ಸಾಧನೆಯ ಹಾದಿಯಲ್ಲಿಯೇ ನಿಧಾನ ಹೆಜ್ಜೆ


Team Udayavani, Jan 27, 2019, 11:30 AM IST

slow.jpg

ಮೈಸೂರು: ಸ್ವಾರ್ಥ, ದ್ವೇಷ, ಅಸೂಯೆ, ಅಜ್ಞಾನದ ಕತ್ತಲೆಯಿಂದ ಹೊರಬಂದು ಸಂವಿಧಾನದ ಆಶಯದಂತೆ ಆತ್ಮವಿಶ್ವಾಸ ದಿಂದ ದೇಶದ ಅಭಿವೃದ್ಧಿಗೆ ದುಡಿಯೋಣ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ 70ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಸಾಮಾ ಜಿಕ ನ್ಯಾಯಗಳ ಸವಾಲನ್ನು ಎದುರಿಸಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ದೃಢವಾದ ಹೆಜ್ಜೆ ಗಳನ್ನಿಟ್ಟು ಮುನ್ನಡೆಯೋಣ ಎಂದರು.

ಭಾರತದ ಸಂವಿಧಾನ ಕೇವಲ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಹಿತ ವನ್ನು ಮಾತ್ರ ಕಾಪಾಡದೆ ಇಡೀ ಭಾರತದ ಜನತೆಯ ಆಶೋತ್ತರಗಳನ್ನು ಈಡೇರಿಸು ತ್ತದೆ. ಭಾತೃತ್ವದ ಸ್ಥಾಪನೆಗಾಗಿ ರೂಪಗೊಂಡ ಶ್ರೇಷ್ಠ ಸಂವಿಧಾನ ಇದಾಗಿದೆ. ಹೀಗೆ ವಿಶ್ವದಲ್ಲಿಯೇ ಅತ್ಯುತ್ತಮವಾದ ಪ್ರತ್ಯಕ್ಷ ಕಾನ್ಯ ರೂಪಕ್ಕಿಳಿಯುವಂತಹ, ಪರಿವರ್ತನ ಶೀಲವಾದ, ಹಾಗೇಯೇ ಶಾಂತಿ ಮತ್ತು ಯುದ್ಧ ಕಾಲದಲ್ಲೂ ದೇಶವನ್ನು ಏಕಸೂತ್ರ ದಲ್ಲಿ ಬಂಧಿಸುವ ಸಾಮರ್ಥ್ಯವುಳ್ಳ ಸಂವಿಧಾನ ನಮ್ಮಲ್ಲಿದ್ದರೂ ಸಹ ನಾವು ಇನ್ನೂ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಮುಟ್ಟಬೇಕಾದ ಗುರಿ ತಲುಪದೇ, ಇನ್ನು ಸಾಧನೆಯ ಹಾದಿಯಲ್ಲಿಯೇ ನಿಧಾನ ಹೆಜ್ಜೆಗಳನ್ನೀಡುತ್ತಿರುವುದು ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.

1950ರ ಜನವರಿ 26ರಂದು ಸಂಸತ್ತಿನಲ್ಲಿ ಭಾಷಣ ಮಾಡಿದ ಸಂವಿಧಾನ ಕರಡು ರಚನಾ ಸಮಿತಿ ಅಧ್ಯಕ್ಷರಾದ ಡಾ.ಬಿ.ಆರ್‌.ಅಂಬೇಡ್ಕರ್‌ ರವರು ಭಾರತದಲ್ಲಿ ನಾವಿಂದು ಒಂದು ಗೊಂದಲಮಯವಾದ ಹೊಸ ಯುಗಕ್ಕೆ ಕಾಲಿಡುತ್ತಿದ್ದೇವೆ. ಆರ್ಥಿಕ, ಸಾಮಾಜಿಕ ಅಸಮಾನತೆಗಳು ಹಾಗೆಯೇ ಉಳಿದಿವೆ. ಮುಂಬರುವ ಸ್ವತಂತ್ರ ಸರ್ಕಾರ ಸಂವಿಧಾನವನ್ನು ಯಥಾವತ್ತಾಗಿ ಪಾಲಿಸಿದರೆ ಇನ್ನು ಕೇವಲ 20 ವರ್ಷಗಳಲ್ಲಿ ದೇಶ ಪ್ರಬುದ್ಧ ಭಾರತ ಆಗುತ್ತದೆ. ಅಷ್ಟೆ ಅಲ್ಲ ಆರ್ಥಿಕ ಮತ್ತು ಸಾಮಾಜಿಕ ಸಮಾನತೆಗಳು ಸ್ಥಾಪನೆಯಾಗುತ್ತದೆ ಎಂದಿದ್ದಾರೆ. ಆದ್ದರಿಂದ ಇಂದು ಪ್ರತಿಯೊಬ್ಬ ಭಾರತೀಯನು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದರು. ಮೇಯರ್‌ ಪುಷ್ಪಲತಾ ಜಗನ್ನಾಥ್‌, ಉಪ ಮೇಯರ್‌ ಶಫೀ ಅಹಮದ್‌ ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.