ಮದಕರಿ ನಾಯಕನಿಗೆ ಅಡ್ಡಿಯಾಗುತ್ತಾ ಗಡ್ಡ?


Team Udayavani, Jan 29, 2019, 5:43 AM IST

madakari.jpg

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ದರ್ಶನ್‌ ಅಭಿನಯಿಸಲಿರುವ “ಗಂಡುಗಲಿ ಮದಕರಿ ನಾಯಕ’ ಚಿತ್ರಕ್ಕೆ ಸಂಕ್ರಾಂತಿ ದಿನದಂದು ಪೂಜೆ ನಡೆಯಬೇಕಿತ್ತು. ಆದರೆ ಆಗಲಿಲ್ಲ. ಮತ್ತೆ ಯಾವಾಗ ಎಂಬ ಪ್ರಶ್ನೆಗೆ ಫೆಬ್ರವರಿ 16 ಎಂಬ ಉತ್ತರ ಬರುತ್ತಿದೆ. ಅಂದು ದರ್ಶನ್‌ ಅವರ ಹುಟ್ಟು ಹಬ್ಬ. ಹಾಗಾಗಿ, ಅಂದು “ಗಂಡುಗಲಿ ಮದಕರಿ ನಾಯಕ’ ಚಿತ್ರಕ್ಕೆ ಪೂಜೆ ಮಾಡುವ ಮೂಲಕ ಚಾಲನೆ ನೀಡಬೇಕು ಎಂಬ ತಯಾರಿ ಜೋರಾಗಿದೆ.

ಈಗಾಗಲೇ ಚಿತ್ರದ ಸ್ಕ್ರಿಪ್ಟ್ ಕೆಲಸ ಸೇರಿದಂತೆ ಇನ್ನಿತರೆ ಕೆಲಸಗಳು ಭರದಿಂದಲೇ ಸಾಗುತ್ತಿವೆ. ಒಂದು ಮೂಲದ ಪ್ರಕಾರ ಚಿತ್ರದ ಅವಧಿ ಮೂರು ಗಂಟೆಗೂ ಹೆಚ್ಚು ಕಾಲ ಬರುತ್ತಿದೆ ಎನ್ನಲಾಗಿದ್ದು, ಅದನ್ನು ಇನ್ನಷ್ಟು ಕಡಿಮೆಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎನ್ನಲಾಗಿದೆ. ಚಿತ್ರದ ಅವಧಿಯನ್ನು ಸುಮಾರು 2.30 ಗಂಟೆಗೆ ಇಳಿಸಬೇಕೆಂಬ ನಿಟ್ಟಿನಲ್ಲಿ ಯಾವ ದೃಶ್ಯಗಳಿರಬೇಕು, ಯಾವೆಲ್ಲಾ ಸಂಭಾಷಣೆ ಬೇಕು, ಬೇಡ ಎಂಬ ಬಗ್ಗೆಯೂ ಬಿರುಸಿನ ಚರ್ಚೆ ನಡೆಯುತ್ತಿದೆ ಎಂಬ ಮಾಹಿತಿ ಹೊರ ಬಿದ್ದಿದೆ.

ಇಂತಹ ಐತಿಹಾಸಿಕ ಚಿತ್ರಗಳಿಗೆ ಅವಧಿ ಮುಖ್ಯವಾಗಲ್ಲ ಎಂಬ ಮಾತು ಸಹ ಚಿತ್ರತಂಡದಲ್ಲಿ ಕೇಳಿಬಂದಿದ್ದರೂ, ಪ್ರೇಕ್ಷಕರ ಹಿತದೃಷ್ಟಿಯನ್ನೂ ಗಮನದಲ್ಲಿಟ್ಟುಕೊಂಡು ಅವಧಿಯನ್ನು ಕಡಿಮೆಗೊಳಿಸುವ ಸಲುವಾಗಿ, ಸ್ಕ್ರಿಪ್ಟ್ನಲ್ಲಿ ಮತ್ತೂಂದು ಸಲ ಕಣ್ಣಾಡಿಸುವ ಕೆಲಸ ನಡೆಯುತ್ತಿದೆ ಎನ್ನಲಾಗಿದೆ. ಈಗಾಗಲೇ “ಗಂಡುಗಲಿ ಮದಕರಿ ನಾಯಕ’ ಚಿತ್ರದ ಸ್ಕ್ರಿಪ್ಟ್ಗೆ ಏಳೆಂಟು ವರ್ಷನ್‌ ಕೆಲಸ ನಡೆದಿದ್ದು, ಇದೀಗ ಫೈನಲ್‌ ವರ್ಷನ್‌ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ.

