ರಾಯಣ್ಣ ಶೌರ್ಯ ಮಕ್ಕಳಿಗೆ ತಿಳಿಸಿ
Team Udayavani, Jan 28, 2019, 9:40 AM IST
ಬೈಲಹೊಂಗಲ: ಭಾರತದ ಗೌರವವನ್ನು ಎತ್ತಿ ಹಿಡಿದು ಸ್ವಾತಂತ್ರ್ಯದ ಕಿಡಿ ಹೊತ್ತಿಸಿದ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಶೌರ್ಯ, ಸಾಹಸ, ದೇಶಪ್ರೇಮ ಬಗ್ಗೆ ಮಕ್ಕಳಿಗೆ ತಿಳಿಸಿಕೊಡುವ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕ, ಪಾಲಕರ ಮೇಲಿದೆ ಎಂದು ಸಂಸದ ಸುರೇಶ ಅಂಗಡಿ ಹೇಳಿದರು.
ಪಟ್ಟಣದ ಮುರಗೋಡ ರಸ್ತೆಯಲ್ಲಿ ಕಿತ್ತೂರು ಚನ್ನಮ್ಮ ಅಭಿವೃದ್ಧಿ ಪ್ರಾಧಿಕಾರ, ಪುರಸಭೆ ವತಿಯಿಂದ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ನೂತನ ಪ್ರತಿಮೆ, ಪ್ಲಾಟ್ ಫಾರ್ಮ್, ಐಕ್ಯ ಸ್ಥಳದಲ್ಲಿರುವ ದ್ವಿಮುಖ ರಸ್ತೆಯ ವಿದ್ಯುತ್ ಎಲ್ಇಡಿ ಬಲ್ಬ್ ಉದ್ಘಾಟಿಸಿ ಮಾತನಾಡಿದ ಅವರು, ಇನ್ನೂ ಮುಂದೆ ಬೆಳಗಾವಿಯಿಂದ ದೇಶ, ವಿದೇಶಗಳಿಗೆ ವಿಮಾನ ಹಾರಾಟ ಆರಂಭಗೊಳ್ಳಲಿದೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮನ ಹೆಸರಿಡಲು ರಾಜ್ಯ ಸರ್ಕಾರದಿಂದ ಅನುಮೋದನೆ ಕಳುಹಿಸಲಾಗಿದೆ. ಕೇಂದ್ರ ಸರ್ಕಾರದಲ್ಲಿ ಅದರ ಜವಾಬ್ದಾರಿ ವಹಿಸಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮನ ಹೆಸರಿಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.
ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಚನ್ನಮ್ಮನ ಐಕ್ಯಸ್ಥಳ ಅಭಿವೃದ್ಧಿಗೆ ಸುಮಾರು 3 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿಪಡಿಸಲಾಗುವುದಲ್ಲದೇ ಪ್ರತಿಮೆಗೆ ಲೋಟಸ್ ಮಾದರಿಯಲ್ಲಿ ಸುಮಾರು 75 ಲಕ್ಷ ರೂ.ವೆಚ್ಚದಲ್ಲಿ ಗ್ಲಾಸ್ ಹೌಸ್ ನಿರ್ಮಿಸಲಾಗುವುದು ಎಂದರು.
ಎಸಿ ಶಿವಾನಂದ ಭಜಂತ್ರಿ, ಚಿತ್ರನಟ ಶಿವರಂಜನ ಬೋಳನ್ನವರ, ಉದ್ಯಮಿ ವಿಜಯ ಮೆಟಗುಡ್ಡ, ಕಲಾವಿದ ಸಿ.ಕೆ. ಮೆಕ್ಕೆದ, ಕಸಾಪ ಮಾಜಿ ತಾಲೂಕಾಧ್ಯಕ್ಷ ಈಶ್ವರ ಹೋಟಿ, ಎಪಿಎಂಸಿ ಸದಸ್ಯ ಎಫ್.ಎಸ್.ಸಿದ್ದನಗೌಡರ ಮಾತನಾಡಿದರು.
ಭಗಳಂಬಾದೇವಿ ಆರಾಧಕ ಈರಯ್ಯಸ್ವಾಮಿ ಹಿರೇಮಠ, ಮಹಾಂತಯ್ಯಶಾಸ್ತ್ರಿ ಆರಾದ್ರಿಮಠ ಸಾನ್ನಿಧ್ಯ ವಹಿಸಿದ್ದರು. ತಹಶೀಲ್ದಾರ್ ಡಾ.ಡಿ.ಎಚ್.ಹೂಗಾರ, ಮುಖ್ಯಾಧಿಕಾರಿ ಶಿವಪ್ಪ ಅಂಬಿಗೇರ, ಅಭಿಯಂತರಾದ ಎಸ್.ಬಿ.ಪಾಟೀಲ, ಎಸ್.ಕೆ.ಮುಗಸಜ್ಜಿ, ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಉಣ್ಣಿ, ತಾಪಂ ಸದಸ್ಯೆ ಶೈಲಾ ಸಿದ್ರಾಮನಿ, ತಾಪಂ ಇಒ ಸಮೀರ್ ಮುಲ್ಲಾ, ಸಿಪಿಐ ಮಂಜುನಾಥ ಕುಸುಗಲ್ಲ, ಪಿಎಸ್ಐ ಎಂ.ಎಸ್.ಹೂಗಾರ, ಗುರುಪುತ್ರಪ್ಪ ಹೊಸಮನಿ, ಪಾರಿಶಪ್ಪ ಭಾವಿ, ಸ್ವಾತಂತ್ರ್ಯ ಹೋರಾಟಗಾರ ಮುರುಳೀಧರ ಮಾಳ್ಳೋದೆ, ಕುಮಾರ ದೇಶನೂರ, ಗುರುಪಾದ ಕಳ್ಳಿ, ಸುರೇಶ ಮಾಟೋಳಿ, ಬಸವರಾಜ ನೀಲಗಾರ, ಬಸವರಾಜ ಜನ್ಮಟ್ಟಿ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