ಪುಣೆ ಬಂಟರ ಸಂಘ ವಾರ್ಷಿಕೋತ್ಸವಕ್ಕೆ  ಚಾಲನೆ


Team Udayavani, Jan 28, 2019, 12:40 AM IST

2701mum03.jpg

ಪುಣೆ: ಪುಣೆ ಬಂಟರ ಸಂಘದ ವಾರ್ಷಿಕೋತ್ಸವ ಸಮಾರಂಭವು ಜ. 26 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಕೇಂದ್ರದ ಲತಾ ಸುಧೀರ್‌ ಶೆಟ್ಟಿ ವೇದಿಕೆಯಲ್ಲಿ ವಿವಿಧ ಸಾಂಸ್ಕತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ  ನಡೆಯಿತು.

ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್‌ಬೆಟ್ಟು  ಸಂತೋಷ್‌  ವಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ಗೌರವಾಧ್ಯಕ್ಷ  ಜಗನ್ನಾಥ  ಬಿ. ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಂಡಾರಿ ಫೌಂಡೇಶನ್‌ ನ ಸ್ಥಾಪಕ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ, ಎಂಆರ್‌ಜಿ ಗ್ರೂಪ್‌ ಬೆಂಗಳೂರು ಇದರ ಕಾರ್ಯಾಧ್ಯಕ್ಷರಾದ ಪ್ರಕಾಶ್‌  ಶೆಟ್ಟಿ ಮತ್ತು  ಆಶಾ ಪ್ರಕಾಶ್‌ ಶೆಟ್ಟಿ  ದಂಪತಿ ಉಪಸ್ಥಿತರಿದ್ದರು.

ಈ ಸಂದರ್ಭ ಪ್ರತೀ ವರ್ಷ ಸಮಾಜದ ಶ್ರೇಷ್ಠ ಸಾಧಕನನ್ನು ಗುರುತಿಸಿ ಕೊಡಮಾಡುವ ದಿ| ಗುಂಡೂರಾಜ್‌ ಎಂ.  ಶೆಟ್ಟಿ ಅತ್ಯುತ್ತಮ ಸಮಾಜಸೇವಕ ಪ್ರಶಸ್ತಿ -2018-19ನ್ನು ಎಂಆರ್‌ ಜಿ ಗ್ರೂಪ್‌ ಬೆಂಗಳೂರು ಇದರ ಕಾರ್ಯಾಧ್ಯಕ್ಷರಾದ ಪ್ರಕಾಶ್‌ ಶೆಟ್ಟಿಯವರಿಗೆ ಪ್ರದಾನಿಸಲಾಯಿತು. ವಿನಯ್‌ ಗುಂಡೂರಾಜ್‌ ಶೆಟ್ಟಿ  ಉಪಸ್ಥಿತರಿದ್ದರು.  ಅತಿಥಿಗಳು ದೀಪ ಪ್ರಜ್ವಲಿಸಿ ತೆಂಗಿನ ಹಿಂಗಾರವನ್ನು ಅರಳಿಸಿ  ಚಾಲನೆಯಿತ್ತರು.

ವೇದಿಕೆಯಲ್ಲಿ ಸಂಘದ ಉಪಾಧ್ಯ ಕ್ಷರಾದ ಸತೀಶ್‌ ಆರ್‌. ಶೆಟ್ಟಿ ಮತ್ತು ಮೋಹನ್‌ ಶೆಟ್ಟಿ, ಪ್ರಧಾನ ಕಾರ್ಯ ದರ್ಶಿ ಕೆ. ಅಜಿತ್‌ ಹೆಗ್ಡೆ, ಗೌರವ ಕೋಶಾಧಿಕಾರಿ ಎರ್ಮಾಳ್‌ ಚಂದ್ರ ಹಾಸ ಶೆಟ್ಟಿ, ಸಾಂಸ್ಕೃತಿಕ ಸಮಿತಿ  ಕಾರ್ಯಾಧ್ಯಕ್ಷ  ಪ್ರವೀಣ್‌ ಶೆಟ್ಟಿ ಪುತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್‌. ಶೆಟ್ಟಿ, ಯುವ ವಿಭಾಗದ  ಕಾರ್ಯಾಧ್ಯಕ್ಷ  ಯಶ್‌ರಾಜ್‌ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ  ಗಣೇಶ್‌ ಜೆ. ಪೂಂಜಾ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಎಸ್‌. ಶೆಟ್ಟಿ  ಮತ್ತು ದಕ್ಷಿಣ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಅಂಬಿಕಾ ವಿ. ಶೆಟ್ಟಿ ಉಪಸ್ಥಿತರಿದ್ದರು.  ಗಣರಾಜ್ಯೋತ್ಸವದ ಅಂಗವಾಗಿ ನಿವೃತ್ತ ಭಾರತೀಯ ಸೇನೆಯ ಯೋಧ ಶ್ಯಾಮರಾಜ್‌ ಇ. ವಿ. ಇವರನ್ನು ಸಂಘದ  ಯುವ ವಿಭಾಗದ ವತಿಯಿಂದ ವಿಶೇಷವಾಗಿ ಸಮ್ಮಾನಿಸಲಾಯಿತು.

