ಕಲೆಗೆ ಗೌರವ ಕೊಡುವುದನ್ನು ಕಲಿಯಿರಿ


Team Udayavani, Jan 28, 2019, 9:52 AM IST

chikk-2.jpg

ಚಿಕ್ಕಮಗಳೂರು: ಕಲೆಯನ್ನು ಗೌರವಿಸುವ ಸಮಾಜ ಆರೋಗ್ಯ ಪೂರ್ಣವಾಗಿರುತ್ತದೆ ಎಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಉಪಾಸನಾ ಮೋಹನ್‌ ಅಭಿಪ್ರಾಯಪಟ್ಟರು.

ಮಲ್ಲಿಗೆ ಸುಗಮ ಸಂಗೀತ ಟ್ರಸ್ಟ್‌ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ನಗರದ ಶ್ರೀ ಶಂಕರಮಠ ಪ್ರವಚನಮಂದಿರದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ವರ್ಷ ಮಲ್ಲಿಗೆ ಸಮಾರಂಭದಲ್ಲಿ ನೀಡಲಾದ ಮಲ್ಲಿಗೆ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

ಕಲೆಗೆ ಗೌರವ ಕೊಡುವುದನ್ನು ಎಲ್ಲರೂ ಕಲಿಯಬೇಕು. ಕಲಾವಿದ ತನ್ನ ಜೀವನವನ್ನೆ ತನ್ನಿಷ್ಟದ ಕಲೆಗಾಗಿ ಸಮರ್ಪಿಸಿರುತ್ತಾನೆ. ಸಮಾಜ ಆ ಕಲೆಯನ್ನು ಆಸ್ವಾದಿಸಿ ಸಂತೋಷಪಟ್ಟಿರುತ್ತದೆ. ತಮಗಿಂದು ಸಂದಿರುವ ಪ್ರಶಸ್ತಿಯನ್ನು ಸುಗಮ ಸಂಗೀತಕ್ಕೆ ಸಮರ್ಪಿಸುವುದಾಗಿ ನುಡಿದರು.

ಮೈಸೂರು ಮಲ್ಲಿಗೆ ಖ್ಯಾತಿಯ ಕೆ.ಎಸ್‌.ನರಸಿಂಹಸ್ವಾಮಿ ಅವರ ಹುಟ್ಟಿದ ಈ ದಿನವೇ ನೀಡಿರುವ ಮಲ್ಲಿಗೆ ಪುರಸ್ಕಾರ ಸುಗಮ ಸಂಗೀತಕ್ಕೆ ಗರಿ ಮೂಡಿಸಿದೆ. ತಮ್ಮ ಸಂಗೀತ ಗುರು ಜಿ.ವಿ.ಅತ್ರಿ ನೀಡಿದ ಭಿಕ್ಷೆ. ಅವರಿಂದ ಕಲಿತ ತಾವೂ ಸೇರಿದಂತೆ ಏಳೆಂಟು ತಂಡಗಳ ಸಂಗೀತದಿಂದ ಬೆಂಗಳೂರು ಮಹಾನಗರ ಹಸಿರಾಗಿದೆ. ಅತ್ರಿ ಅವರು ಎಲ್ಲೆಡೆ ಹಾಡುತ್ತಿದ್ದ ಗಂಗಾವತರಣ ಗೀತೆ ಹಾಡುವ ಮೂಲಕ ಗುರುವಿಗೆ ಗೌರವ ಸಲ್ಲಿಸಿದರು.

ಶಿಕ್ಷಣತಜ್ಞ ಎಂ.ಎನ್‌.ಷಡಕ್ಷರಿ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ನಾಗರಿಕತೆಯ ಉತ್ತುಂಗಕ್ಕೆ ಲಲಿತ ಕಲೆಗಳ ಕೊಡುಗೆ ಮಹತ್ವದ್ದು. ಬೇಸರವನ್ನು ಹೋಗಲಾಡಿಸಿ ಸಂತೋಷವನ್ನು ಹೊಮ್ಮಿಸುವ ಶಕ್ತಿ ಸಂಗೀತಕ್ಕಿದೆ. ಮೋಹನ್‌ರಿಂದ ಮಲ್ಲಿಗೆ ಪುರಸ್ಕಾರಕ್ಕೆ ಗೌರವ ಬಂದಿದೆ ಎಂದರು.