ಮೂರು ಗಂಟೆಗೂ ಹೆಚ್ಚು ಕಾಲ ಬರುವ ಸ್ಕ್ರಿಪ್ಟ್ ಅನ್ನು, ಕಡಿಮೆಗೊಳಿಸುವ ಸವಾಲು ಇದೀಗ ಬರಹಗಾರರ ಮೇಲಿದೆ. ಐತಿಹಾಸಿಕ ಚಿತ್ರದಲ್ಲಿ ಪ್ರತಿಯೊಂದು ದೃಶ್ಯವೂ ಮುಖ್ಯ. ಅದರಲ್ಲಿ ಯಾವುದು ಬೇಕು, ಯಾವುದು ಬೇಡ ಎಂಬುದನ್ನು ನಿರ್ಧರಿಸುವುದು ಸಹ ಅಷ್ಟೇ ಕಷ್ಟ. ಆದರೂ, ಬರಹಗಾರರು ಆ ಜವಾಬ್ದಾರಿಯನ್ನು ಸವಾಲಾಗಿ ಸ್ವೀಕರಿಸಿ, ಕೊನೆಯ ಹಂತದ ಸ್ಕ್ರಿಪ್ಟ್ನಲ್ಲಿ ಬಿಜಿಯಾಗಿದ್ದಾರೆ ಎನ್ನಲಾಗುತ್ತಿದೆ.

ಇನ್ನು, ಚಿತ್ರ ಶುರುವಿಗೆ ಬೇರೆ ಯಾವ ಕಾರಣಗಳೂ ಇಲ್ಲ. ಆದರೂ ಕೊಂಚ ತಡವಾಗಲು ಎರಡು ಕಾರಣಗಳಿವೆ ಎನ್ನಲಾಗಿದೆ. ಒಂದು ಹೆಚ್ಚಾಗುತ್ತಿರುವ ಅವಧಿಯನ್ನು ಸ್ಕ್ರಿಪ್ಟ್ನಲ್ಲಿ ಕಡಿಮೆಗೊಳಿಸುವುದು ಇನ್ನೊಂದು ಇದು ಐತಿಹಾಸಿಕ ಚಿತ್ರ ಆಗಿರುವುದರಿಂದ ಮದಕರಿ ನಾಯಕನಿಗೆ ಇಲ್ಲಿ ಮೀಸೆಯೇ ಹೈಲೈಟ್‌. ದರ್ಶನ್‌ ಈಗ “ರಾಬರ್ಟ್‌’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದಾರೆ. ಆ ಚಿತ್ರದ ಒಂದು ಗೆಟಪ್‌ನಲ್ಲಿ ದರ್ಶನ್‌ ಗಡ್ಡ ಬಿಟ್ಟಿರುವ ಹಿನ್ನೆಲೆಯಲ್ಲಿ “ಗಂಡುಗಲಿ ಮದಕರಿ ನಾಯಕ’ ಚಿತ್ರ ಅಂದುಕೊಂಡಂತೆ ಶುರುವಾಗುತ್ತಿಲ್ಲ ಎಂಬ ಕಾರಣವೂ ಇದೆ.

ಹಾಗೆ ನೋಡಿದರೆ, ದರ್ಶನ್‌ “ರಾಬರ್ಟ್‌’ಗಾಗಿ ಗಡ್ಡ ಬಿಟ್ಟಿದ್ದು, ಅದನ್ನು ತೆಗೆಯುವವರೆಗೂ ಚಿತ್ರ ಶುರುವಾದಂತೆ ಕಾಣಲ್ಲ. ಚಿತ್ರದುರ್ಗ ಕೋಟೆಯನ್ನು ಆಳಿದ 13 ಜನ ಪಾಳೇಗಾರರ ಪೈಕಿ ಒಬ್ಬ ಮದಕರಿ ನಾಯಕ ಮಾತ್ರ ಗಡ್ಡ ಬಿಟ್ಟಿದ್ದರು ಎಂಬ ಮಾಹಿತಿ ಇದೆ. ಅವರನ್ನು ಗಡ್ಡದ ಮದಕರಿನಾಯಕ ಎಂದೇ ಕರೆಯಲಾಗುತ್ತಿತ್ತು. ಆದರೆ, “ಗಂಡುಗಲಿ ಮದಕರಿ ನಾಯಕ’ನಿಗೆ ಮೀಸೆಯೇ ಮುಖ್ಯ.

