ದಾರ್ಶನಿಕರ ಮಾರ್ಗದರ್ಶನ ಅನುಕರಣೀಯ


Team Udayavani, Jan 28, 2019, 9:44 AM IST

chikk-1.jpg

ಸಾಗರ: ಕಾಲಕಾಲಕ್ಕೆ ಸಮಾಜ ಬದಲಾವಣೆಗೆ ಒಂದಷ್ಟು ದಾರ್ಶನಿಕರು ಅವತಾರ ತಳೆಯುತ್ತಾರೆ. ಅಂತಹವರು ಆ ಸಂದರ್ಭದಲ್ಲಿ ಹಾಕಿಕೊಟ್ಟ ಮಾರ್ಗದರ್ಶನ ಇಂದಿಗೂ ಅನುಕರಣೀಯವಾಗಿದೆ ಎಂದು ಶಾಸಕ ಎಚ್. ಹಾಲಪ್ಪ ಹೇಳಿದರು.

ನಗರದ ಬ್ರಾಸಂ ಸಭಾ ಭವನದಲ್ಲಿ ಭಾನುವಾರ ಸ್ನೇಹಸಾಗರ ಸ್ವ-ಸಹಾಯ ಮಹಿಳಾ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ರಾಜ್ಯಮಟ್ಟದ ಮಹಿಳಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಸುಮಾರು 900 ವರ್ಷಗಳ ಹಿಂದೆ ಸಮಾಜ ಸಂಕೀರ್ಣ ಸ್ಥಿತಿಯಲ್ಲಿತ್ತು. ಬೇರೆ ಬೇರೆ ಆಚರಣೆಗಳು ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಜೊತೆಗೆ ಸಾಮರಸ್ಯಕ್ಕೆ ಅಡ್ಡಿಯುಂಟು ಮಾಡಿತ್ತು. ಇಂತಹ ಹೊತ್ತಿನಲ್ಲಿ 11ನೇ ಶತಮಾನದಲ್ಲಿ ದಾಸ ಸಾಹಿತ್ಯ ಒಂದು ಹಂತದಲ್ಲಿ ಸಮಾಜ ಪರಿವರ್ತನೆಗೆ ಕೀರ್ತನೆ ಮೂಲಕ ಮುನ್ನುಡಿ ಬರೆದರೆ 12ನೇ ಶತಮಾನದಲ್ಲಿ ವಚನ ಕ್ರಾಂತಿಯ ಮೂಲಕ ಸಮಾಜವನ್ನು ಸನ್ಮಾರ್ಗದತ್ತ ಸಾಗಲು ಪ್ರೇರಣೆ ನೀಡಿತು ಎಂದರು.

