ಬದುಕಿಗೆ ಜ್ಞಾನದಷ್ಟೇ ಮಾನವೀಯತೆ ಮುಖ್ಯ


Team Udayavani, Jan 28, 2019, 12:01 PM IST

yad-3.jpg

ಸುರಪುರ: ಶಿಕ್ಷಣ ಸಂಸ್ಥೆಗಳು ಕೇವಲ ಅಕ್ಷರ ಜ್ಞಾನಕ್ಕೆ ಸೀಮಿತವಾಗಬಾರದು. ಪಠ್ಯಶಿಕ್ಷಣದೊಂದಿಗೆ ಉತ್ತಮ ನಾಗರಕರನ್ನಾಗಿ ಮಾಡುವ ಮೂಲಕ ಅವರಲ್ಲಿ ವ್ಯಕ್ತಿತ್ವ ರೂಪಿಸುವ ಶ್ರದ್ಧಾ ಕೇಂದ್ರಗಳಾಗಬೇಕು ಎಂದು ಗೋಗಿ ಸಜ್ಜಾದ್‌ ಎ ನೀಸೀನ್‌ ಸೈಯ್ಯದ್‌ ಶಾ ಮಹ್ಮದ್‌ ಉಲ್‌ ಹುಸೇನಿ ಹೇಳಿದರು.

ರಂಗಂಪೇಟೆ ಸುದೀಪ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಶಸ್ತಿ ಪದವಿ ಪಡೆದ ನಾವೆಲ್ಲ ವಿದ್ಯಾವಂತರು. ಆದರೆ ಬುದ್ದಿವಂತರಲ್ಲ. ಅಕ್ಷರಸ್ಥರಾಗಿದ್ದೇವೆ ವಿನಃ ವಿಚಾರವಂತ್ತರಾಗುತ್ತಿಲ್ಲ. ಬದುಕಿಗೆ ಜ್ಞಾನ ಎಷ್ಟು ಮುಖ್ಯವೋ ಮಾನವೀಯತೆಯೂ ಅಷ್ಟೆ ಮುಖ್ಯವಾಗಿದೆ. ಹೀಗಾಗಿ ಶಿಕ್ಷಕರು ಶಿಕ್ಷಣದ ಜತೆಗೆ ಮಕ್ಕಳಲ್ಲಿ ನೈತಿಕ ಮೌಲ್ಯ ಕಲಿಸಿಕೊಡಬೇಕು. ಇದರಿಂದ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಸಲಹೆ ನೀಡಿದರು.

ಮಕ್ಕಳಿಗೆ ಸಂಸ್ಕಾರ ಮುಖ್ಯ. ಸಂಸ್ಕಾರಯುತ ಮಕ್ಕಳು ಮಾತ್ರ ಉತ್ತಮ ನಾಗರಿಕರಾಗಬಲ್ಲರು. ಇದಕ್ಕೆ ಸಾಕಷ್ಟು ಉದಾಹರಣೆ ನಮ್ಮ ಕಣ್ಮುಂದೆ ಇವೆ. ಸಂಸ್ಕಾರ ಇಲ್ಲದ ಕಾರಣ ಎಷ್ಟೋ ಮಕ್ಕಳು ಹಾದಿ ತಪ್ಪುತ್ತಿದ್ದಾರೆ. ಕೊಲೆಗಡುಕರು, ಕಳ್ಳರು, ವಿದ್ವಂಸಕರು, ಅಪರಾಧಿಗಳಾಗುತ್ತಿದ್ದಾರೆ. ಕಾರಣ ಶಿಕ್ಷಣ ಸಂಸ್ಥೆಗಳು ಶಿಕ್ಷಣದ ಜತೆಗೆ ಸಂಸ್ಕಾರ ನೀಡಿ ಮೌಲ್ಯಗಳನ್ನು ಕಲಿಸಿಕೊಡುವುದು ಅಗತ್ಯವಾಗಿದೆ ಎಂದು ಹೇಳಿದರು. ಹೋರಟಗಾರ ವೆಂಕೋಬ ದೊರೆ ಮಾತನಾಡಿ, ಪ್ರಾಥಮಿಕ ಶಿಕ್ಷಣ ಬದುಕಿನ ಅಮೂಲ್ಯ ಘಟ್ಟ ಪ್ರಾಥಮಿಕ ಶಿಕ್ಷಣದೊಂದಿಗೆ ಅನೇಕ ಕಾರ್ಯಕ್ರಮ ಏರ್ಪಡಿಸಿ ಮಕ್ಕಳಲ್ಲಿ ನೈತಿಕ ಮೌಲ್ಯ ಬೆಳೆಸುತ್ತಿರುವ ಸಂಸ್ಥೆ ಕಾರ್ಯ ಶ್ಲಾಘನೀಯವಾಗಿದೆ ಎಂದು ಸ್ಮರಿಸಿದರು.

ಇದೇ ವೇಳೆ ರಾಜ್ಯ, ಜಿಲ್ಲಾಹಾಗೂ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಶಾಲೆ 8ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾಂಗ್ರೆಸ್‌ ಪಕ್ಷದ ಯುವ ಮುಖಂಡ ರಾಜಾ ಸಂತೋಷ ನಾಯಕ ಉದ್ಘಾಟಿಸಿದರು. ಸಂಸ್ಥೆ ಅಧ್ಯಕ್ಷ ಸಾಯಿಬಣ್ಣ ಪುರ್ಲೆ ಅಧ್ಯಕ್ಷತೆ ವಹಿಸಿದ್ದರು. ವೆಂಕಟೇಶ ಭಕ್ರಿ, ಶಮಾ ಅಂಜುಮ್‌, ಜ್ಯೋತಿ, ವಿಜಯಲಕ್ಷ್ಮಿ, ಪದ್ಮಾಕ್ಷಿ ಶಹಾಪುರಕರ್‌,ಮಹ್ಮದ್‌ ಸರಫರಾಜ, ಅರಶಿಯಾ ಇದ್ದರು. ಗೋಣೇಸ ನಂಬಾ ಸ್ವಾಗತಿಸಿದರು. ಎಂ.ಕೆ. ಬಾಬೂ ನಿರೂಪಿಸಿದರು. ಜೋಹರಾ ರುಬಿನ ವಂದಿಸಿದರು.

ಟಾಪ್ ನ್ಯೂಸ್

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

The Safest Online Gaming Sites: Shielding Your Gaming Experience

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.