ದರ್ಶನ್‌ ಗಡ್ಡ ತೆಗೆದ ನಂತರವಷ್ಟೇ ಚಿತ್ರೀಕರಣ. ಆದರೂ, ಚಿತ್ರತಂಡ ಹೈದರಾಲಿ ದೃಶ್ಯಗಳನ್ನು ಚಿತ್ರೀಕರಿಸುವ ಯೋಜನೆಯನ್ನೂ ಹಾಕಿಕೊಂಡಿದೆಯಾದರೂ, ಆ ದೃಶ್ಯದಲ್ಲೂ “ಗಂಡುಗಲಿ ಮದಕರಿ ನಾಯಕ’ ಇರುತ್ತಾರೆ ಎನ್ನಲಾಗಿದೆ. ಆದರೆ, ಆ ದೃಶ್ಯಕ್ಕೆ ದರ್ಶನ್‌ ಅವರ “ಗಡ್ಡ’ ಅಡ್ಡಿಯಾಗುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ಈಗಾಗಲೇ ನಿರ್ದೇಶಕ ರಾಜೇಂದ್ರಸಿಂಗ್‌ ಬಾಬು ಅವರು ಹೈದರಾಲಿ ದೃಶ್ಯಗಳನ್ನು ಚಿತ್ರೀಕರಿಸುವ ಸಲುವಾಗಿ, ಹೈದರಾಬಾದ್‌ನ ರಾಮೋಜಿ ಫಿಲ್ಮ್ಸಿಟಿಗೆ ಭೇಟಿ ಕೊಟ್ಟು ಅರಮನೆ ಸೆಟ್‌ ನೋಡಿ ಬಂದಿದ್ದಾರೆ.

ಅದರೊಂದಿಗೆ ಮುಂಬೈಗೂ ಹೋಗಿ ಈ ಹಿಂದೆ ಹಿಂದಿಯ “ಬಾಜಿರಾವ್‌ ಮಸ್ತಾನಿ’ ಚಿತ್ರೀಕರಣಗೊಂಡಿದ್ದ ಸೆಟ್‌ಗೂ ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಅದೇನೆ ಇರಲಿ, “ಗಂಡುಗಲಿ ಮದಕರಿ ನಾಯಕ’ ಮಹತ್ವಾಕಾಂಕ್ಷೆಯ ಚಿತ್ರ. ಅದರಲ್ಲೂ ಕನ್ನಡ ಚಿತ್ರರಂಗದಲ್ಲಿ ಮತ್ತೂಂದು ಬಹು ನಿರೀಕ್ಷೆಯ ಚಿತ್ರವೂ ಹೌದು. ಇಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಈ ಚಿತ್ರ ದೊಡ್ಡ ಚಾಲೆಂಜ್‌. ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರು ಈಗಾಗಲೇ ಚಿತ್ರಕ್ಕೆ ಎಲ್ಲಾ ತಯಾರಿ ಮಾಡಿಕೊಂಡಿದ್ದು, ಚಿತ್ರೀಕರಣಕ್ಕೆ ಹೋಗಲು ಅಣಿಯಾಗಿದ್ದಾರೆ. ಸ್ಕ್ರಿಪ್ಟ್ ಕೆಲಸ ಅಂತಿಮ ಹಂತದಲ್ಲಿದೆ. 

ಕಳೆದ ವರ್ಷ ದರ್ಶನ್‌ ಅಭಿನಯದ ಯಾವ ಚಿತ್ರವೂ ಬಿಡುಗಡೆಯಾಗಿಲ್ಲ. ಈ ವರ್ಷ ಸಾಲು ಸಾಲು ಚಿತ್ರಗಳಿವೆ. “ಯಜಮಾನ’ ರಿಲೀಸ್‌ಗೆ ರೆಡಿಯಾಗಿದೆ. “ಕುರುಕ್ಷೇತ್ರ’ ಕೂಡ ಬರಲಿದೆ. ಅದರ ಬೆನ್ನ ಹಿಂದೆ “ಒಡೆಯ’ ಬಂದರೂ ಅಚ್ಚರಿ ಇಲ್ಲ. “ರಾಬರ್ಟ್‌’ ಕೂಡ ಅಷ್ಟೊತ್ತಿಗೆ ರೆಡಿಯಾಗುವುದು ಪಕ್ಕಾ. ಎಲ್ಲವೂ ಸರಿಯಾಗಿ ನಡೆದರೆ, “ಗಂಡುಗಲಿ ಮದಕರಿ ನಾಯಕ’ ಕೂಡ ಈ ವರ್ಷದ ಅಂತ್ಯದಲ್ಲಿ ಬಂದರೂ ಅಚ್ಚರಿ ಇಲ್ಲ. ಒಟ್ಟಾರೆ, ದರ್ಶನ್‌ ಅಭಿಮಾನಿಗಳು ಈ ವರ್ಷ “ಡಿಬಾಸ್‌ ಫಿಲ್ಮ್ ಫೆಸ್ಟಿವಲ್‌’ ಆಚರಿಸಿದರೆ ಅಚ್ಚರಿ ಇಲ್ಲ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

15

Vidhyarthi Vidyarthiniyare Trailer: ಟ್ರೇಲರ್‌ನಲ್ಲಿ ಟೀನೇಜ್‌ ಸ್ಟೋರಿ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.