ಕನಕದಾಸರು, ಪುರಂದರ ದಾಸರಂತಹವರು ತಮ್ಮ ಕೀರ್ತನೆ ಮೂಲಕ ಸಮಾಜದಲ್ಲಿರುವ ಅನಿಷ್ಟಗಳನ್ನು ಎತ್ತಿ ತೋರಿಸಿ ಅದರ ಪರಿವರ್ತನೆ ಮಾತ್ರದಿಂದಲೇ ಸುಂದರ ಬದುಕು ಕಟ್ಟಿಕೊಳ್ಳಬಹುದು ಎನ್ನುವುದನ್ನು ಸಾರಿದರೆ 12ನೇ ಶತಮಾನದಲ್ಲಿ ಕ್ರಾಂತಿಯೋಗಿ ಬಸವಣ್ಣ ಅವರು ಅನುಭವ ಮಂಟಪವನ್ನು ಪ್ರಾರಂಭಿಸುವ ಮೂಲಕ 800ಕ್ಕೂ ಹೆಚ್ಚು ಶರಣರು ವಚನ ಸಾಹಿತ್ಯದ ಮೂಲಕ ಸಮಾಜ ಪರಿವರ್ತನೆಗೆ ಮುನ್ನುಡಿ ಬರೆದಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಅರ್ಥವಾಗದ ಭಾಷೆಯಲ್ಲಿ ಸಾಹಿತ್ಯ ರಚಿಸಿ, ಜನರಿಗೆ ಅರ್ಥವಾಗದ ರೀತಿಯಲ್ಲಿ ಬಿಂಬಿಸುವ ಕೆಲಸ ನಡೆಯುತ್ತಿದೆ. ಆದರೆ ಅಂದು ಜನರಿಗೆ ತೀರ ಹತ್ತಿರವಾದ ಕನ್ನಡ ಭಾಷೆಯಲ್ಲಿ ಸಾಹಿತ್ಯ ರಚಿಸಿ ಜನರ ಮನಪರಿವರ್ತನೆಗೆ ಪ್ರಯತ್ನ ನಡೆಸಲಾಗಿತ್ತು. ಇಂದು ಸಮಾನ ಪರಿವರ್ತನೆಗೆ ಮಾರ್ಗದರ್ಶನ ಮಾಡುವವರ ಕೊರತೆ ಇದೆ. ಮುಂದಿನ ಪ್ರಜೆಗಳು ಯಾರನ್ನು ಆದರ್ಶವಾಗಿ ಇರಿಸಿಕೊಳ್ಳಬೇಕು ಎನ್ನುವ ಸಂದಿಗ್ದತೆಯಲ್ಲಿದ್ದಾರೆ. ಇಂತಹ ಸಮ್ಮೇಳನಗಳಲ್ಲಿ ದಾರ್ಶನಿಕರ ತತ್ವಾದರ್ಶಗಳನ್ನು ತಿಳಿಸಿಕೊಡುವ ಮೂಲಕ ಯುವಜನರಿಗೆ ಸನ್ಮಾರ್ಗವನ್ನು ಹಾಕಿಕೊಡುವ ಅಗತ್ಯವಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿದ್ದ ಜಿಪಂ ಸದಸ್ಯೆ ಅನಿತಾಕುಮಾರಿ ಮಾತನಾಡಿ, ಹೆಣ್ಣನ್ನು ನೋಡುವ ಸಮಾಜದ ದೃಷ್ಟಿಕೋನ ಇಂದಿಗೂ ಬದಲಾಗಿಲ್ಲ. ಮಹಿಳೆಯನ್ನು ಎರಡನೇ ದರ್ಜೆಯಲ್ಲಿಟ್ಟು ನೋಡುವ ಸಂಸ್ಕೃತಿ ದೂರವಾಗುವ ತನಕ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಮಹಿಳೆಯರ ಸಾಧನೆಯನ್ನು ಗುರುತಿಸುವ ಕೆಲಸ ಇನ್ನಷ್ಟು ಪರಿಣಾಮಕಾರಿಯಾಗಿ ನಡೆಯಬೇಕು ಎಂದು ಹೇಳಿದರು.

‘ದಾಸ ಸಾಹಿತ್ಯದ ವಿಶೇಷತೆ’ ವಿಷಯ ಕುರಿತು ಮೈಸೂರಿನ ನಿವೃತ್ತ ಪ್ರಾಧ್ಯಾಪಕಿ ಡಾ|ನಾಗರತ್ನ ಟಿ.ಎಸ್‌., ‘ವಚನಕಾರರಲ್ಲಿ ಸಾಮಾಜಿಕ ಪ್ರಜ್ಞೆ ವಿಷಯ ಕುರಿತು ಬೆಂಗಳೂರು ಕೆ.ಆರ್‌. ಪುರಂನ ಸರ್ಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಸಂಪದ ಕೇರಿಮನಿ ಉಪನ್ಯಾಸ ನೀಡಿದರು. ಸಮ್ಮೇಳನದ ಅಧ್ಯಕ್ಷೆ ಡಾ| ಲೀಲಾದೇವಿ ಆರ್‌. ಪ್ರಸಾದ್‌, ಸ್ನೇಹಸಾಗರ ಮಹಿಳಾ ಮಂಡಳಿ ಅಧ್ಯಕ್ಷೆ ಚೂಡಾಮಣಿ ರಾಮಚಂದ್ರ ಇನ್ನಿತರರು ಇದ್ದರು. ಮಂಡಳಿಯ ಸದಸ್ಯರು ಪ್ರಾರ್ಥಿಸಿದರು. ನಂದಾ ಗೊಜನೂರು ಸ್ವಾಗತಿಸಿದರು. ಪುಷ್ಪಾ ಮಲ್ಲಿಕಾರ್ಜುನ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನಂದಾ ಶಶಿಭೂಷಣ್‌ ಸಮ್ಮೇಳನಾಧ್ಯಕ್ಷರ ಪರಿಚಯ ಮಾಡಿದರು. ಶಾಂತಲಾ ದಾನಪ್ಪ ವಂದಿಸಿದರು. ಸವಿತಾ ನಿರೂಪಿಸಿದರು.

ಟಾಪ್ ನ್ಯೂಸ್

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬಿಸಿಲ ಬೇಗೆಗೆ ತಂಪೆರೆದ ವರುಣ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.