ಧರ್ಮ ಇಲ್ಲದ ಭಾರತದ ಕಲ್ಪನೆ ಅಸಾಧ್ಯ


Team Udayavani, Jan 29, 2019, 12:35 AM IST

190128kpn79.jpg

ಬೆಂಗಳೂರು: ‘ಯೋಗಿ ಆದಿತ್ಯನಾಥರು ಸನ್ಯಾಸಿ ಜೀವನ ದಿಂದ ಏಕಾಏಕಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಜನರ ಸೇವೆ ಮಾಡುವ ಮಹತ್ವಾಕಾಂಕ್ಷೆಯೊಂದಿಗೆ ರಾಜಕೀಯ ಪ್ರವೇಶಿಸಿ, ಐದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿ ಆನಂತರ ಮುಖ್ಯಮಂತ್ರಿ ಸ್ಥಾನಕ್ಕೇರಿದವರು’ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಡಾ. ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ತಿಳಿಸಿದರು.

ಇನ್‌ಸ್ಪೈರ್‌ ಪುಸ್ತಕ ಪ್ರಕಾಶನ ವತಿಯಿಂದ ಭಾರತೀಯ ವಿದ್ಯಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಡಾ.ಎಚ್.ಎಂ. ಚಂದ್ರಶೇಖರ್‌ ಅವರ ಕನ್ನಡ ಅನುವಾದಿತ ಕೃತಿ ‘ಮೋದಿ ಮೆಚ್ಚಿದ ಯೋಗಿ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಧರ್ಮ ಆಮ್ಲಜನಕವಿದ್ದ ಹಾಗೆ, ಆಮ್ಲಜನಕ ಇಲ್ಲವಾದರೆ ಮನುಷ್ಯ ಹೇಗೆ ಸಾಯುತ್ತಾನೋ ಅದೇ ರೀತಿ ಧರ್ಮ ಇಲ್ಲದಿದ್ದರೆ ಭಾರತವನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇಂತಹ ಧರ್ಮ ಪರಂಪರೆಯಲ್ಲಿ ಬಂದವರು ಯೋಗಿ ಆದಿತ್ಯನಾಥರು. ಅಲ್ಲದೇ, 1,800 ವರ್ಷಗಳ ಇತಿಹಾಸವಿರುವ ಗೋರಖ್‌ಪುರದ ನಾಥ ಪರಂಪರೆಯ ಹಿನ್ನಲೆ ಹೊಂದಿದ್ದಾರೆ. ಇಂತಹ ಮಹಾನ್‌ ಸನ್ಯಾಸಿ ಕುರಿತು ಪುಸ್ತಕ ಬಂದಿದ್ದು, ಎಲ್ಲರೂ ಓದಿ ತಿಳಿಯಬೇಕು ಎಂದರು.

ಯದುಗಿರಿಯ ಯತಿರಾಜ ಮಠಾಧ್ಯಕ್ಷರಾದ ಯದು ಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್‌ ಮಾತನಾಡಿ, ಸಮಾಜಮುಖೀ ಹಾದಿಯಲ್ಲಿಯೇ ಸನ್ಯಾಸಿ ಜೀವನ ಸಾರ್ಥಕತೆ ಅಡಗಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾಗಿದ್ದು, ನಮ್ಮೆಲ್ಲ ಸಂತರಿಗೆ ಸಂಭ್ರಮ ತಂದಿದೆ. ಅಲ್ಲಿ ಅಧ್ಯಾತ್ಮ ವಾತಾವರ ಣವಿದ್ದು, ರಾಜಕೀಯ ಶಕ್ತಿಯ ಮೂಲಕ ದೀನ ದಲಿತರಿಗೆ ಬಡವರಿಗೆ ದಾರಿ ದೀಪವಾಗಬಹುದು ಎಂದರು.

ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಮಾತನಾಡಿ, ಒಂದು ಕಾಲದಲ್ಲಿ ಜಂಗಲ್‌ ರಾಜ್ಯವಾಗಿದ್ದ ಉತ್ತರ ಪ್ರದೇಶವನ್ನು ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಯಾಗಿ ಸಾಕಷ್ಟು ಬದಲಾವಣೆ ತರುವ ಮೂಲಕ ನಿರ್ಭೀತ ರಾಜ್ಯವಾಗಿಸಿದ್ದಾರೆ. ಯೋಗಿ ಆದಿತ್ಯನಾಥ ಅವರು ನಮ್ಮ ಆದಿಚುಂಚನಗಿರಿ ಪರಂಪರೆಯಿಂದ ಬಂದವರು. ಗೋರಖ್‌ಪುರ ಅವರಿಗೆ ಎರಡನೇ ಮಠ. ಅವರು ಉತ್ತರ ಪ್ರದೇಶದಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಮಾದರಿ ರಾಜ್ಯವನ್ನಾಗಿಸುವ ಕನಸು ಹೊಂದಿದ್ದಾರೆ ಎಂದರು.

ಸುಚಿತ್ರ ಫಿಲಂ ಸೊಸೈಟಿ ಅಧ್ಯಕ್ಷ ಕೆ.ವಿ.ಆರ್‌. ಟ್ಯಾಗೂರ್‌ ಅವರು ಪುಸ್ತಕ ಪರಿಚಯಿಸಿದರು. ಕೃತಿ ಅನುವಾದಕ ಹಾಗೂ ಸಿಲಿಕಾನ್‌ ಸಿಟಿ ಕಾಲೇಜು ಅಧ್ಯಕ್ಷ ಡಾ. ಎಚ್.ಎಂ. ಚಂದ್ರಶೇಖರ್‌, ಹಿರಿಯರಂಗ ಕರ್ಮಿ ಟಿ.ಎಸ್‌.ನಾಗಾಭರಣ ಹಾಜರಿದ್ದರು.

ಯೋಗಿ ಊಟ ನೆನೆದ ಶ್ರೀಗಳು
ಯೋಗಿ ಆದಿತ್ಯನಾಥರು ಮುಖ್ಯಮಂತ್ರಿ ಸ್ಥಾನಕ್ಕೇರಿದರೂ ಸನ್ಯಾಸ, ಅದರ ರೀತಿ ನೀತಿ ಕೈಬಿಟ್ಟಿಲ್ಲ. ಊಟ, ತಿಂಡಿ, ಆಚಾರ-ವಿಚಾರ, ವಸ್ತ್ರ ಎಲ್ಲದರಲ್ಲೂ ಇಂದಿಗೂ ಸನ್ಯಾಸಿ ಜೀವನದ ಸರಳತೆಯನ್ನೆ ಮೈಗೂಡಿಸಿಕೊಂಡಿದ್ದಾರೆ. ನಿತ್ಯ ಗಂಜಿ, ಮೊಳಕೆ ಕಾಳು, ಹಣ್ಣುಗಳನ್ನು ಸೇವಿಸುತ್ತಾರೆ. ಅವರೊಟ್ಟಿಗೆ ಮಾತುಕತೆಗೆ ಹೋದವರಿಗೂ ಇದೇ ಆಹಾರವನ್ನು ಕೊಡುತ್ತಾರೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥರು ನೆನಪಿಸಿಕೊಂಡರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.