ಆಡಳಿತ ನಡೆಸಲಿ ಇಲ್ಲವೇ ರಾಜೀನಾಮೆ ನೀಡಲಿ


Team Udayavani, Jan 29, 2019, 6:44 AM IST

adalita.jpg

ಬೆಂಗಳೂರು: ಮೈತ್ರಿ ಸರ್ಕಾರ ಜನರಿಗೆ ಬೇಡವಾಗಿದ್ದರೆ, ಕಾಂಗ್ರೆಸ್‌ಗೆ ಹೊರೆ ಎನಿಸಿದೆ. ಜೆಡಿಎಸ್‌ಗೂ ತೃತೀಯ ದರ್ಜೆ ನಾಗರಿಕರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂಬ ಭಾವನೆಯಿದೆ. ಹೀಗಿರುವಾಗ ಯಾವ ಕಾರಣಕ್ಕೆ ಸಮ್ಮಿಶ್ರ ಸರ್ಕಾರ ಇದೆ ಎಂಬುದನ್ನು ಆಡಳಿತ ನಡೆಸುವವರು ಹೇಳಬೇಕು. ಕೂಡಲೇ ನಾಟಕ ನಿಲ್ಲಿಸಿ ಒಳ್ಳೆಯ ಆಡಳಿತ ನೀಡಲಿ, ಇಲ್ಲವೇ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಗ್ರಹಿಸಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನಕ್ಕೊಂದು ಹೊಸ ನಾಟಕವಾಗಿ ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಮಾಡಬಾರದು. ಸಮ್ಮಿಶ್ರ ಸರ್ಕಾರದಲ್ಲಿ ಯಾರು ಯಾರನ್ನು ಬ್ಲಾಕ್‌ಮೇಲ್‌ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ಕಾಂಗ್ರೆಸ್‌ ತಮಗೆ ಲಾಭವಾಗಬೇಕಾದಾಗ ಜೆಡಿಎಸ್‌ಅನ್ನು ಬ್ಲಾಕ್‌ವೆುಲ್‌ ಮಾಡುತ್ತದೆ. ಜೆಡಿಎಸ್‌ನವರು ಕಾಂಗ್ರೆಸ್‌ನ ಬ್ಲಾಕ್‌ಮೇಲ್‌ ಮಾಡುತ್ತಾರೆ. ಇವರ ಬ್ಲಾಕ್‌ಮೇಲ್‌ ರಾಜಕಾರಣದಲ್ಲಿ ಜನ ಕಂಗೆಟ್ಟಿದ್ದಾರೆ ಎಂದು ದೂರಿದರು.

ಇನ್ನೊಂದೆಡೆ ಸಚಿವರಾದ ಪುಟ್ಟರಂಗಶೆಟ್ಟಿ, ಎಂ.ಟಿ.ಬಿ.ನಾಗರಾಜ್‌, ಶಾಸಕ ಎಸ್‌.ಟಿ.ಸೋಮಶೇಖರ್‌ ಅವರು ಸಿದ್ದರಾಮಯ್ಯ ಅವರೇ ತಮ್ಮ ಪಾಲಿನ ಮುಖ್ಯಮಂತ್ರಿ ಎನ್ನುತ್ತಾರೆ. ಕಾಂಗ್ರೆಸ್‌ನಿಂದ ಡಾ.ಜಿ.ಪರಮೇಶ್ವರ್‌ ಅವರು ಉಪಮುಖ್ಯಮಮತ್ರಿಯಾಗಿದ್ದರೂ ಅವರು ಶಾಸಕಾಂಗ ಪಕ್ಷದ ನಾಯಕರಲ್ಲ. ಇದು ಉಪಮುಖ್ಯಮಂತ್ರಿಯ ಸ್ಥಿತಿ. ಜೆಡಿಎಸ್‌ ಶಾಸಕ ಎ.ಟಿ.ರಾಮಸ್ವಾಮಿ ಲಕ್ಷ್ಮಣರೇಖೆ ಮೀರಬಾರದು ಎನ್ನುತ್ತಾರೆ. ಮತ್ತೂಬ್ಬ ಜೆಡಿಎಸ್‌ ಹಿರಿಯ ಶಾಸಕ ಬಸವರಾಜ ಹೊರಟ್ಟಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಎಲ್ಲ ಗೊಂದಲಮಯವಾಗಿದೆ ಎಂದರು.

ಸಚಿವ ಸಿ.ಎಸ್‌.ಪುಟ್ಟರಾಜು ಅವರು ಬಿಜೆಪಿ- ಜೆಡಿಎಸ್‌ನ 20- 20 ತಿಂಗಳ ಸಮ್ಮಿಶ್ರ ಸರ್ಕಾರವನ್ನು ನೆನಪಿಸಿಕೊಂಡಿದ್ದಾರೆ. ಆಗ ಬಿಜೆಪಿ ಗೌರವಯುತವಾಗಿ ನಡೆಸಿಕೊಂಡಿತ್ತು ಎಂಬುದು ಕಾಂಗ್ರೆಸ್‌ ಸಹವಾಸ ಮಾಡಿದ ನಂತರ ಜೆಡಿಎಸ್‌ಗೆ ಗೊತ್ತಾಗಿದೆ ಎಂದು ಕುಟುಕಿದರು.
ಮುಖ್ಯಮಂತ್ರಿಗಳು ತಾನು ಸಾಂದರ್ಭಿಕ ಶಿಶು, ಜನರ ಮುಲಾಜಿನಲ್ಲಿ ಇಲ್ಲ- ಕಾಂಗ್ರೆಸ್‌ ಮುಲಾಜಿನಲ್ಲಿದ್ದೇನೆ.