ಕಲ್ಕಟ್ಟೆ ಪುಸ್ತಕಮನೆಯ ಅಧ್ಯಕ್ಷ ಎಚ್.ಎಂ. ನಾಗರಾಜರಾವ್‌ ಅಭಿನಂದಿಸಿ ಮಾತನಾಡಿ, ಒಳ್ಳೆಯ ಮನಸ್ಸಿನ ಕಲಾವಿದರಲ್ಲಿ ಉಪಾಸನಾ ಮೋಹನ್‌ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಆಡಿಯೋ ಮತ್ತು ವಿಡಿಯೋದಲ್ಲಿ ಡಿಪ್ಲೊಮೋ ಪಡೆದು ಶಾಸ್ತ್ರಿಯ ಸಂಗೀತ, ಹಿಂದೂಸ್ತಾನಿ ಮತ್ತು ಸುಗಮ ಸಂಗೀತವನ್ನು ಅಭ್ಯಾಸ ಮಾಡಿದ್ದು ಸಂಗೀತ ಶಾಲೆಯ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದವರು. ರಾಜ್ಯಾದ್ಯಂತ 70ಕ್ಕೂ ಹೆಚ್ಚು ಸಂಗೀತ ಶಿಬಿರಗಳನ್ನು ನಡೆಸಿದ್ದು, 40 ಧ್ವನಿ ಸುರುಳಿಗಳನ್ನು ಹೊರತಂದಿದ್ದಾರೆ. ಹಸಿರು ರಿಬ್ಬನ್‌ ಸೇರಿದಂತೆ ಯಶಸ್ವಿ ಚಲನಚಿತ್ರ ಸಂಗೀತ ನಿರ್ದೇಶಕರೂ ಹೌದು. ವರ್ಷದ ಗಾಯಕ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿರುವ ಮೋಹನ್‌ ಬಹುಮುಖ ಪ್ರತಿಭೆಯ ಗಾಯಕ ಎಂದು ಬಣ್ಣಿಸಿದರು.

ಕಾರ್ಯಕ್ರಮವನ್ನು ಪಲ್ಲವಿ ಸಿ.ಟಿ.ರವಿ ಉದ್ಘಾಟಿಸಿದರು. ಜಿ.ಪಂ. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾ ಅನಿಲ್‌, ಯುರೇಕಾ ಅಕಾಡೆಮಿ ಪ್ರಾಂಶುಪಾಲ ದೀಪಕ ದೊಡ್ಡಯ್ಯ, ಪಾವನಿ ವೀಣಾ ಶಾಲೆಯ ಪ್ರಧಾನಗುರು ಮಾಲಿನಿ ರಮೇಶ್‌, ಬೀರೂರು ಮಲ್ಲಿಗೆಬಳಗದ ಅಧ್ಯಕ್ಷೆ ಸ್ವರ್ಣ ಮಾತನಾಡಿದರು.

ಮಲ್ಲಿಗೆ ಸುಗಮ ಸಂಗೀತ ಟ್ರಸ್ಟ್‌ ಅಧ್ಯಕ್ಷ ಮಲ್ಲಿಗೆ ಸುಧೀರ್‌ ಸ್ವಾಗತಿಸಿ, ಗೌರಿ ಮತ್ತು ನಾಗರಾಜರಾವ್‌ ನಿರೂಪಿಸಿ, ರೇಖಾ ನಾಗರಾಜ ರಾವ್‌ ವಂದಿಸಿದರು. ಗಾನಮಲ್ಲಿಗೆ-13 ಅಂಗವಾಗಿ ಉಪಾಸನಾ ಮೋಹನ್‌, ಮಲ್ಲಿಗೆ ಸುಧೀರ್‌, ನಾಗರಾಜರಾವ್‌ ಕಲ್ಕಟ್ಟೆ, ಅಭಿಷೇಕ್‌ ಮಲ್ಲಿಗೆ, ವಂದಿತಾ ಯಾಜಿ ಗೀತನಗಾಯನ ಗಮನ ಸೆಳೆಯಿತು.

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ

2-chikkamagaluru

Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

1-wewewqe

Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

Good rain continues Chikkamagaluru

Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.