಆದರೆ ಜಿಪಂ ಅಧ್ಯಕ್ಷ ಗಾದಿ ಉಳಿಸಿಕೊಳ್ಳಲು ಅಗತ್ಯವಿರುವ 13 ಸದಸ್ಯರ ಬೆಂಬಲ ಪಡೆದುಕೊಳ್ಳಲು ಸೌಭಾಗ್ಯ ಪ್ರತಿತಂತ್ರ ಹೆಣೆದಿದ್ದಾರೆ ಎಂಬುದು ಅವರ ಆಪ್ತ ಮೂಲಗಳ ಹೇಳಿಕೆ.

ಒಟ್ಟಿನಲ್ಲಿ ರೆಸಾರ್ಟ್‌ ರಾಜಕೀಯ ಎಲ್ಲಿಯವರೆಗೆ ತಲುಪುತ್ತದೆಯೋ, ಗೋವಾಕ್ಕೆ ತೆರಳಿದ ಸದಸ್ಯರು ಸೋಮವಾರ ಆಗಮಿಸಿ ಅವಿಶ್ವಾಸ ನಿರ್ಣಯ ಮಂಡನೆಗೆ ಮನವಿ ಸಲ್ಲಿಸುತ್ತಾರೆಯೇ ಎಂಬುದು ಕುತೂಹಲ ಮೂಡಿಸಿದೆ.

ಅವಿಶ್ವಾಸ ನಿರ್ಣಯ ಮಂಡಿಸಲು ವಿಶೇಷ ಸಭೆ ಕರೆಯುವಂತೆ ಡಿ. 26 ರಂದು 31 ಸದಸ್ಯರು ಸಹಿ ಮಾಡಿದ ಪತ್ರ ನೀಡಲಾಗಿತ್ತು. ನಿಯಮಾವಳಿ ಪ್ರಕಾರ 15 ದಿನಗಳಲ್ಲಿ ಸಭೆ ಕರೆಯಬೇಕಿತ್ತು. ಸಭೆ ಕರೆಯಲು ವಿಫಲವಾಗಿದ್ದರಿಂದ ಹಿಂದೆಯೇ ಉಪಾಧ್ಯಕ್ಷರಿಗೆ ಸಭೆ ಕರೆಯಲು ಮನವಿ ಸಲ್ಲಿಸಬೇಕಿತ್ತು. ಆದರೆ ಉಪಾಧ್ಯಕ್ಷರಿಗೆ ಜ. 28 ರಂದು ಮನವಿ ಸಲ್ಲಿಸಿದರೂ ಊರ್ಜಿತವಾಗುವುದಿಲ್ಲ.
• ಸೌಭಾಗ್ಯ ಬಸವರಾಜನ್‌,
  ಜಿಪಂ ಅಧ್ಯಕ್ಷರು

ಜಿಪಂ ಸದಸ್ಯರು ಗೋವಾ ಅಥವಾ ಬೇರೆ ಊರುಗಳಿಗೆ ಟೂರ್‌ ಹೋಗಿರುವುದು ಗೊತ್ತಿಲ್ಲ. ಬೇಸಿಗೆ ಪ್ರವಾಸ ಎಂದು ಹೋಗಿರಬಹುದು, ಅದಕ್ಕೂ ನೀವು ಕಥೆ ಕಟ್ಟಿದರೆ ಹೇಗೆ, ಗೋವಾಕ್ಕೆ ಹೋಗುತ್ತೇವೆಂದು ನಿಮಗೆ ಯಾರಾದರೂ ಹೇಳಿದ್ದಾರೆಯೇ, ದೇವಸ್ಥಾನ ಅದು ಇದೂ ನೋಡಿಕೊಂಡು ಬರಲು ಹೋಗಿರಬಹುದು. ಹೋಗಿ ಬರಲಿ ಬಿಡಿ.
ವೆಂಕಟರಮಣಪ್ಪ,
 ಜಿಲ್ಲಾ ಉಸ್ತುವಾರಿ ಸಚಿವರು.

ಸಂಖ್ಯಾ ಬಲ: ಒಟ್ಟು ಸದಸ್ಯರು 37 , ಕಾಂಗ್ರೆಸ್‌ 23,  ಬಿಜೆಪಿ  10, ಜೆಡಿಎಸ್‌ 2,  ಪಕ್ಷೇತರರು 2

ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.