ಕ್ಲರ್ಕ್‌ ರೀತಿ ಕೆಲಸ ಮಾಡುತ್ತಿದ್ದೇನೆ. ತಂತಿ ಮೇಲಿನ ನಡಿಗೆಯಂತೆ ಆಡಳಿತ ನಡೆಸುತ್ತಿದ್ದೇನೆ. ವಿಷಕಂಠನಾಗಿದ್ದೇನೆ, ಮೂರನೇ ದಜೇì ನಾಗರಿಕತೆ ನಡೆಸಿಕೊಳ್ಳಬೇಡಿ ಎಂದು ಹೇಳಿದ್ದಾರೆ. ಇದೀಗ ರಾಜೀನಾಮೆ ನೀಡಲು ಸಿದ್ದ ಎಂದು ಹೇಳಿದ್ದಾರೆ. ಎಷ್ಟೇ ಅಪಮಾನವಾದರೂ ಅವರು ರಾಜಿನಾಮೆ ನೀಡುವುದಿಲ್ಲ. ಎಲ್ಲ ಅಪಮಾನವನ್ನುಅಧಿಕಾರಕ್ಕಾಗಿ ಸಹಿಸಿಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದರು.

ಹೆಣ್ಣು ಮಕ್ಕಳಿಗೆ ಮರ್ಯಾದೆ: ಮರ್ಯಾದೆ ಪುರುಷೋತ್ತಮ ಸಿದ್ದರಾಮಯ್ಯ ಅವರು ಯಾವ ರೀತಿ ಹೆಣ್ಣು ಮಕ್ಕಳಿಗೆ ಮರ್ಯಾದೆ ನೀಡಿದ್ದಾರೆ ಎಂಬುದನ್ನು ಒಮ್ಮೆ ನೋಡಿಕೊಳ್ಳಲಿ. ತಾವು ಕೊಟ್ಟ ಮರ್ಯಾದೆ ತಮ್ಮ ಸುದೀರ್ಘ‌ ರಾಜಕೀಯಕ್ಕೆ ಗೌರವ ತಂದುಕೊಟ್ಟಿದೆ ಎನಿಸಿದರೆ ಮುಂದುವರಿಸಲಿ. ತಾವು ನಡೆದುಕೊಂಡ ರೀತಿ ಸಾರ್ವಜನಿಕ ಸಭ್ಯತೆಗೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ತೋರಿದ ಅಗೌರವ ಎನಿಸಿದರೆ ಕೂಡಲೇ ತಮ್ಮ ಪುತ್ರನಿಗೆ ರಾಜೀನಾಮೆ ನೀಡಲು ಹೇಳಲಿ. ಇಲ್ಲವೇ ತಮ್ಮ ಹಾಗೂ ತಮ್ಮ ಪುತ್ರನನ್ನು ಸಮರ್ಥಿಸಿಕೊಳ್ಳಲಿ ಎಂದು ಸವಾಲು ಹಾಕಿದರು.

ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯದವರು ರೈತ ಮಹಿಳೆಯನ್ನು ನಾಲ್ಕು ವರ್ಷಗಳಿಂದ ಎಲ್ಲಿ ಮಲಗಿದ್ದೆ ಎಂದು ಕೇಳುತ್ತಾರೆ. ಸಚಿವ ಸಾ.ರಾ. ಮಹೇಶ್‌ ಅವರ ಮಹಿಳಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಅವಮಾನಿಸುತ್ತಾರೆ ಎಂದು ಕಿಡಿ ಕಾರಿದರು. ರಾಜ್ಯ ಬಿಜೆಪಿ ಮಹಿಳಾ ಅಧ್ಯಕ್ಷೆ ಭಾರತಿ ಶೆಟ್ಟಿ, ಸಿದ್ದರಾಮಯ್ಯನವರ ರಾಜಕೀಯ ಜೀವನದ ವರ್ತನೆಯನ್ನು ನೋಡಿದರೆ ಅವರಿಗೆ ಗುರಿ ಇರಬಹುದು ಆದರೆ ಗುರು ಇಲ್ಲ ಎಂಬುದು ಸಾಬೀತಾಗುತ್ತದೆ. ಮಹಿಳಾ ಆಯೋಗ ಏನು ಮಾಡುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಎಂದು ವಾಗ್ಧಾಳಿ ನಡೆಸಿದರು.
 
ಗಂಭೀರವಾಗಿ ತೆಗೆದುಕೊಳ್ಳೊಲ್ಲ: ಸ್ವಾಭಿಮಾನ ಇರುವವರು ಖುರ್ಚಿಗೆ ಅಂಟಿಕೊಳ್ಳಬಾರದು. ಹಾಗಿದ್ದರೂ ನಾವು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಕುಮಾರಸ್ವಾಮಿಯು ರಾಜೀನಾಮೆ ನೀಡುವ ಹೇಳಿಕೆ ನೀಡಿದ್ದಾರೆ. ನಂತರ “ನಾನು ಹೇಳಿದ್ದು ಆ ಅರ್ಥದಲ್ಲಿ ಅಲ್ಲ ಬ್ರದರ್‌’ ಎಂದು ನಾಳೆ ಅವರೇ ಹೇಳಿಕೆ ಕೊಡಬಹುದು. ಇನ್ನೂ ಒಂದು ದಿನ ಕಾಯೋಣ. ನಾಳೆಯೂ ಕುಮಾರಸ್ವಾಮಿ ಇದೇ ರೀತಿ ಮಾತನಾಡಿದರೆ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳೋಣ ಎಂದು ವಿಧಾನಸೌಧದಲ್ಲಿನ ಬಿಜೆಪಿ ಶಾಸಕಾಂಗ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ  ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.