ಮಕ್ಕಳನ್ನು ಶಾಲೆಗೆ ಕಳುಹಿಸಿ ಸುಂದರ ಬದುಕು ರೂಪಿಸಿ


Team Udayavani, Jan 29, 2019, 7:24 AM IST

makkal.jpg

ಕೋಲಾರ: ಬಾಲ ಕಾರ್ಮಿಕ ಪದ್ಧತಿಯನ್ನು ನಿಮೂ ರ್ಲನೆ ಮಾಡಲು ಮೆಕಾನಿಕ್‌ಗಳು ಬದ್ಧತೆ ತೋರ ಬೇಕು, ನಿಮ್ಮ ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ವರ್ಕ್‌ಶಾಪ್‌ಗ್ಳಲ್ಲಿ ಕೆಲಸಕ್ಕೆ ಇಟ್ಟುಕೊಳ್ಳುವುದು ಸರಿಯಲ್ಲ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.

ನಗರದಲ್ಲಿ ಜಿಲ್ಲಾ ಮೆಕಾನಿಕ್‌ ಕ್ಷೇಮಾಭಿವೃದ್ಧಿ ಸಂಘ ದಿಂದ ಹಮ್ಮಿಕೊಂಡಿದ್ದ ಸಂಘದ ಉದ್ಘಾಟನೆ ಹಾಗೂ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಜೀವನ ರೂಪಿಸಿಕೊಳ್ಳಲು ಸಾಕ ಷ್ಟು ಮಾರ್ಗಗಳಿವೆ. ಆದರೆ ಅನಧಿಕೃತ ಚಟುವಟ ಕೆಗಳಲ್ಲಿ ಭಾಗಿಯಾಗಿ ಜೀವನ ರೂಪಿಸಿಕೊಳ್ಳುವುದ‌ರಲ್ಲಿ ನೆಮ್ಮದಿ ಇರುವುದಿಲ್ಲ. ಮಕ್ಕಳನ್ನು ಕೆಲಸಕ್ಕೆ ಕಳುಹಿ ಸುವುದು ಅಪರಾಧವೂ ಆಗಿದೆ ಎಂದು ಎಚ್ಚರಿಸಿದರು.

ಮಕ್ಕಳ ಬದುಕಿಗೆ ಕೊಳ್ಳಿ: ನಗರ ಪ್ರದೇಶದಲ್ಲಿ ಸಾಕಷ್ಟು ಮಂದಿ ಗ್ಯಾರೇಜ್‌ ಹಾಕಿಕೊಂಡು ಜೀವನ ನಡೆಸುತ್ತಿದ್ದಾರೆ. ನೀವೆಲ್ಲಾ ಸಂಘಟನೆಯಾಗಬೇಕಾದ ಅಗತ್ಯವಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸಲು ಆಗದೆ ಚಿಕ್ಕ ವಯಸ್ಸಿನಲ್ಲೇ ಅವರನ್ನು ಮೆಕಾನಿಕ್‌ ಕೆಲಸಕ್ಕೆ ಸೇರಿಸಿಕೊಳ್ಳುವುದರಿಂದ ಅವರ ಸುಂದರ ಬದುಕಿಗೆ ನೀವೇ ಕೊಳ್ಳಿಯಿಟ್ಟಂತಾಗುತ್ತದೆ ಎಂದರು.

ಭರವಸೆ: ಮೆಕಾನಿಕ್‌ಗಳು ಯಾವುದೇ ರೀತಿಯ ಶಿಕ್ಷಣ ಪಡೆದುಕೊಳ್ಳದೆ ಇದ್ದರು ವಾಹನದ ಬಿಡಿ ಭಾಗಗಳನ್ನು ಗುರುತಿಸುವ ಜ್ಞಾನ ಹೊಂದಿದ್ದಾರೆ. ತಾಲೂಕಿನ ನರಸಾಪುರ, ವೇಮಗಲ್‌ನಲ್ಲಿನ ಕೈಗಾರಿಕೆಗಳೊಂದಿಗೆ ಚರ್ಚಿಸಿ ಅಗತ್ಯ ಕೌಶಲ ತರಬೇತಿ ನೀಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಸಂಘದ ಗೌರವಾಧ್ಯಕ್ಷ ಕೆ.ವಿ.ಸುರೇಶ್‌ ಕುಮಾರ್‌, ಮೆಕಾನಿಕ್‌ಗಳು ಸಂಘಟನೆಯಾಗುವ ಮೂಲಕ ತಮಗೆ ದೊರೆಯಬೇಕಾದ ಸೌಕರ್ಯಪಡೆದುಕೊಳ್ಳಲು ಮುಂದಾಗಬೇಕು, ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳ ಸದುಪಯೋ ಗ ಪಡೆಯಬೇಕು ಎಂದು ಸಲಹೆ ನೀಡಿದರು.

ಸೌಕರ್ಯ ದೊರೆಯುವುದಿಲ್ಲ: ದೇಶದಲ್ಲಿ ಸಂಘಟಿತ ಕಾರ್ಮಿಕರಿಗೆ ಉದ್ಯೋಗದ ರಕ್ಷಣೆಯಿದೆ. ಮೆಕಾನಿಕ್‌, ಅಡುಗೆ, ಕಟ್ಟಡ ನಿರ್ಮಾಣ ಹಾಗೂ ಇತರೆ ನಿರ್ಮಾಣ ಕಾರ್ಮಿಕರೆಲ್ಲ ಅಸಂಘಟಿತ ವರ್ಗಕ್ಕೆ ಸೇರುತ್ತಾರೆ. ಇವರಿಗೆ ಉದ್ಯೋಗದ ರಕ್ಷಣೆಯಿಲ್ಲ. ಸರ್ಕಾರದಿಂದಲ್ಲೂ ಯಾವುದೇ ಸೌಕರ್ಯ ದೊರೆಯುವುದಿಲ್ಲ ಎಂದು ಹೇಳಿದರು.

ಅರಿವು ಅಗತ್ಯ: ಪರಿಸ್ಥಿತಿಯ ಸುಳಿಗೆ ಸಿಕ್ಕಿ ಮೆಕಾನಿಕ್‌ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ಯಾವ ಕ್ಷೇತ್ರದಲ್ಲೂ ಕೆಲಸ ಸಿಗದಿದ್ದರೆ ಕೊನೆಗೆ ಬರುವುದೇ ಮೆಕಾನಿಕ್‌ ಕೆಲಸ ಮಾಡಲು. ಇಲ್ಲಿ ಕೆಲಸ ಸುಲಭವಾಗಿ ದೊರೆಯುತ್ತದೆ. ಆದರೆ 18 ವರ್ಷ ಕೆಳಗಿನ ಬಾಲಕರನ್ನು ಗ್ಯಾರೇಜ್‌ಗಳಲ್ಲಿ ದುಡಿಸಿಕೊಳ್ಳುವುದು ಅಪರಾಧ. ಮಾಲೀಕರು ಕಾರ್ಮಿಕರಿಗಾಗಿ ಜಾರಿಯಾಗಿರುವ ಕಾನೂನು, ಹಕ್ಕುಗಳ ಬಗ್ಗೆ ಅರಿವು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.