 ದಿವ್ಯಾ ಎಸ್‌. ಶೆಟ್ಟಿ, ಪ್ರಮೀಳಾ ಎಸ್‌. ಶೆಟ್ಟಿ ಮತ್ತು ಅಂಬಿಕಾ ವಿ. ಶೆಟ್ಟಿ ಪ್ರಾರ್ಥಿಸಿದರು. ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು  ಸ್ವಾಗತಿಸಿದರು. ಅತಿಥಿಗಳನ್ನು ಎಲೆ-ಅಡಿಕೆ  ನೀಡಿ ಸ್ವಾಗತಿಸಲಾಯಿತು. ಕಾಂತಿ ಸೀತಾರಾಮ ಶೆಟ್ಟಿ ಹಾಗೂ ಪತ್ರಕರ್ತ ಕಿರಣ್‌ ಬಿ. ರೈ ಕರ್ನೂರು ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ಶೆಟ್ಟಿ ನಿಟ್ಟೆ ವಂದಿಸಿದರು. ಅಕ್ಷತಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ರೋಹನ್‌ ಆರ್‌. ಶೆಟ್ಟಿ ಸಮ್ಮಾನಪತ್ರ ವಾಚಿಸಿದರು. ಗೀತಾ ಆರ್‌. ಶೆಟ್ಟಿ  ಕ್ರೀಡಾ ಸ್ಪರ್ಧೆಗಳಲ್ಲಿ ಬಹುಮಾನ ವಿಜೇತರ ಹೆಸರುಗಳನ್ನು ವಾಚಿಸಿದರು.

ಅತಿಥಿ-ಗಣ್ಯರನ್ನು ಮಹಾರಾಷ್ಟ್ರದ ಪೇಟ ತೊಡಿಸಿ, ಶಾಲು, ಸ್ಮರಣಿಕೆ ಫಲಪುಷ್ಪವನ್ನಿತ್ತು  ಸಮ್ಮಾನಿಸ ಲಾಯಿತು. ಸಾಂಸ್ಕೃತಿಕ ಕಾರ್ಯ ಕ್ರಮದಂಗವಾಗಿ ಸದಸ್ಯರುಗಳ ಮಕ್ಕಳಿಂದ ನೃತ್ಯ ವೈವಿಧ್ಯಗಳು, ರಾಧಾಕೃಷ್ಣ ನೃತ್ಯ ಅಕಾಡೆಮಿ ಮುಂಬಯಿ ಕಲಾವಿದರಿಂದ ಸಮುದ್ರ ಮಂಥನ ನೃತ್ಯರೂಪಕ ಹಾಗೂ ಅಭಿನಯ ಮಂಟಪ ಮುಂಬಯಿ ಕಲಾವಿದರಿಂದ ಪುರುಸೊತ್ತಿಜ್ಜಿ ತುಳು ನಾಟಕ ಪ್ರದರ್ಶನಗೊಂಡಿತು.
ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿ ಗಳು, ಮಹಿಳಾ ವಿಭಾಗ, ಯುವ ವಿಭಾಗ, ಉತ್ತರ ಹಾಗೂ ದಕ್ಷಿಣ ಪ್ರಾದೇಶಿಕ ಸಮಿತಿ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಂಘದ ಮಾಜಿ ಅಧ್ಯಕ್ಷರಾದ ಕುಶಲ್‌ ಹೆಗ್ಡೆ, ಸದಾನಂದ ಕೆ. ಶೆಟ್ಟಿ, ಜಯಂತ್‌ ಶೆಟ್ಟಿ, ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು  ಉಪಸ್ಥಿತರಿದ್ದರು.  

ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.